
ವಯನಾಡಿನ ಹಲವು ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ರಕ್ಷಣಾ ಕಾರ್ಯದ ಮಾಹಿತಿ ಪಡೆದ ಸಚಿವ ಲಾಡ್

ವಯನಾಡು, ಕೇರಳ – 31 ಜುಲೈ –
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಗುಡ್ಡ ಕುಸಿತ ದುರಂತ ನಡೆದ ಕೇರಳದ ವಯನಾಡಿಗೆ ತೆರಳಿರುವ ಸಚಿವ ಸಂತೋಷ್ ಲಾಡ್ ಅವರು ಹಲವು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿದರು.

ರಕ್ಷಣಾ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ದುರಂತದಲ್ಲಿ ಸಿಲುಕಿರುವ ಹಾಗೂ ನಾಪತ್ತೆಯಾಗಿರುವ ಕನ್ನಡಿಗರ ಮಾಹಿತಿ ಪಡೆದು, ಅಗತ್ಯ ಸೂಚನೆಗಳನ್ನು ನೀಡಿದರು. ಅಲ್ಲದೇ ರಕ್ಷಣಾ ಪಡೆಗಳಿಂದ ಸಹ ಮಾಹಿತಿಗಳನ್ನು ಪಡೆದರು.

ಕೇರಳ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿರುವ ಸಚಿವರು, ಕನ್ನಡಿಗರ ರಕ್ಷಣೆಗೆ ಬೇಕಾದ ವ್ಯವಸ್ಥೆಗಳನ್ನು ಶೀಘ್ರವಾಗಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.






