ಹೆಸ್ಕಾಂ ವ್ಯಾಪ್ತಿಯಲ್ಲಿ ಧಾರವಾಡ, ಗದಗ , ಹಾವೇರಿ , ಉತ್ತರ ಕನ್ನಡ, ಬೆಳಗಾವಿ. ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಘೋಷಿಸಿದ್ದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ವಿದ್ಯುತ್ ದರ ಏರಿಕೆ ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹೆಸ್ಕಾಂ ವ್ಯಾಪ್ತಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಸ್ಕಾಂ ವ್ಯಾಪ್ತಿಯಲ್ಲಿ ಬಂದ್ ಗೆ ಕೆಲವೆಡೆಗೆ ನಿರಸ ಪ್ರತಿಕ್ರಿಯೆ ದೊರೆಯಿತು. ಬಹುತೇಕ ಕಡೆಗಳಲ್ಲಿ ಎಂದಿನಂತೆ ಮಾರುಕಟ್ಟೆ, ಅಂಗಡಿ ಮುಂಗಟ್ಟುಗಳು ಕಾರ್ಯನಿರ್ವಹಿಸುವುದು ಕಂಡು ಬಂದಿತು. ಗದಗ, ಬಾಗಲಕೋಟೆ, ಹಾವೇರಿ, ರಾಣೆಬೆನ್ನೂರು ಹಾಗೂ ವಿಜಯಪುರಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ.
ಹುಬ್ಬಳ್ಳಿಧಾರವಾಡ, ಬೆಳಗಾವಿ ಹಾಗೂ ಕಾರವಾರ ನಗರಗಳಲ್ಲಿ ಬಂದ್ ಗೆ ಉದ್ಯಮಿಗಳು ಹಾಗೂ ವರ್ತಕರು ಬೆಂಬಲ ಸೂಚಿಸಿದ್ದು, ಕಂಡು ಬಂದಿತು. ಕೆಲ ಹೋಟೆಲ್ ಗಳು, ತುರ್ತು ಸೇವೆ ಅಂಗಡಿಗಳು ಹಾಗೂ ಸಾರಿಗೆ ವ್ಯವಸ್ಥೆ ಯಥಾಪ್ರಕಾರ ಚಾಲವಣೆಯಲಿದ್ದವು. ಹುಬ್ಬಳ್ಳಿಯಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಕಚೇರಿಯಿಂದ ಮೆರವಣಿಗೆ ನಡೆಸಿ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿ ಧಾರವಾಡದವರಿಗೆ ಧರ ಏರಿಕೆಯನ್ನು ಹಿಂಪಡೆಯುವಂತೆ ಮನವಿ ಪತ್ರ ಸಲ್ಲಿಸಿದರು.