• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳ : ಗ್ಯಾಂಗ್‌ ರೇಪ್‌ಗೆ ಒಳಗಾದ ಅಪ್ರಾಪ್ತೆ ಸಾವು ; ವಿವಾದ ಸೃಷ್ಟಿಸಿದ ಸಿಎಂ ಬ್ಯಾನರ್ಜಿ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
April 12, 2022
in ದೇಶ
0
ಪಶ್ಚಿಮ ಬಂಗಾಳದಲ್ಲಿ BJP ಯಿಂದ TMC ಯತ್ತ ಮತ್ತೆ ವಲಸೆ ನಾಯಕರ ಚಿತ್ತ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹಂಸಖಾಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ADVERTISEMENT

ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ಸ್ಥಳೀಯ ಮುಖಂಡನ ಮಗ ಎಂದು ಬಾಲಕಿಯ ಕುಟುಂಬ ಹೇಳಿಕೊಂಡಿದ್ದು, ಹೆಚ್ಚಿನ ತನಿಖೆಗಾಗಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ನಾಲ್ಕು ದಿನಗಳ ನಂತರ ಅಪ್ರಾಪ್ತ ಬಾಲಕಿಯ ಪೋಷಕರು ಶನಿವಾರ ಹಂಸಖಾಲಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಹುಡುಗಿ ಸೋಮವಾರ ಮಧ್ಯಾಹ್ನ ಆರೋಪಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಅವರ ಮನೆಗೆ ಹೋಗಿದ್ದಳು, ಆದರೆ ಮನೆಗೆ ಮರಳುವಾಗ ಆಕೆ ತೀವ್ರ ಅಸ್ವಸ್ಥವಾಗಿದ್ದಳು, ಮನೆಗೆ ತಲುಪಿದ ಕೆಲವೇ ಘಳಿಗೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

“ನಮ್ಮ ಮಗಳು ಸ್ಥಳೀಯ ಟಿಎಂಸಿ ನಾಯಕನ ಮಗನ ನಿವಾಸದಲ್ಲಿ ಪಾರ್ಟಿಯಿಂದ ಹಿಂತಿರುಗಿದ ನಂತರ ತೀವ್ರವಾಗಿ ರಕ್ತಸ್ರಾವವಾಗುತ್ತಿದ್ದಳು ಮತ್ತು ತೀವ್ರವಾದ ಹೊಟ್ಟೆ ನೋವನ್ನು ಹೊಂದಿದ್ದಳು ಮತ್ತು ನಾವು ಅವಳನ್ನು ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಅವಳು ಸಾವನ್ನಪ್ಪಿದಳು.” ಎಂದು ಮೃತಳ ತಾಯಿ ಆರೋಪಿಸಿದ್ದಾರೆ.

” ಪಾರ್ಟಿಯಲ್ಲಿ ಹಾಜರಿದ್ದ ಜನರೊಂದಿಗೆ ಮಾತನಾಡಿದ ಬಳಿಕ, ಆರೋಪಿ ಮತ್ತು ಅವನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ನಮಗೆ ಖಚಿತವಾಗಿದೆ” ಎಂದು ಹುಡುಗಿಯ ತಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಕೆಯ ಮರಣ ಪ್ರಮಾಣ ಪತ್ರ ನೀಡುವ ಮುನ್ನವೇ ಜನರ ಗುಂಪೊಂದು ಅಪ್ರಾಪ್ತ ಬಾಲಕಿಯ ಶವವನ್ನು ಶವಸಂಸ್ಕಾರಕ್ಕೆ ಬಲವಂತವಾಗಿ ಕೊಂಡೊಯ್ದಿದೆ ಎಂದು ಅವರು ಆರೋಪಿಸಿದ್ದಾರೆ.

ಸದ್ಯ, 9 ನೇ ತರಗತಿಯ ಬಾಲಕಿಯ ಸಾವು ಬಂಗಾಳ ರಾಜಕಾರಣದಲ್ಲಿ ಹೊಸ ತಿರುವು ಪಡೆದಿದೆ. ಬಿಜೆಪಿಯು ಈ ಸಾವನ್ನು ಬಳಸಿ ಆಡಳಿತ ಪಕ್ಷದ ಮೇಲೆ ತೀವ್ರ ಟೀಕೆಗಳನ್ನು ಮಾಡುತ್ತಿದೆ. ಸರ್ಕಾರವು ಬಾಲಕಿಯ ಸಾವಿಗೆ ಸಂಬಂಧಪಟ್ಟ ಆರೋಪಿಗಳ ರಕ್ಷಣೆಯಲ್ಲಿ ತೊಡಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ.

ಈ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು, ಬಾಲಕಿ ಸಾವಿಗೆ ಕಾರಣ ಏನು ಎಂದು ಪೊಲೀಸರಿಗೆ ಇನ್ನೂ ಅರ್ಥವಾಗುತ್ತಿಲ್ಲ. ನಾನು ಅವರನ್ನು ಕೇಳಿದೆ. ನೀವು ಇದನ್ನು ಅತ್ಯಾಚಾರ ಎಂದು ಕರೆಯುತ್ತೀರಾ ಅಥವಾ ಅವಳು ಗರ್ಭಿಣಿಯೇ? ಇದು ಪ್ರೇಮ ಪ್ರಕರಣವೇ? ನೀವು ಈ ಬಗ್ಗೆ ವಿಚಾರಿಸಿದ್ದೀರಾ? ಇದು ದುರದೃಷ್ಟಕರ ಘಟನೆಯಾಗಿದೆ. ಬಾಲಕಿ ಮತ್ತು ಆರೋಪಿಯ ನಡುವಿನ ಸಂಬಂಧ ಆಕೆಯ ಕುಟುಂಬ ಸದಸ್ಯರಿಗೆ ಮತ್ತು ಸ್ಥಳೀಯರಿಗೆ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.

ಹುಡುಗಿಯ ಕುಟುಂಬದವರು ಮೃತದೇಹದ ಅಂತಿಮ ಸಂಸ್ಕಾರವನ್ನೂ ನಡೆಸಿದ್ದೀರಿ, ನಾನು ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಮಾತನಾಡುತ್ತಿದ್ದೇನೆ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆಯೇ ಅಥವಾ ಅವಳು ಗರ್ಭಿಣಿಯಾಗಿದ್ದಾಳೆಯೇ ಅಥವಾ ಸಾವಿಗೆ ಬೇರೆ ಯಾವುದೇ ಕಾರಣವಿದೆಯೇ ಎಂಬುದಕ್ಕೆ ಪುರಾವೆಯನ್ನು ಪೊಲೀಸರು ಎಲ್ಲಿಂದ ಪಡೆಯುತ್ತಾರೆ? ಯಾರೋ ಕಪಾಳಮೋಕ್ಷ ಮಾಡಿದ ನಂತರ ಅವಳು ಅಸ್ವಸ್ಥಳಾದಳೋ ತಿಳಿಯುವುದು ಹೇಗೆ ಎಂದು ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಈ ಹೇಳಿಕೆ ಸದ್ಯ ವಿವಾದವನ್ನು ಸೃಷ್ಟಿಸಿದೆ. ಪ್ರತಿಪಕ್ಷಗಳು ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ, ಸಿಪಿಐ(ಎಂ) ಮತ್ತು ಕಾಂಗ್ರೆಸ್ ಬ್ಯಾನರ್ಜಿ ವಿರುದ್ಧ ಛೀಮಾರಿ ಹಾಕಿದ್ದಾರೆ.

Tags: BJPCongress PartyCovid 19ಅಪ್ರಾಪ್ತೆ ಸಾವುಗ್ಯಾಂಗ್‌ ರೇಪ್‌ನರೇಂದ್ರ ಮೋದಿಪಶ್ಚಿಮ ಬಂಗಾಳಬಿಜೆಪಿಸಿಎಂ ಬ್ಯಾನರ್ಜಿ
Previous Post

ಬೆಂಗಳೂರಿನಲ್ಲಿ ಹೆಚ್ಚಿದ ಪರಿಸರ ಮಾಲಿನ್ಯ : ಮಹಿಳೆಯರಲ್ಲಿ ಹೆಚ್ಚಿದ ಬಂಜೆತನದ ಸಮಸ್ಯೆ!

Next Post

ಕೋಮುಗಲಭೆಗಳ ವಿರುದ್ದ ಮಠಾಧೀಶರು ಧ್ವನಿ ಎತ್ತಬೇಕು : ಡಿ.ಕೆ.ಶಿವಕುಮಾರ್

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಲಸಿಕೆ ವಿಷಯದಲ್ಲಿ ಮಲತಾಯಿ ಧೋರಣೆ; ಗುಜರಾತ್‌ಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ: ಡಿಕೆಶಿ ಕಿಡಿ

ಕೋಮುಗಲಭೆಗಳ ವಿರುದ್ದ ಮಠಾಧೀಶರು ಧ್ವನಿ ಎತ್ತಬೇಕು : ಡಿ.ಕೆ.ಶಿವಕುಮಾರ್

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada