• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ

ಪ್ರತಿಧ್ವನಿ by ಪ್ರತಿಧ್ವನಿ
December 18, 2024
in Top Story, ಇತರೆ / Others, ಕರ್ನಾಟಕ
0
ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ
Share on WhatsAppShare on FacebookShare on Telegram

ಧಾರವಾಡ: ಹುಬ್ಬಳ್ಳಿ ಧಾರವಾಡ ನಡುವೆ ಲೈಟ್‌ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನ ವಾಹನ ತಯಾರಿಕಾ ಕಂಪನಿ ಹೆಸ್‌ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು.

ADVERTISEMENT

ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ ಹೆಸರು ಪಡೆದಿದ್ದು, ಎರಡೂ ನಗರಗಳ ನಡುವೆ ಸಾಕಷ್ಟು ಪ್ರಯಾಣಿಕರು ಪ್ರತಿ ದಿನ ಪ್ರಯಾಣಿಸುತ್ತಾರೆ.ಇಲ್ಲಿ ಸುಸ್ಥಿರ ಸಾರಿಗೆ ಆರಂಭಿಸಿದರೆ ಸಾಕಷ್ಟು ಪ್ರಯೋಜನವಾಗಲಿದೆ ಎಂಬುದು ಸಂತೋಷ್‌ ಲಾಡ್‌ ಅವರ ಆಲೋಚನೆಯಾಗಿದೆ.

ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಇಂಧನ ಲಭ್ಯತೆ ಮೇರೆ ಕೇಂದ್ರಿಕರಿಸಿ, ಪ್ರಯಾಣಿಕರ ಅನುಕೂಲವನ್ನು ಮುಖ್ಯಗುರಿಯಾಗಿರಿಸಿಕೊಂಡು, ಪ್ರಯಾಣಿಕಸ್ನೇಹಿ ಮತ್ತು ಆದಾಯ ಮತ್ತು ಖರ್ಚುಗಳನ್ನು ನೋಡಿಕೊಂಡು ಸಾರಿಗೆ ವ್ಯವಸ್ಥೆ ಅಳವಡಿಸಬೇಕು ಎಂಬುದು ಲಾಡ್‌ ಅವರ ದೂರದೃಷ್ಟಿಯಾಗಿದೆ.ಈ ನಿಟ್ಟಿನಲ್ಲಿ ಅವರು ಫ್ರಾನ್ಸ್ ಪ್ರವಾಸದಲ್ಲಿ ಹೆಸ್‌ ಕಂಪನಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ.

HESS ಸ್ವಿಟ್ಜರ್ಲೆಂಡ್‌ನ ವಾಹನ ತಯಾರಿಕಾ ಕಂಪನಿಯಾಗಿದ್ದು, ಇದು ಕಳೆದ 138 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ, ಟ್ರಾಮ್‌ಗಳು ಮತ್ತು ಎಲೆಕ್ಟ್ರಿಕ್ ಬಸ್‌ಗಳಂತಹ ಸಾರಿಗೆ ವಾಹನಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡಿದೆ.

ಸಾರಿಗೆ ಕ್ಷೇತ್ರದಲ್ಲಿ ಸಾಕಷ್ಟು ಪ್ರಯೋಗಗಳು ಪ್ರತಿ ದಿನ ನಡೆಯುತ್ತಿವೆ. ಎಲ್ಲಾ ನಗರಗಳಿಗೆ ಎಲ್ಲಾ ರೀತಿಯ ಸಾರಿಗೆ ಹೊಂದಿಕೆಯಾಗುವುದಿಲ್ಲ. ಇಂತಹ ತೊಡಕನ್ನು ಗಮನದಲ್ಲಿಟ್ಟುಕೊಂಡೇ ಸಚಿವ ಲಾಡ್‌ ಅವರು ಲೈಟ್‌ ಟ್ರಾಮ್ ನಂತಹ ಸಾರಿಗೆ ಆರಂಭಿಸಲು ಮುಂದಾಗಿದ್ದಾರೆ.

Santhosh Lad: ಲೈಟ್‌ ಟ್ರಾಮ್ ಸಾರಿಗೆ ಅನುಷ್ಠಾನಕ್ಕೆ ಕೂಡಿ ಬಂತಾ ಕಾಲ.?#France #HESS #LighTram

ಇಂತಹ ಸಾರಿಗೆ ಉಪಕ್ರಮಗಳು ಜನರಿಗೆ ಬೇಗ ದೊರೆಯಬೇಕು, ಸುರಕ್ಷತೆಗೆ ಆದ್ಯತೆ ನೀಡಬೇಕು, ಸರ್ಕಾರ ಮತ್ತು ಪ್ರಯಾಣಿಕರಿಗೆ ಹೊರೆಯಾಗಬಾರದು ಎಂಬುದು ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಲೈಟ್‌ ಟ್ರಾಮ್ ಹುಬ್ಬಳ್ಳಿ- ಧಾರವಾಡ ನಡುವೆ ಅತ್ಯಂತ ಸೂಕ್ತವಾಗಲಿದೆ ಎಂಬ ಚಿಂತನೆ ಸಚಿವ ಲಾಡ್‌ ಅವರದು. ಪ್ರಸ್ತುತ ಇರುವ ಬಿ ಆರ್ ಟಿಎಸ್ ವ್ಯವಸ್ಥೆ ಬಹಳ ಅವ್ಯವಸ್ಥೆಯನ್ನು ಹುಟ್ಟುಹಾಕಿದ್ದು, ಸಾರ್ವಜನಿಕ ವಲಯದಲ್ಲಿ ಅಷ್ಟೊಂದು ಸಮಾಧಾನ ತಂದಿಲ್ಲ. ಹೀಗಾಗಿ ಹುಬ್ಬಳ್ಳಿ-ಧಾರವಾಡ ನಗರಗಳ‌ ಮಧ್ಯೆ ಮೆಟ್ರೋ ರೈಲು, ಮೋನೋ ರೈಲು ಅಥವಾ ಟ್ರಾಮ್ ಸೇವೆ ಆರಂಭಿಸುವಂತೆ ಚರ್ಚೆಗಳು ಆರಂಭವಾಗಿವೆ.

ಲಾಡ್ ಅವರು ಭೇಟಿ ನೀಡಿದ್ದ HESS ಲೈಟ್‌ ಟ್ರಾಮ್ ಗಳು ವಿದ್ಯುತ್ ಮೂಲಕ ಚಲಿಸುತ್ತವೆ‌. ಇದು ಸಾಂಪ್ರದಾಯಿಕ ಡೀಸೆಲ್ ಚಾಲಿತ ಬಸ್‌ಗಳಿಗೆ ಹೋಲಿಸಿದರೆ ವಾಯಮಾಲಿನ್ಯವನ್ನು ಗಣನೀಯವಾಗಿ ಕಡಿಮೆ ಮಾಡಿ ವಾಯುಗುಣಮಟ್ಟಕ್ಕೆ ಧನಾತ್ಮಕ ಕೊಡುಗೆ ನೀಡುತ್ತದೆ ಮತ್ತು ಹವಾಮಾನ ಬದಲಾವಣೆಯನ್ನು ಎದುರಿಸಲು ಸಹಾಯ ಮಾಡುತ್ತದೆ.

ಸಾರಿಗೆ ಎಂದಾಕ್ಷಣ ಹೇಗೆ ಮಾಲಿನ್ಯಕಾರಕವೊ ಅದೇ ರೀತಿ ಶಬ್ದವನ್ನೂ ಉಂಟು ಮಾಡುತ್ತದೆ ಎಂಬ ಭಾವನೆ ನಮ್ಮೆಲ್ಲರಲ್ಲಿ ಬರುವುದು ಸಾಮಾನ್ಯ. ಆದರೆ ಲೈಟ್‌ ಟ್ರಾಮ್ ಆಂತರಿಕ ದಹನಕಾರಿ ಎಂಜಿನ್ ಹೊಂದಿರುವ ವಾಹನಗಳಿಗಿಂತ ನಿಶ್ಯಬ್ದವಾಗಿದೆ. ಇದು ನಗರ ಪ್ರದೇಶಗಳಲ್ಲಿ ಶಬ್ದ ಮಾಲಿನ್ಯ ಕಡಿಮೆ ಮಾಡುತ್ತದೆ. ಇದರಿಂದ ನಗರದ ನಿವಾಸಿಗಳ ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತದೆ.

Santhosh Lad: ಬಿಜೆಪಿ‌ ಶಾಸಕರ ವಿರುದ್ದ ಆಕ್ರೋಶ ‌ವ್ಯಕ್ತಪಡಿಸಿದ ಸಚಿವ ಸಂತೋಷ ಲಾಡ್..! #santhoshlad #bjpprotest

ರಿಯಲ್‌ ಟೈಮ್‌ ಟ್ರ್ಯಾಕಿಂಗ್ ವ್ಯವಸ್ಥೆಗಳು, ವೈ-ಫೈ ಸಂಪರ್ಕ ಮತ್ತು ಶಕ್ತಿ-ಸಾಮರ್ಥ್ಯ HVAC ವ್ಯವಸ್ಥೆ ಇದರಲ್ಲಿವೆ. ವಿದೇಶಗಳಲ್ಲಿನ ಅತ್ಯಾಧುನಿಕ ಸಾರಿಗೆ ವ್ಯವಸ್ಥೆಗಳನ್ನು ನೋಡಿದರೆ ನಮ್ಮಲ್ಲೂ ಇಂತಹದು ಇದ್ದರೆ ಎಷ್ಟೊಂದು ಚೆನ್ನಾಗಿರುತ್ತಿತ್ತು ಎಂಬ ಭಾವನೆ ಮೂಡುವುದು ಸಹಜ. ಆದರೆ ನಾವು ಅಂದುಕೊಂಡಷ್ಟು ಎಲ್ಲವೂ ಸುಲಭವಲ್ಲ. ಆದರೆ ಸರ್ಕಾರ ಮನಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಇದಕ್ಕೊಂದು ಒಳ್ಳೆಯ ಅಧ್ಯಯನ, ಪರಿಣತರ ಸಲಹೆ, ಸೂಕ್ತ ಮಾರ್ಗದರ್ಶನ ಸಿಕ್ಕರೆ ಎಲ್ಲವೂ ಸಾಧ್ಯವಾಗುತ್ತದೆ.

ಈ ನಿಟ್ಟಿನಲ್ಲಿ ಸಚಿವ ಸಂತೋಷ್‌ ಲಾಡ್‌ ಅವರ ಅಧ್ಯಯನ ಮತ್ತು ಅವರ ಮುಂದಾಲೋಚನೆ ಹುಬ್ಬಳ್ಳಿ- ಧಾರವಾಡ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಮುಂದಿನ ದಿನದಲ್ಲಿ ಹೇಗೆ ಉಪಯೋಗವಾಗಲಿವೆ ಎಂಬ ನಿರೀಕ್ಷೆ ಮೂಡಿವೆ.

Tags: (HESS)138 yearsCongress PartyDharwadHubli and Dharwad.HVAC system.minister santosh ladSwiss automobileWi-Fi connectivity
Previous Post

ಜಮ್ಮು | ಬೆಂಕಿ ಅವಘಡ:ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

Next Post

ಭ್ರಷ್ಟಾಚಾರ ; ಜಿಎಸ್‌ಟಿ ಕಮಿಷನರೇಟ್‌ನ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಸಹಾಯಕ ಆಯುಕ್ತ , ಇನ್ಸ್‌ಪೆಕ್ಟರ್ ಬಂಧಿಸಿದ ಸಿಬಿಐ

Related Posts

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
0

ಭಾರತೀಯರಿಗೆ ಕ್ರಿಕೆಟ್‌ ಎನ್ನುವುದು ಕೇವಲ ಆಟವಲ್ಲ ಅದೊಂದು ಭಾವನಾತ್ಮಕ ಸಂಬಂಧ. ದೇಶದ ಕೋಟ್ಯಂತರ ಜನರ ನಾಡಿಮಿಡಿತದಲ್ಲಿ ಕ್ರಿಕೆಟ್‌ ಸೇರಿಕೊಂಡಿದ್ದು, ಯುದ್ಧ ಹೊರತು ಪಡಿಸಿದರೆ ಬಹುಶಃ ಭಾರತೀಯರೆಲ್ಲಾ ಒಗ್ಗೂಡುವುದು...

Read moreDetails

November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
Next Post
ಭ್ರಷ್ಟಾಚಾರ ;  ಜಿಎಸ್‌ಟಿ ಕಮಿಷನರೇಟ್‌ನ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಸಹಾಯಕ ಆಯುಕ್ತ , ಇನ್ಸ್‌ಪೆಕ್ಟರ್ ಬಂಧಿಸಿದ ಸಿಬಿಐ

ಭ್ರಷ್ಟಾಚಾರ ; ಜಿಎಸ್‌ಟಿ ಕಮಿಷನರೇಟ್‌ನ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಸಹಾಯಕ ಆಯುಕ್ತ , ಇನ್ಸ್‌ಪೆಕ್ಟರ್ ಬಂಧಿಸಿದ ಸಿಬಿಐ

Recent News

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

November 3, 2025

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada