ರಾಜ್ಯದ ಉಪಚುನಾವಣೆಯ ಫಲಿತಾಂಶ (Bypoll results) ಹೊರಬಂದಿದ್ದು, ಮೂರಕ್ಕೆ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ನಂತರ ಸಿಎಂ (Cm) ಕೊಂಚ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದು, ಇದರ ಬೆನ್ನಲ್ಲೇ ಈಗ ರಾಜ್ಯ ಸರ್ಕಾರದಲ್ಲಿ ಸಂಪುಟ ಪುನಾರಚನೆಯ ಕಸರತ್ತು ಶುರುವಾದಂತಿದೆ.
ಇದೀಗ ಕೆಲವೊಂದು ಸಚಿವರ (Ministers)ಎದೆಯಲ್ಲಿ ಢವ ಢವ ಶುರುವಾಗಿದ್ದು, ಈ ಮಧ್ಯೆ ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ (Satish jarakiholi) ಹೇಳುವ ಮೂಲಕ ಆಪರೇಷನ್ ಸಂಪುಟದ ಸುಳಿವು ಕೊಟ್ಟಿದ್ದಾರೆ.

ಇನ್ನೇನು ಆರಂಭವಾಗಲಿರುವ ಬೆಳಗಾವಿಯ ಚಳಿಗಾಲದ ಅಧಿವೇಶನದ (Winter session) ನಂತರ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದ್ದು, ಎಲ್ಲಾ ಹೈಕಮಾಂಡ್ ನಾಯಕರ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಕಿದ್ದಾರೆ.
ಇನ್ನು ಇದೇ ವೇಳೆ ಕೆಪಿಸಿಸಿ (KPCC) ಅಧ್ಯಕ್ಷ ಗಾದಿಯ ಬಗ್ಗೆ ಮಾತನಾಡಿದ ಸಚಿವರು, ಅಧ್ಯಕ್ಷ ಸ್ಥಾನಕ್ಕಾಗಿ ತಾವು ಆಕಾಂಕ್ಷಿಯೂ ಅಲ್ಲ ಮತ್ತು ಅಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ರಾಜ್ಯದಲ್ಲಿ ಅಥವಾ ದೆಹಲಿ ಮಟ್ಟದಲ್ಲಿ ನಡೆದಿಲ್ಲ ಎಂದರು.






