• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

“ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಿ” : ಕಲಾಪದಲ್ಲೇ ಕ್ಷಮೆಯಾಚಿಸಿದ ರಮೇಶ್‌ ಕುಮಾರ್

Any Mind by Any Mind
August 23, 2022
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿಮಾಜಿ ಸ್ಪೀಕರ್ ಹಾಗೂ ಶಾಸಕ ರಮೇಶ್ ಕುಮಾರ್ ಹೇಳಿದ ಹೇಳಿಕೆ ವಿವಾದವಾಗುತ್ತಿದ್ದಂತೆ ಇಂದಿನ ಕಲಾಪ ಆರಂಭವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ.

ADVERTISEMENT

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾಜಿ ಸ್ಪೀಕರ್ ಹಾಗೂ ಶಾಸಕ ರಮೇಶ್ ಕುಮಾರ್ ಅವರು ಹೇಳಿದ ಹೇಳಿಕೆ ಸದ್ಯ ಭಾರೀ ವಿವಾದವಾಗಿ ಮಾರ್ಪಟ್ಟಿದೆ. ತಮ್ಮ ಘನತೆ ಮರೆತು ರಮೇಶ್ ಕುಮಾರ್ ಮಾತನಾಡಿದ್ದಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ.

ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ ೬೯ ರಡಿ ಚರ್ಚೆ ನಡೆಯುತ್ತಿತ್ತು. ಆ ವೇಳೆ ಸದನದಲ್ಲಿ ಹಲವು ಸದಸ್ಯರು ಒಮ್ಮಿಗಿಲೇ ಎದ್ದು ನಿಂತು ತಮ್ಮ ಭಾಗದ ಸಮಸ್ಯೆಗಳ ಕುರಿತು ಸದನದ ಗಮನಕ್ಕೆ ತರುತ್ತಿದ್ದರು. ಆ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶರ ಹೆಗಡೆ ಕಾಗೇರಿ ಅವರು ಪ್ರತಿಕ್ರಿಯಿಸುತ್ತಾ, ಸದಸ್ಯರೆಲ್ಲ ಏಕಾಏಕಿ ಮಾತನಾಡಲು ಮುಂದಾಗುತ್ತಿದ್ದಾರೆ. ಒಮ್ಮಿಗಿಲೇ ಇವರ ದಾಳಿಯನ್ನ ಹೇಗೆ ಸಹಿಸುವುದು ಎಂದು ತಮಾಷೆಯ ದಾಟಿಯಲ್ಲಿ ಹೇಳಿದರು.

ಕಾಗೇರಿ ಅವರ ಈ ಹೇಳಿಕೆಗೆ ತಕ್ಷಣವೇ ಎದ್ದು ನಿಂತು ಪ್ರತಿಕ್ರಿಯಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, “ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಿ” (when repe is inevitable, lay back and enjoy) ಎಂದು ತಮಾಷೆಯಾಗಿ ಹೇಳಿ ಕುಳಿತರು. ಸದನ ನಗೆಗಡಲಲ್ಲಿ ತೇಲಿತು. ನಂತರ ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ವಿವಾದವಾಗಿ ಮಾರ್ಪಟ್ಟಿತು.

This MLA Ramesh Kumar who thinks crimes against women like rape are a joking matter was chosen by Rahul/Priyanka Cong to be speaker of Assembly – a constitutional position ! 🤮😡 https://t.co/sAzyGH4t34

— Rajeev Chandrasekhar 🇮🇳 (@RajeevRC_X) December 17, 2021

ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಈ ಬಗ್ಗೆ ಟ್ವೀಟ್ ಮಾಡಿ, “ಅತ್ಯಾಚಾರದಂತಹ ಮಹಿಳೆಯರ ಮೇಲಿನ ಅಪರಾಧಗಳನ್ನು ತಮಾಷೆಯ ವಿಷಯವೆಂದು ಭಾವಿಸುವ ಈ ಶಾಸಕ ರಮೇಶ್ ಕುಮಾರ್ ಅವರನ್ನು ಸಂವಿಧಾನಿ ಸ್ಥಾನವಾದ ಅಸೆಂಬ್ಲಿಯ ಸ್ಪೀಕರ್ ಆಗಿ ಆಯ್ಕೆಮಾಡಲಾಗಿತ್ತು,” ಎಂದಿದ್ದಾರೆ.

ತಕ್ಷಣ ಎಚ್ಚೆತ್ತುಕೊಂಡ ರಮೇಶ್ ಕುಮಾರ್ ಕೂಡಲೇ ಅವರು ಟ್ವೀಟ್ ಮಾಡಿ ಕ್ಷಮೆ ಕೋರಿದ್ದಾರೆ. ಅತ್ಯಾಚಾರ! ಕುರಿತು ವಿಧಾನಸಭಾ ಅಧಿವೇಶನದಲ್ಲಿ ನಾನು ಹೇಳಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಮಾತಿಗಾಗಿ ನಾನು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನನ್ನ ಉದ್ದೇಶವು ಕ್ಷುಲ್ಲಕಗೊಳಿಸುವುದು ಅಥವಾ ಘೋರ ಅಪರಾಧವನ್ನು ಹಗುರಗೊಳಿಸುವುದು ಅಲ್ಲ. ಆದರೆ ಒಂದು ತಮಾಷೆಯ ಹೇಳಿಕೆ ಅಷ್ಟೇ! ಇನ್ಮುಂದೆ ಎಚ್ಚರ ವಹಿಸಿ ಮಾತನಾಡುತ್ತೇನೆ ಎಂದಿದ್ದಾರೆ.

I would like to express my sincere apologies to everyone for the indifferent and negligent comment I made in today’s assembly about “Rape!” My intention was not trivialise or make light of the heinous crime, but an off the cuff remark! I will choose my words carefully henceforth!

— K. R. Ramesh Kumar (@KRRameshKumar1) December 16, 2021

ಕಲಾಪದಲ್ಲೇ ಕ್ಷಮೇಯಾಚಿಸಿದ ಮಾಜಿ ಸ್ಪೀಕರ್

ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ರಮೇಶ್ ಕುಮಾರ್ ಅವರು ರಾಜ್ಯದ ಜನತೆಯ ಕ್ಷಮೆ ಕೇಳಿದ್ದಾರೆ. “ಹೆಣ್ಣಿಗೆ ಅವಮಾನಿಸುವ, ಹಗುರವಾಗಿ ಮಾತಾಡುವ ಉದ್ದೇಶ ನನ್ನದಾಗಿರಲಿಲ್ಲ. ಮಾತನಾಡುವ ಭರದಲ್ಲಿ ನನ್ನಿಂದ ತಪ್ಪಾಗಿದೆ. ಇದಕ್ಕೆ ಕ್ಷಮೆ ಕೇಳಲು ನನಗೆ ಹಿಂಜರಿಯುವುದಿಲ್ಲ. ಗ್ರಹಚಾರಕ್ಕೆ ಸ್ಪೀಕರ್ ನನ್ನ ಹೆಸರು ಹೇಳಿದಾಗ ಪ್ರತಿಕ್ರಿಯಿಸಿದೆ. ಅದು ಹೆಸರಾಂತ ಇಂಗ್ಲಿಷ್ ಚಿಂತಕರ ಹೇಳಿಕೆ. ಅದನ್ನು ಉಲ್ಲೇಖಿಸಿದ್ದೆ ಅಷ್ಟೇ. ಈ ವಿಚಾರಕ್ಕೆ ಇಲ್ಲಿಗೇ ಅಂತ್ಯ ಹಾಡಿ ಕಲಾಪ ಮುಂದುವರಿಸೋಣ ಎಂದು ತಿಳಿಸಿದರು.

Tags: BJPCongress PartyCovid 19ಅತ್ಯಾಚಾರಕರೋನಾಕೋವಿಡ್-19ಬಿಜೆಪಿಬೆಳಗಾವಿರಮೇಶ್ ಕುಮಾರ್ವಿಧಾನ ಸಭೆ ಅಧಿವೇಶನ
Previous Post

ಶಿವಮೊಗ್ಗ ಘಟನೆ : ಕರಾವಳಿಯಿಂದ ಮಲೆನಾಡಿಗೆ ವಿಸ್ತರಿಸಿದ ನೈತಿಕ ಪೊಲೀಸ್ ಗಿರಿ!

Next Post

ರಾಜ್ಯದಲ್ಲಿ ಐವರಿಗೆ ಓಮೈಕ್ರಾನ್ : ಹೊಸ ಸೋಂಕಿತರ ಟ್ರಾವೆಲ್‌ ಹಿಸ್ಟರಿ ಏನು?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ರಾಜ್ಯದಲ್ಲಿ ಐವರಿಗೆ ಓಮೈಕ್ರಾನ್ : ಹೊಸ ಸೋಂಕಿತರ ಟ್ರಾವೆಲ್‌ ಹಿಸ್ಟರಿ ಏನು?

ರಾಜ್ಯದಲ್ಲಿ ಐವರಿಗೆ ಓಮೈಕ್ರಾನ್ : ಹೊಸ ಸೋಂಕಿತರ ಟ್ರಾವೆಲ್‌ ಹಿಸ್ಟರಿ ಏನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada