• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ರಾಜ್ಯದಲ್ಲೇ ಮೊದಲು

ಪ್ರತಿಧ್ವನಿ by ಪ್ರತಿಧ್ವನಿ
January 25, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ರಾಜ್ಯದಲ್ಲೇ ಮೊದಲು
Share on WhatsAppShare on FacebookShare on Telegram

ಬೆಳಗಾವಿ : ಮೈಕ್ರೋ ಫೈನಾನ್ಸ್ ನೀಡುತ್ತಿರುವ ಕಿರುಕುಳಕ್ಕೆ ಸಿಲುಕಿ ಬಡ ಮಹಿಳೆಯರು ನಲುಗಿ ಹೋಗುತ್ತಿದ್ದಾರೆ. ಹಣ ಕಟ್ಟದ ಕುಟುಂಬಗಳನ್ನು ಮನೆಯಿಂದ ಹೊರಹಾಕಿ ಬೀಗ ಜಡಿಯುವ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಬೆಳಗಾವಿಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಬಾಣಂತಿ ಎನ್ನುವುದನ್ನು ನೋಡದೆ ಅಧಿಕಾರಿಗಳು ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ, ಫೈನಾನ್ಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮೊದಲು ಹೊರಹಾಕಿದ್ದ ಕುಟುಂಬವನ್ನು ಮರಳಿ ಗೂಡು ಸೇರಿಸುವ ಅಪರೂಪದ ಘಟನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರ ಸಾಕ್ಷಿಯಾಗಿದೆ.‌

ADVERTISEMENT

ಮೈಕ್ರೋ ಫೈನಾನ್ಸ್ ನಿಂದ ಮನೆ ಕಟ್ಟಲು ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಲೋಹಾರ್ ಕುಟುಂಬ ಐದು‌‌ ಲಕ್ಷ ಸಾಲ ಪಡೆದುಕೊಂಡಿತ್ತು.‌ ಕುಟುಂಬ ಸದಸ್ಯರ ಅನಾರೋಗ್ಯದ ಹಿನ್ನಲೆಯಲ್ಲಿ ಕೆಲ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. ಆದರೆ ಹೆಚ್ಚಿನ ಬಡ್ಡಿ ವಿಧಿಸಿ ಕೂಡಲೇ ಕಟ್ಟುವಂತೆ ತಕರಾರು ಎತ್ತಿದ್ದ ಫೈನಾನ್ಸ್ ಸಿಬ್ಬಂದಿ ಇಡೀ ಕುಟುಂಬವನ್ನು ಮನೆಯಿಂದ ಹೊರಹಾಕಿ ಬಾಗಿಲಿಗೆ ಬೀಗ ಜಡಿದಿದ್ದರು. ವಿಪರ್ಯಾಸವೆಂದರೆ ಹೆರಿಗೆ ನಂತರ ತಾಯಿ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದ ಬಾಣಂತಿಯನ್ನು ಮನೆಯಿಂದ ಆಚೆ ಹಾಕಲಾಗಿತ್ತು.

Lakshmihebbalkar :  ಮೈಕ್ರೋ ಫೈನಾನ್ಸ್ ಮೋಸ ಹೋಗಿದ್ದ ಕುಟುಂಬಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ನೆರವು.! #pratidhvani

ಈವರೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ‌ ಮನೆಯಿಂದ ಆಚೆ ಹೊರಬಿದ್ದ ಕುಟುಂಬಗಳು ವಾಪಸ್ ಮನೆಗೆ ಹೋಗಬೇಕಾದರೆ ಸಂಪೂರ್ಣ ಸಾಲ ಮರುಪಾವತಿಸಿ ಹೋಗಿರುವ ಉದಾಹರಣೆ ಮಧ್ಯೆ, ಓರ್ವ ಸಚಿವರೊಬ್ಬರು ಫೈನಾನ್ಸ್ ನವರನ್ನು ಬಗ್ಗಿಸಿ ನಿರಾಶ್ರಿತರ ಕುಟುಂಬಕ್ಕೆ ನೆರವಾಗಿದ್ದು ಇದೇ ಮೊದಲು. ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಕೂಡಾ ಅದೆಲ್ಲವನ್ನೂ ಲೆಕ್ಕಿಸದೆ ಕುಟುಂಬದ ಸಹಾಯಕ್ಕೆ ಧಾವಿಸಿದ್ದು ವಿಶೇಷ.

ಬೇರೆಡೆ ಅಧಿಕಾರಿಗಳು ಕಾನೂನಿನ ಮೂಲಕ ಕ್ರಮ ಕೈಗೊಳ್ಳುತ್ತೇನೆ ಎಂಬುದನ್ನು ಹೇಳುವುದು ಬಿಟ್ಟರೆ ಬೇರೆ ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಆದರೆ ರಾಜ್ಯದಲ್ಲಿ ಇದೇ ಮೊದಲಬಾರಿಗೆ ಸಚಿವರೊಬ್ಬರು ಮೈಕ್ರೋ ಫೈನಾನ್ಸ್ ಅವಾಂತರಕ್ಕೆ ತಕ್ಕ ಪ್ರತ್ಯುತ್ತರ ನೀಡಿ ಮೊದಲು ಅಮಾಯಕ ಜನರಿಗೆ ನ್ಯಾಯ ಒದಗಿಸಿಕೊಟ್ಟಿದ್ದು ಮೊದಲ ಪ್ರಕರಣ ಎಂದರೆ ತಪ್ಪಾಗಲಾರದು.

Tags: chief minister of karnatakaex- finance minister p chidambramLakshmi hebbalkarminister sadananda gowdaminister suresh angadiPrime Minister Narendra Modistate government is going to table 2 billssuresh angadi union ministerthe hindu analysis for law examsthe hindu daily analysisthe hindu december 3 to december 5the hindu editorial analysisthe hindu newspaper analysis december 2024union minister suresh angadi
Previous Post

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

Next Post

76ನೇ ಗಣರಾಜ್ಯೋತ್ಸವಕ್ಕೆ ಕರುನಾಡಿನಲ್ಲಿ ತಯಾರಿ ಹೇಗಿದೆ..?

Related Posts

ಯಾರು ಈ ಅಭಿಜೀತ್ ದಿಪ್ಕೆ? ಕೆಲವೇ ದಿನಗಳಲ್ಲಿ ವೈರಲ್ ಆದ ‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದಿರುವ ಯುವಕನ ಕಥೆ ಇಲ್ಲಿದೆ
Top Story

ಯಾರು ಈ ಅಭಿಜೀತ್ ದಿಪ್ಕೆ? ಕೆಲವೇ ದಿನಗಳಲ್ಲಿ ವೈರಲ್ ಆದ ‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದಿರುವ ಯುವಕನ ಕಥೆ ಇಲ್ಲಿದೆ

by ಪ್ರತಿಧ್ವನಿ
July 22, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ 'ಕಾಕ್ರೋಚ್ ಜನತಾ ಪಾರ್ಟಿ' (Cockroach Janata Party - CJP) ಹಿಂದೆ ನಿಂತಿರುವ ಪ್ರಮುಖ ವ್ಯಕ್ತಿ ಅಭಿಜೀತ್...

Read moreDetails
ಚೆನ್ನಮ್ಮ ಸಮಾಧಿ ಬಳಿ ಭಾವುಕ ಮಾತು; ಒಂದೂವರೆ ವರ್ಷದ ನೋವು ಹಂಚಿಕೊಂಡ ಕುಮಾರಸ್ವಾಮಿ

ಚೆನ್ನಮ್ಮ ಸಮಾಧಿ ಬಳಿ ಭಾವುಕ ಮಾತು; ಒಂದೂವರೆ ವರ್ಷದ ನೋವು ಹಂಚಿಕೊಂಡ ಕುಮಾರಸ್ವಾಮಿ

July 22, 2026
ಕಾಂಗ್ರೆಸ್ ಪಕ್ಷದ ಕಚೇರಿ ರಕ್ಷಣೆಗಾಗಿ ಕಾರ್ಯಕರ್ತರು ಪ್ರಾಣತ್ಯಾಗ ಮಾಡಲು ಸಿದ್ಧ-ಬಿ.ಕೆ ಹರಿಪ್ರಸಾದ್

ಕಾಂಗ್ರೆಸ್ ಪಕ್ಷದ ಕಚೇರಿ ರಕ್ಷಣೆಗಾಗಿ ಕಾರ್ಯಕರ್ತರು ಪ್ರಾಣತ್ಯಾಗ ಮಾಡಲು ಸಿದ್ಧ-ಬಿ.ಕೆ ಹರಿಪ್ರಸಾದ್

July 22, 2026
ಕಾವೇರಿ ನೀರು ಹಂಚಿಕೆ: ಮಳೆ ಸ್ಥಿತಿ ನೋಡಿದ ಬಳಿಕವೇ ಅಂತಿಮ ನಿರ್ಧಾರ

ಕಾವೇರಿ ನೀರು ಹಂಚಿಕೆ: ಮಳೆ ಸ್ಥಿತಿ ನೋಡಿದ ಬಳಿಕವೇ ಅಂತಿಮ ನಿರ್ಧಾರ

July 22, 2026
ನೀಟ್ ಪರೀಕ್ಷೆ ಅಕ್ರಮ: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ನೀಟ್ ಪರೀಕ್ಷೆ ಅಕ್ರಮ: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

July 22, 2026
Next Post
76ನೇ ಗಣರಾಜ್ಯೋತ್ಸವಕ್ಕೆ ಕರುನಾಡಿನಲ್ಲಿ ತಯಾರಿ ಹೇಗಿದೆ..?

76ನೇ ಗಣರಾಜ್ಯೋತ್ಸವಕ್ಕೆ ಕರುನಾಡಿನಲ್ಲಿ ತಯಾರಿ ಹೇಗಿದೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada