ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಕುರಿತು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರೆ ಅಲ್ಲಿ ಮುಖ್ಯ ಠಾಣಾಧಿಕಾರಿ (SHO) ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶ ಲಲಿತ್ಪುರದಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಠಾಣಾಧಿಕಾರಿ ಸೇರಿದಂತೆ ಐವರ ವಿರುದ್ದ ಎಫ್ಐಆರ್(FIR)ಅನ್ನು IPC ಸೆಕ್ಷನ್ 363(ಅಪಹರಣ), 376(ಅತ್ಯಾಚಾರ), 376B(ತನ್ನ ವಶದಲ್ಲಿದ್ದ ಮಹಿಳೆಯೊಂದಿಗೆ ಸರ್ಕಾರಿ ಅಧಿಕಾರಿ ಸಂಭೋಗ), 120B(ಪಿತೂರಿ), ಪೋಕ್ಸೋ ಹಾಗೂ ಎಸ್ಸಿ/ಎಸ್ಟಿ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ.
ಪ್ರಸ್ತುತ ಪೊಲೀಸ್ ಅಧಿಕಾರಿಯನ್ನು ತಲೆಮಾರಿಸಿಕೊಂಡಿದ್ದು ತೀವ್ರ ಶೋಧ ನಡೆದಿದೆ ಮತ್ತು ಅಧಿಕಾರಿಯನ್ನು ಸೇವೆಯಿಂದ ಶಾಶ್ವತವಾಗಿ ಅಮಾನತು ಮಾಡಲಾಗಿದೆ. ಸಂತ್ರಸ್ತೆ ನೀಡಿರುವ ದೂರಿನ ಆರೋಪದ ಮೇಲೆ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಂತ್ರಸ್ತೆ ತಾಯಿ ತಮ್ಮ ಮಗಳನ್ನು ಏಪ್ರಿಲ್ 22ರಂದು ನಾಲ್ವರು ಮಧ್ಯಪ್ರದೇಶದ ಭೋಪಾಲ್ಗೆ ಕರೆದೊಯ್ದು ಮೂರು ದಿನಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ ಆರೋಪಿಗಳು ನಂತೆ ಪಾಲಿ ಪೊಲೀಸ್ ಬಳಿ ಬಿಟ್ಟು ಹೋಗಿದ್ದು ಅಲ್ಲಿ ದೂರು ನೀಡಲು ಹೋದಾಗ ಠಾಣಾಧಿಕಾರಿ ಅತ್ಯಾಚಾರ ವೆಸಗಿದ್ದಾನೆ ಎಂದು ದೂರಿದ್ದಾರೆ.

ಬಾಲಕಿ ನಂತರ ಸುಧಾರಿಸಿಕೊಂಡು ಹತ್ತಿರದಲ್ಲಿದ್ದ ಸರ್ಕಾರೇತರ ಸಂಸ್ಥೆ ಚೈಲ್ಡ್ಲೈನ್ ಹೆಲ್ಪಲೈನಗೆ ತಲುಪಿ ನಡೆದ ಘಟನೆಯನ್ನು ಸದಸ್ಯರ ಬಳಿ ವಿವರಿಸಿದ್ದಾಳೆ. ಎನ್ಜಿಒ ಸದಸ್ಯರು ಪೊಲೀಸ್ ವರಿಷ್ಠಾಧಿಕಾರಿ(DGP)ಯನ್ನು ಸಂಪರ್ಕಿಸಿ ಘಟನೆ ಬಗ್ಗೆ ವಿವರಿಸಿದಾಗ ಎಫ್ಐಆರ್(FIR)ಅನ್ನು ದಾಖಲಿಸಿ ತನಿಖೆ ಮಾಡಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ(DGP) ನಿಖಿಲ್ ಪಾಠಕ್ ಘಟನೆ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಿದ್ದು ಇನ್ನುಳಿದ ಇಬ್ಬರು ಆರೋಪಿಗಳಿಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು ಪ್ರತಿಪಕ್ಷ ಸಮಾಜವಾದಿ ಹಾಗು ಕಾಂಗ್ರೆಸ್ ನಾಯಕರು ಯೋಗಿ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.
ರಾಜ್ಯದ ಹೆಣ್ಣುಮಕ್ಕಳು ಎಲ್ಲಿಗೆ ಹೋಗಬೇಕು ಮತ್ತು ಯಾರನ್ನು ನಂಬಬೇಕು ಎಂದು ಸಮಾಜವಾದಿ ಪಕ್ಷದ ವಕ್ತಾರರು ಪ್ರಶ್ನಿಸಿದ್ದಾರೆ. ಮುಂದುವರೆದು, ಸದ್ಯ ಉದ್ಭವವಾಗಿರುವ ಪ್ರಶ್ನೆ ಏನೆಂದರೆ ಯಾರನ್ನು ನಂಬಬೇಕು ಮತ್ತು ಯಾರನನ್ನು ನಂಬಬಾರದು ಎಂದು ಪ್ರಶ್ನಿಸಿದೆ.
ಈ ನಡುವೆ ಸಮಾಜವಾದಿ ಪಕ್ಷದ ಮುಖಸ್ಥ ಪ್ರತಿಪಕ್ಷ ನಾಯಕ ಅಖಿಲೇಶ್ ಯಾದವ್ ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕಿ, ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕ ಗಾಂಧಿ ವಾದ್ರಾ ಪೊಲೀಸ್ ಠಾಣೆಗಳು ಮಹಿಳೆಯರಿಗೆ ಸುರಕ್ಷಿತವಲ್ಲದಿದ್ದರೆ ಅವರು ದೂರು ನೀಡಲು ಎಲ್ಲಿಗೆ ಹೋಗಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಇಂತಹ ಘಟನೆಗಳನ್ನು ತಡೆಯಲು ರಾಜ್ಯ ಸರ್ಕಾರಗಂಭೀರ ಕಾನೂನುಗಳನ್ನು ಜಾರಿಗೆ ತರಬೇಕು ಎಂದು ಹೇಳಿದ್ದಾರೆ.