• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಂದೆಯವರ ಶಾಲೆಗೆ ನೆರವು ನೀಡಿದ ಸಚಿವ ಮಧು ಬಂಗಾರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
April 19, 2025
in ಕರ್ನಾಟಕ, ರಾಜಕೀಯ, ಸ್ಟೂಡೆಂಟ್‌ ಕಾರ್ನರ್
0
ತಂದೆಯವರ ಶಾಲೆಗೆ ನೆರವು ನೀಡಿದ ಸಚಿವ ಮಧು ಬಂಗಾರಪ್ಪ
Share on WhatsAppShare on FacebookShare on Telegram

ADVERTISEMENT

ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳನ್ನು ಹಳೆಯ ಅಲ್ಯೂಮಿನಿಯಮ್ ಪಾತ್ರೆಗಳ ಬದಲಿಗೆ ಒದಗಿಸಲಾಗುವುದು: ಸಚಿವ ಮಧು ಬಂಗಾರಪ್ಪ.

  • ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳು
  • ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ಪ್ರಯತ್ನ
  • ಎಲ್.ಕೆ.ಜಿ. ಶಾಲೆಗಳ ಪ್ರಾರಂಭ
  • ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಉಚಿತ ವಿದ್ಯುತ್ ಸೌಲಭ್ಯ
  • ತಂದೆಯವರ ಶಾಲೆಗೆ ನೆರವು
  • ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ
  • ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ:

ಬಿಳಾಗಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ನವರು ಇಂದು ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಮ್ಮ ಸರ್ಕಾರದ ಬದ್ಧತೆಯನ್ನು ವ್ಯಕ್ತಪಡಿಸಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ

ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳು:

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ, ಹಾಗಾಗಿ ಹಳೆಯ ಪಾತ್ರೆಗಳನ್ನ ಬದಲಾಯಿಸಲಾಗುವುದು ಎಂದು ಹೇಳಿದರು.

ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ಪ್ರಯತ್ನ

Ravi Krishna Reddy on S R Hiremath : ಎಸ್.ಆರ್.ಹಿರೇಮಠ ಜೊತೆ KRS ಪಕ್ಷದ ನಾಯಕ ರವಿಕೃಷ್ಣಾರೆಡ್ಡಿ ಮಾತುಕತೆ..!

ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಮನೋಭಾವವನ್ನು ಹೆಚ್ಚಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ದೇವಸ್ಥಾನಗಳಲ್ಲಿ ಪ್ರಾರಂಭವಾದ ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕ ಮಹಾನ್ ವ್ಯಕ್ತಿಗಳು ರಾಜ್ಯದ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ.

ತಮ್ಮ ತಂದೆ ಶ್ರೀ ಬಂಗಾರಪ್ಪನವರು ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಸಹ ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಎಂದು ಅವರು ಸ್ಮರಿಸಿದರು.

ಎಲ್.ಕೆ.ಜಿ. ಶಾಲೆಗಳ ಪ್ರಾರಂಭ:

ಮುಂದಿನ ದಿನಗಳಲ್ಲಿ ಎಲ್.ಕೆ.ಜಿ. ಶಾಲೆಗಳನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ. ಅಂಗನವಾಡಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಈ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಉಚಿತ ವಿದ್ಯುತ್ ಸೌಲಭ್ಯ:

ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಟಿವಿಗಳ ಬಳಕೆಯನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಮಾರು 46,000 ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ.

ಇದರಿಂದ ಮಕ್ಕಳು ಸ್ಮಾರ್ಟ್ ಕ್ಲಾಸ್ ಗಳ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಸಚಿವರು ಹೇಳಿದ ಸಚಿವ

ತಂದೆಯವರ ಶಾಲೆಗೆ ನೆರವು:

ತಮ್ಮ ತಂದೆ ಶ್ರೀ ಬಂಗಾರಪ್ಪನವರು ಓದಿದ ಸರ್ಕಾರಿ ಶಾಲೆಗೆ ತಮ್ಮ ಸಂಬಳದಿಂದ 10 ಲಕ್ಷ ರೂಪಾಯಿಗಳನ್ನು ನೀಡಿದ್ದಾಗಿ ತಿಳಿಸಿದ ಸಚಿವ ಎಸ್. ಮಧು ಬಂಗಾರಪ್ಪ

ಅದೇ ರೀತಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಓದಿದ ಎರಡು ಸರ್ಕಾರಿ ಶಾಲೆಗಳಿಗೂ ತಲಾ 10 ಲಕ್ಷ ರೂಪಾಯಿಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ

ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ:

ಜನರಿಗೆ ಅನುಕೂಲವಾಗುವಂತೆ ಈ ವರ್ಷ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.

ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ:

ಈ ಬಾರಿ ಪರೀಕ್ಷೆಗಳಲ್ಲಿ ನಕಲು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರಿಂದ ಉತ್ತೀರ್ಣ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಆದರೆ ಮಕ್ಕಳ ಗುಣಮಟ್ಟ ಹೆಚ್ಚಾಗಬೇಕು ಎಂಬುದು ಸರ್ಕಾರದ ಉದ್ದೇಶ.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಮಾದರಿಯನ್ನು ದೇಶದ ಹಲವು ರಾಜ್ಯಗಳು ಅನುಸರಿಸುತ್ತಿವೆ ಎಂದು ಸಚಿವರು ಹೇಳಿದರು.

ಸಚಿವ ಮಧು ಬಂಗಾರಪ್ಪ. ರಿಂದ ಪೋಷಕರಿಗೆ ಕರೆ:

ಪೋಷಕರು ತಮ್ಮ ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕಳುಹಿಸಬೇಕು ಮತ್ತು ಅವರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು. ಒಂದು ದಿನ ಶಾಲೆಗೆ ಗೈರು ಹಾಜರಾದರೆ, ಆ ದಿನವನ್ನು ಮಗು ಮತ್ತೆ ಪಡೆಯಲು ಸಾಧ್ಯವಿಲ್ಲ .

ಸರ್ಕಾರಿ ಶಾಲಾ ಶಿಕ್ಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಪ್ರೇರೇಪಿಸಬೇಕು ಮತ್ತು ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳಿಸಬೇಕು ಎಂದು ಸಚಿವರು ತಿಳಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕುಎಂದು ಕರೆ ಕೊಟ್ಟ ಸಿ.ಎಂ ಸಿದ್ದರಾಮಯ್ಯ

Next Post

ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ ಸಚಿವ ಎನ್‌ ಎಸ್‌ ಭೋಸರಾಜು

Related Posts

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ
Top Story

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಸಿಐಡಿ(CID )ಸೈಬರ್ ಕ್ರೈಂ( Cyber Crime) ವಿಭಾಗ ಭಾರೀ ಕಾರ್ಯಾಚರಣೆ ನಡೆಸಿದೆ. ಮ್ಯೂಲ್ ಅಕೌಂಟ್‌ಗಳ ಮೂಲಕ...

Read moreDetails
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Next Post
ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ  ಸಚಿವ ಎನ್‌ ಎಸ್‌ ಭೋಸರಾಜು

ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ ಸಚಿವ ಎನ್‌ ಎಸ್‌ ಭೋಸರಾಜು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada