• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

MB Patil: ರಂಗಸನ್ಸ್ ಏರೋಸ್ಪೇಸ್ ನೂತನ ಕಚೇರಿಗೆ ಸಚಿವ ಎಂ ಬಿ ಪಾಟೀಲ ಚಾಲನೆ..!!

ಬೋಯಿಂಗ್ ಜತೆಗಿನ ಸಹಭಾಗಿತ್ವ ದೊಡ್ಡ ಮೈಲಿಗಲ್ಲು

ಪ್ರತಿಧ್ವನಿ by ಪ್ರತಿಧ್ವನಿ
October 29, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ADVERTISEMENT

ಪ್ರತಿಷ್ಠಿತ ಬೋಯಿಂಗ್ ಕಂಪನಿಯೊಂದಿಗೆ ಸಹಭಾಗಿತ್ವ ಸ್ಥಾಪಿಸಿಕೊಂಡಿರುವ ಇಲ್ಲಿನ ರಂಗಸನ್ಸ್ ಏರೋಸ್ಪೇಸ್ ಕಂಪನಿಯ ನೂತನ ಮತ್ತು ಅತ್ಯಾಧುನಿಕ ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಜೊತೆಗೆ, ಕಂಪನಿಯಿಂದ ಕೌಶಲ್ಯ ತರಬೇತಿ ಪಡೆದ 60 ಐಟಿಐ ಪದವೀಧರರಿಗೆ ಅವರು ಪ್ರಮಾಣಪತ್ರ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಒಂದು ಕಾಲದಲ್ಲಿ ಅಗರಬತ್ತಿ ವ್ಯಾಪಾರ ಮಾಡುತ್ತಿದ್ದ ಸ್ಥಳೀಯರಾದ ರಂಗಸನ್ಸ್ ಪರಿವಾರದವರು ಈಗ ಏರೋಸ್ಪೇಸ್ ಕ್ಷೇತ್ರದಲ್ಲಿ ಛಾಪು ಮೂಡಿಸಿರುವುದು ಮೈಲಿಗಲ್ಲಾಗಿದೆ. ಮೊದಲಿನಿಂದಲೂ ಇದ್ದ ಸ್ಥಾವರದ ಪಕ್ಕದಲ್ಲೇ ನೂತನ ಕಚೇರಿಯನ್ನು ನಿರ್ಮಿಸಿಕೊಂಡಿರುವುದು ಗಮನಾರ್ಹವಾಗಿದೆ. ವೈಮಾಂತರಿಕ್ಷ ಕ್ಷೇತ್ರದಲ್ಲಿ ಇವರಿಗೆ ಬೇಕಾದ ಎಲ್ಲ ಸಹಕಾರವನ್ನೂ ಕೈಗಾರಿಕೆ ಇಲಾಖೆ ಕೊಡುತ್ತದೆ. ನೂತನ ಘಟಕವು ವಿಸ್ತಾರ, ವಿನ್ಯಾಸ ಮತ್ತು ಮಹತ್ತ್ವಾಕಾಂಕ್ಷೆ ಮೂರರಲ್ಲೂ ಜಾಗತಿಕ ಮಟ್ಟದಲ್ಲಿರುವುದು ಖುಷಿಯ ಸಂಗತಿಯಾಗಿದೆ’ ಎಂದಿದ್ದಾರೆ.

ರಂಗಸನ್ಸ್ ಏರೋಸ್ಪೇಸ್ ಜತೆ ಬೋಯಿಂಗ್ ಕಂಪನಿ ಕೈಜೋಡಿಸಿರುವುದು ಅಭಿನಂದನಾರ್ಹವಾಗಿದೆ. ಇಲ್ಲಿ ಅತ್ಯಾಧುನಿಕ ಉತ್ಪಾದನಾ ವಿಧಾನ ಮತ್ತು ಆಧುನಿಕ ಎಂಜಿನಿಯರಿಂಗ್ ಪ್ರಯೋಗಾಲಯಗಳೆಲ್ಲ ಇವೆ. ರಂಗಸನ್ಸ್ ಕಂಪನಿಯು ಜಾಗತಿಕ ಗುಣಮಟ್ಟಕ್ಕೆ ತಕ್ಕಂತೆ ಪ್ರಿಸಿಷನ್ ಉತ್ಪಾದನೆಯಲ್ಲಿ ತೊಡಗಿರುವುದು ಯಶಸ್ಸಿಗೆ ಒಂದು ದೊಡ್ಡ ಉದಾಹರಣೆಯಾಗಿದೆ. ನಮ್ಮಲ್ಲಿರುವ ಏರೋಸ್ಪೇಸ್ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು ಸಮರ್ಥವಾಗಿವೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಬೇಕಿಲ್ಲ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈಮಾಂತರಿಕ್ಷ ವಲಯದಲ್ಲಿ ಕೌಶಲ್ಯ ತರಬೇತಿ ನಿರ್ಣಾಯಕವಾಗಿದೆ. ರಂಗಸನ್ಸ್ ಏರೋಸ್ಪೇಸ್ ಈ ಕೆಲಸ ಮಾಡುತ್ತಿರುವುದು ಒಳ್ಳೆಯದು. ಇಲ್ಲಿ ತರಬೇತಿ ಪಡೆದವರ ಪೈಕಿ ಶೇಕಡ 70ರಷ್ಟು ಜನರಿಗೆ ಕಂಪನಿಯೇ ಕೆಲಸ ಕೊಡುತ್ತಿರುವುದು ಸ್ವಾಗತಾರ್ಹವಾಗಿದ್ದು, ಇದರಿಂದ ಯುವಜನರಿಗೆ ಮನೆಬಾಗಿಲಲ್ಲೇ ಅವಕಾಶಗಳು ಸಿಗುತ್ತವೆ. ಇಂತಹ ಜಂಟಿ ಉಪಕ್ರಮಗಳಿಗೆ ಸರಕಾರವೂ ಬೆಂಬಲ ಕೊಡಲಿದೆ . ದೇಶದ ಏರೋಸ್ಪೇಸ್ ಮತ್ತು ರಕ್ಷಣಾ ವಲಯದ ವಹಿವಾಟಿನಲ್ಲಿ ಕರ್ನಾಟಕದ ಪಾಲು ಶೇ.65ರಷ್ಟಿದೆ. ರಂಗಸನ್ಸ್ ಕಂಪನಿಯ ಹೊಸ ಹೆಜ್ಜೆಯು ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಒಳ್ಳೆಯ ಸಂಕೇತವಾಗಿದೆ ಎಂದು ಅವರು ನುಡಿದಿದ್ದಾರೆ.

ರಾಜ್ಯವು ಏರೋಸ್ಪೇಸ್ ವಲಯಕ್ಕೆ ಬೇಕಾದ ಪೂರೈಕೆದಾರರ ಸರಪಳಿ, ಆರ್ & ಡಿ ಸಂಸ್ಥೆಗಳು, ಎಂಜಿನಿಯರಿಂಗ್ ಪ್ರತಿಭೆಯ ತಾಣವಾಗಿದೆ. ಹೀಗಾಗಿ ಕರ್ನಾಟಕವು ಈ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ಅಗ್ರಸ್ಥಾನದಲ್ಲಿದೆ. ರಂಗಸನ್ಸ್ ಮತ್ತು ಬೋಯಿಂಗ್ ಸಹಭಾಗಿತ್ವವು ಇದಕ್ಕೆ ಮತ್ತಷ್ಟು ಶಕ್ತಿ ತುಂಬಿದೆ. ನಮ್ಮ ಯುವಜನರನ್ನು ಇಂತಹ ಉದ್ಯಮಕ್ಷೇತ್ರಗಳಿಗೆ ಸಜ್ಜುಗೊಳಿಸುವುದರ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಆಗಮಾತ್ರ ನಾವು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿ, ಸ್ಪರ್ಧೆಯನ್ನು ಎದುರಿಸಬಹುದು ಎಂದು ಪಾಟೀಲ ಅಭಿಪ್ರಾಯ ಪಟ್ಟರು.

ಇದೇ ಸಂದರ್ಭದಲ್ಲಿ ಅವರು ನೂತನ ಘಟಕದ ಹಲವು ವ್ಯವಸ್ಥೆಗಳನ್ನು ವೀಕ್ಷಿಸಿದರು.
ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಈ ಸಂದರ್ಭದಲ್ಲಿ ಇದ್ದರು.

ಕಾರ್ಯಕ್ರಮದಲ್ಲಿ ರಂಗಸನ್ಸ್ ಏರೋಸ್ಪೇಸ್ ಸಿಇಒ ಪವನ್ ರಂಗ, ಬೋಯಿಂಗ್ ಕಂಪನಿಯ ಹಿರಿಯ ನಿರ್ದೇಶಕ ಅಶ್ವನಿ ಭಾರ್ಗವ, ಬೋಯಿಂಗ್ ನ ಇತರ ಅಧಿಕಾರಿಗಳಾದ ಮೋಹನದಾಸ್ ಪಿಳ್ಳೈ, ಗಣಪತಿ ಹೆಬ್ಬಾರ್ ಉಪಸ್ಥಿತರಿದ್ದರು.

Tags: 60 seconds mb patilbm patilM B PatilMB Patilmb patil 60 secondsmb patil angrymb patil bhashanmb patil bijapurmb patil congressmb patil familymb patil fansmb patil housemb patil latestmb patil latest mewsmb patil latest newsmb patil meetingmb patil mlamb patil newsmb patil on yatnalmb patil press meetmb patil sonmb patil songmb patil speechmb patil supportersmb patil today newsmb patil videomb patil videosmbpatilMinister MB Patilyatnal vs mb patil
Previous Post

MB Patil: ಕೇನ್ಸ್ ಟೆಕ್ನಾಲಜೀಸ್ ವಿಸ್ತರಣೆಗೆ ಚಾಮರಾಜನಗರದಲ್ಲಿ 20 ಎಕರೆ ಭೂಮಿ: ಎಂ ಬಿ ಪಾಟೀಲ

Next Post

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

Related Posts

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’
ಕರ್ನಾಟಕ

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

by ಪ್ರತಿಧ್ವನಿ
November 18, 2025
0

ಬೆಳಗಾವಿ: ರಾಜ್ಯ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸತೀಶ್, ಸಂಪುಟ ಪುನಾರಚನೆ...

Read moreDetails
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
Next Post

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada