• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಗ್ಯಾರಂಟಿ ‌ಯೋಜನೆಗಳ ಜಾರಿಗೆ ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
July 21, 2023
in ರಾಜಕೀಯ
0
ಗ್ಯಾರಂಟಿ ‌ಯೋಜನೆಗಳ ಜಾರಿಗೆ ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಈ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರ ಆಗಿದೆ.

ADVERTISEMENT

ರೈತರು ಎರಡು ಬಾರಿ ಬಿತ್ತನೆ ಮಾಡಿದರು ಬೆಳೆ ಬರದೇ ರೈತರು ಸಂಕಷ್ಟಕ್ಕೆ ಸಿಕಿದ್ದಾರೆ. ಸರ್ಕಾರ ಅವರ ರಕ್ಷಣೆಗೆ ಬಂದಿಲ್ಲ. 2013 ರಿಂದ 18ರ ವರೆಗೆ ಅತಿ ಹೆಚ್ಚು ರೈತರು ಸುಮಾರು 4000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾಖಲೆ ಇದೆ ಎಂದು ಹೇಳಿದರು. ನಾವು ನಮ್ಮ ಬಜೆಟ್ ನಲ್ಲಿ ಡಿಗ್ರಿವರೆಗೆ ಉಚಿತ ವಿದ್ಯಾಭ್ಯಾಸ ನಿಡುವುದಾಗಿ ಹೇಳಿದ್ದೇವು. ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದೇವು ಇವರು ಅದನ್ನು ಕೈ ಬಿಟ್ಟಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ ಕೊಲೆ ಸುಲಿಗೆ ಹೆಚ್ಚಾಗಿದೆ. ಪೊಲಿಸ್ ಠಾಣೆಯಲ್ಲಿ ಮಾಮೂಲು ಕೇಳುವ ಕೆಲಸ ಶುರುವಾಗಿದೆ. ವಿದ್ಯಾರ್ಥಿಗಳು, ರೈತರು, ಸರ್ಕಾರಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದುಡಿಯುವ ಸಾಮಾನ್ಯ ಜನರ ಬದುಕು ಅಸ್ಥಿರಗೊಳಿಸಿದ್ದಾರೆ. ಇವರು ಮಂಡಿಸಿರುವುದು ಜನ ವಿರೋಧಿ ಬಜೆಟ್‌ ಇವರು ಗ್ಯಾರೆಂಟಿ ಗಳಿಗೆ ಹಣ ಹೊಂದಿಸಲು ಪರದಾಡುತ್ತಿದ್ದಾರೆ. ಇವರ ಅವಧಿಯಲ್ಲಿ ಅತಿ ಹೆಚ್ಚು ಸಾಲ ಮಾಡಿದ್ದಾರೆ. ನಿಜಲಿಂಗಪ್ಪ ರಿಂದ ಹಿಡಿದು ಜಗದೀಶದ ಶೆಟ್ಟವರೆಗೆ ಒಂದು ಲಕ್ಷ ಕೋಟಿ ಸಾಲವಾಗಿತ್ತು‌. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಒಂದು ಲಕ್ಷ ಮೂವತ್ತು ಸಾವಿರ ಕೋಟಿ ಸಾಲ ಮಾಡಿದ್ದಾರೆ‌.


ದಲಿತರ ಕಲ್ಯಾಣಕ್ಕಾಗಿ‌ ಮೀಸಲಿಟ್ಟ ಎಸ್ಸಿಪಿ, ಟಿಎಸ್ ಪಿ ಹಣವನ್ನು ದಯರ್ಬಳಕೆ ಮಾಡಿಕೊಂಡಿದ್ದಾರೆ‌. ಗೃಹ ಲಕ್ಷ್ಮೀ ಯೋಜನೆಗೆ 6 ಸಾವಿರ ಕೋಟಿ ರೂ. ಎಸ್ ಸಿಪಿ ಟಿಎಸ್ಪಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಗ್ಯಾರೆಂಟಿ ಗಳಿಗೆ 13000 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿರುವ ದಲಿತ ಶಾಸಕರು ಹಾಗೂ ಸಚಿವರು ಏನು ಮಾಡುತ್ತಿಧ್ದಿರಿ. ಅದನ್ನು ಕೇಳಲು ದೈರ್ಯ ಇಲ್ಲವೆ ನರ ಇಲ್ಲವೇ ಎಂದು ಪ್ರಶ್ನಿಸಿದರು. ಅಂಬೇಡ್ಕರ್ ಅವರ ಹೆಸರಿನಲ್ಲಿ ನಾವು 100 ಹಾಸ್ಟೇಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೇವು, ಹಿಂದುಳಿದ ವರ್ಗದ ಹಾಸ್ಟೆಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೇವು. ಅವುಗಳನ್ನು ನಿಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಲಿಲ್ಲ. ನೀವು ದಲಿತರ ವಿರೋಧಿಗಳು ಎಂದು ಆರೋಪಿಸಿದರು.


ಭ್ರಷ್ಟಾಚಾರದಲ್ಲಿ ನಂಬರ್ ಒನ್ ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ನಂಬರ್ ಒನ್ ಅಂತ ವರದಿ ಬಂದಿದೆ. ಗುಮಾಸ್ತನಿಂದ ಹಿಡಿದು ಸೆಕ್ರೆಟರಿವರೆಗೂ ವರ್ಗಾಚಣೆಗೆ ರೇಟ್ ಫಿಕ್ಸ್ ಮಾಡಿದ್ದೀರಿ. ಮಾಲಿನ್ಯ ನಿಯಂತ್ರಣ ಮಂಡಳಿಗೆ ಐಎಫ್ ಎಸ್ ಅಧಿಕಾರಿ ನೇಮಕ ಮಾಡಬೇಕು‌. ಅದರ ಬದಲು ಸಂಬಂಧಿಕ ಅಂತ ಗುತ್ತಿಗೆ ನೌಕರರನ್ನು ಸೆಕ್ರೆಟರಿಯಾಗಿ ನೇಮಕ ಮಾಡಿದ್ದಾರೆ. ಗ್ಯಾರೆಂಟಿ ಗಳಲ್ಲಿ ಜನರಿಗೆ ಮೋಸ ಮಾಡಿದ್ದೀರಿ, ಕರೆಂಟ್ ದರ ಹೆಚ್ಚಳ ಮಾಡಿದ್ದೀರಿ, ಗೃಹಲಕ್ಷ್ಮೀಗೆ ಇನ್ನೂ ಯಜಮಾನಿಯನ್ನು ಹುಡುಕಾಟ ನಡೆಸಿದ್ದಾರೆ. ಯುವ ನಿಧಿ ಅಯೋಮಯವಾಗಿದೆ. ಎಂದು ವಾಗ್ದಾಳಿ ನಡೆಸಿದರು.

ನಾವು ಕೊವಿಡ್ ಸಂದರ್ಭದಲ್ಲಿ ನಾವು ಉತ್ತಮ ಆರ್ಥಿಕ ನಿರ್ವಹಣೆ ಮಾಡಿದ್ದಕ್ಕೆ ನೀವು ಇಷ್ಟು ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗಿದೆ. ನಮ್ಮ ಅವಧಿಯಲ್ಲಿ ಜಿಎಸ್ ಟಿ, ಮೊಟರ್ ವೆಹಿಕಲ್ ತೆರಿಗೆ ಎಲ್ಲವೂ ಹೆಚ್ಚು ಸಂಗ್ರಹವಾಗಿದೆ.ಕೊವಿಡ್ ಸಂದರ್ಭದಲ್ಲಿ ನರೇಂದ್ದ ಮೋದಿಯವರು ರಾಜ್ಯಕ್ಕೆ ಅತಿ ಹೆಚ್ಚು ಹಣ ನೀಡಿದ್ದಾರೆ. ಕೇಂದ್ರ ಸರ್ಕಾರ ಕಳೆದ ವರ್ಷ 3500 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಯುಪಿಎ ಅವಧಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಅವರು ಸೊನಿಯಾ ಗಾಂಧಿ ಮುಂದೆ ಹೊಗಿ ನಿಲ್ಲಲು ಆಗುತ್ತಿರಲಿಲ್ಲ. ಕೇಂದ್ರ ನೀಡಿದ ಹಣದ ಬಗ್ಗೆ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪ ಮಾಡದೆ ಮರೆಮಾಚಿದ್ದಾರೆ ಎಂದು ಆರೋಪಿಸಿದರು.


ಇನ್ನು ಐಎಎಸ್ ಅಧಿಕಾರಿಗಳ ಸೇವಾ ನಿಯಮದ ಬಗ್ಗೆ ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ ವಿವರವಾಗಿ ಪತ್ರದ ಮೂಲಕ ಹೇಳಿದ್ದಾರೆ. ಸ್ಪೀಕರ್ ಅತ್ಯಂತ ಸಣ್ಣ ವಯಸ್ಸಿನಲ್ಲಿ ಸ್ಪೀಕರ್ ಆಗಿದ್ದೀರಿ. ನೀವು ಕಾಂಗ್ರೆಸ್ ಭೋಜನ ಕೂಟಕ್ಕೆ ತೆರಳಿ ಅವರ ಬಾಗಿಲು ಕಾದಿರಿ,ಇದರಿಂದ ನಿಮಗಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ಅವಮಾನವಾಗಿದೆ. ನಾವು ಸದನದಲ್ಲಿ ಪ್ರತಿಭಟನೆ ಮಾಡಿದರೆ ಕರೆದು ಚಹಾ ಕೊಡಬೇಕಿತ್ತಾ ಅಂತ ಕೇಳಿದ್ದೀರಿ, ನಾವು ನಿಮ್ಮ ಚಹಾ ಕುಡಿಯುಲು ಸದನಕ್ಕೆ ಬಂದಿಲ್ಲ. ನಾವು ಜನರ ಪರವಾಗಿ ಚರ್ಚೆ ಮಾಡಲು ಬರುತ್ತೇವೆ. ನಾವೇ ನಿಮಗೆ ಪ್ರತಿ ದಿನ ಟಿ ಕುಡಿಸುತ್ತೇವೆ‌‌ ಎಂದು ವಾಗ್ದಾಳಿ ನಡೆಸಿದರು.


ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಜನಪ್ರೀಯತೆ‌ ಕಳೆದುಕೊಂಡಿದೆ. ಐದು ಜನ ಟೆರೆರಿಸ್ಟ್ ಗಳು ಸಿಕ್ಕಿದ್ದಾರೆ ಅವರನ್ನು ಟೆರೆರಿಸ್ಟ್ ಎನ್ನಲು ಆಗುವುದಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ‌‌. ಸಾಮನ್ಯ ಅಪರಾಧ ಮಾಡುವವರು ಹ್ಯಾಂಡ್ ಗ್ರ್ಯಾನೈಡ್ ಇಟ್ಡುಕೊಳ್ಳುತ್ತಾರಾ ? ಇದೆಲ್ಲದಕ್ಕೂ ರಾಜ್ಯದ ಜನತೆ ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

Tags: Basavaraj BommaiCMSiddaramaiahDKShivakumarHdKumaraswamyJDS
Previous Post

ನೃತ್ಯ ನಿರ್ದೇಶಕ ಕಲೈ ಚಿತ್ರದಲ್ಲಿ ನಾಯಕನಾಗಿ ನಟ ಪ್ರಜ್ವಲ್ ದೇವರಾಜ್

Next Post

ಗ್ಯಾರಂಟಿ ಯೋಜನೆಗಳ ಕುರಿತು ಜನರು ಸಂತುಷ್ಟರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
0

ಇಂದು ನೆಲಮಂಗಲದ (Nelamangala) ಬಳಿಯಿರೋ ನಗರೂರಿನಲ್ಲಿ ಸಿದ್ಧಗೊಂಡಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ‌ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಭಾಗಿಯಾಗಿದ್ದಾರೆ. ನಗರೂರಿನಲ್ಲಿ ಆರಂಭಿಸಿರುವ ಬಿಜಿಎಸ್ ಎಂಸಿಎಚ್...

Read moreDetails

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

June 20, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

June 20, 2025
Next Post
ಮೋದಿ ತಮ್ಮ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಮಾಡಿದ್ದಾರೆ ; ಸಿಎಂ  ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಕುರಿತು ಜನರು ಸಂತುಷ್ಟರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada