• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

ಪ್ರತಿಧ್ವನಿ by ಪ್ರತಿಧ್ವನಿ
July 29, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬಿಜೆಪಿ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ, ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ

ADVERTISEMENT

“ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಉತ್ತರಿಸಿದರು.

ಮುಖ್ಯಮಂತ್ರಿಗಳು ನಿಮಗೆ ಆಹ್ವಾನ ನೀಡದೆ ಶಾಸಕರ ಸಭೆ ಮಾಡುತ್ತಿದ್ದಾರೆ ಎಂದು ಕೇಳಿದಾಗ “ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ ” ಎಂದು ಮರುಪ್ರಶ್ನಿಸಿದರು.

ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, “ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ” ಎಂದರು.

CM Siddaramaiah Sidelines DK Shivakumar, To Chair Meeting With Ministers & MLAs | Pratidhvani

ಬಿಜೆಪಿ ತನ್ನ ಮನೆ ಸರಿಪಡಿಸಿಕೊಳ್ಳಲಿ:
ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ. ಅವರ ಮಧ್ಯೆಯೇ ಸಾಕಷ್ಟು ತಿಕ್ಕಾಟಗಳು ನಡೆಯುತ್ತಿವೆ. ಮೊದಲು ಅವರ ಸಮಸ್ಯೆಗಳನ್ನು ಸರಿಮಾಡಿಕೊಳ್ಳಲಿ” ಎಂದರು.

ಬೆಂಗಳೂರು ಹಾಗೂ ನಾಗರೀಕರ ಹಿತಕ್ಕಾಗಿ ಪಾಲಿಕೆ ವಿಭಜನೆ:

“ನಾವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಈ ವಿಚಾರವಾಗಿ ವಿರೋಧ ಪಕ್ಷಗಳ ನಾಯಕರ ಅಭಿಪ್ರಾಯವನ್ನು ಪಡೆದಿದ್ದೇವೆ. ಪಾಲಿಕೆ ಚುನಾವಣೆ ಕುರಿತಾಗಿ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಬೇಕಾಗಿದೆ. ಬೆಂಗಳೂರು ಹಾಗೂ ನಾಗರೀಕರ ಹಿತಕ್ಕಾಗಿ ಪಾಲಿಕೆ ವಿಭಜನೆ ಮಾಡುತ್ತಿದ್ದೇವೆ. ನಾವು ಭೌಗೋಳಿಕ ಹಾಗೂ ಆಡಳಿತ, ಆರ್ಥಿಕತೆ ಹಾಗೂ ಭವಿಷ್ಯದಲ್ಲಿ ಬೆಂಗಳೂರಿನ ವಿಸ್ತರಣೆ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಮಾಡಿದ್ದೇವೆ. ಬಿಜೆಪಿಯವರು ರಾಜಕೀಯ ಕಾರಣಗಳಿಗೆ ನಮ್ಮನ್ನು ಟೀಕೆ ಮಾಡುತ್ತಾರೆ, ಮಾಡಲಿ. ಸಾರ್ವಜನಿಕವಾಗಿ ಟೀಕೆ ಮಾಡುತ್ತಾರೆ, ಮಾಡಲಿ. ನಾವು ಇಡೀ ಬೆಂಗಳೂರು ಹಾಗೂ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.

Advocate Jagadeesh: Lawyer Jagadish ರಾಜಕಾರಣಿಗಳ ವಿರುದ್ಧ ಲಾಯರ್ ಜಗದೀಶ್ ಆಕ್ರೋಶ #pratidhvani

ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾವನೆ ಹೇಳಿರುವುದರಲ್ಲಿ ತಪ್ಪೇನಿದೆ:

ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ತಪ್ಪೇನಿದೆ. ಹಿರಿಯ ನಾಯಕರು ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಭಾವನೆಗಳನ್ನು ಹೇಳಿಕೊಂಡಿದ್ದಾರೆ. ಇದರಲ್ಲಿ ಯಾವ ತರಹದ್ದು ತಪ್ಪೇನಿಲ್ಲ” ಎಂದರು.

ರಾಜ್ಯ ರಾಜಕಾರಣಕ್ಕೆ ಖರ್ಗೆ ಅವರು ಮರಳಿ ಬರುತ್ತಾರೆ ಎನ್ನುವ ಕೆಲವರ ಚರ್ಚೆ ಬಗ್ಗೆ ಕೇಳಿದಾಗ, “ಈ ಬಗ್ಗೆಯೂ ಚರ್ಚೆ ಮಾಡುವುದರಲ್ಲಿ ತಪ್ಪೇನಿದೆ. ಅವರವರ ಅಭಿಪ್ರಾಯ ಅವರು ತಿಳಿಸುತ್ತಾರೆ” ಎಂದರು.

ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ
ಬಿಜೆಪಿಯವರು ಯೂರಿಯ ಕೊರತೆ ಬಗ್ಗೆ ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ, “ಬಿಜೆಪಿ ಅವರ ಮೇಲೆ ಅವರೇ ಪ್ರತಿಭಟನೆ ಮಾಡಿಕೊಳ್ಳಬೇಕು ಅಷ್ಟೇ. ಈ ಹಿಂದೆ ಗೊಬ್ಬರ ಕೊಡಲು ಆಗದೇ ರೈತರ ಮೇಲೆ ಗುಂಡು ಹಾರಿಸಿದ್ದರು. ನಾವು ಅಂತಹ ಕೆಲಸ ಮಾಡುವುದಿಲ್ಲ. ಮಳೆ ಹೆಚ್ಚಾಗಿರುವ ಕಾರಣ ಕೃಷಿ ಚಟುವಟಿಕೆ ಜಾಸ್ತಿಯಾಗಿದೆ. ಹೀಗಾಗಿ ರಸಗೊಬ್ಬರ ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಸಂಸದರು ಒಪ್ಪಿಕೊಂಡಿದ್ದಾರೆ. ಕೂಡಲೇ ಗೊಬ್ಬರ ಸಿಕ್ಕರೆ ನಮ್ಮ ರೈತರಿಗೆ ಒಳ್ಳೆಯದಾಗುತ್ತದೆ ಎಂದು ನಾವು ಒತ್ತಡ ಹಾಕುತ್ತಿದ್ದೇವೆ” ಎಂದರು.

“ಬಿಜೆಪಿ ಅವರ ಕೇಂದ್ರ ಕೃಷಿ ಸಚಿವರು, ರಾಸಾಯನಿಕ ಗೊಬ್ಬರ ಖಾತೆ ಸಚಿವರ ವಿರುದ್ಧ ಪ್ರತಿಭಟನೆ ಮಾಡಬೇಕಷ್ಟೆ. ನಮ್ಮ ಮೇಲೆ ಏಕೆ ಪ್ರತಿಭಟನೆ ಮಾಡುತ್ತಾರೆ. ಗೊಬ್ಬರವೇನು ನಮ್ಮ ಬಳಿ ಇದೆಯೇ? ಆ ಇಲಾಖೆ, ಗೊಬ್ಬರದ ಕಾರ್ಖಾನೆ ಏನು ನಮ್ಮ ಬಳಿ ಇದೆಯೇ? ಅವರು ಕೊಡುವುದನ್ನು ಹಂಚುವುದು ನಮ್ಮ ಕೆಲಸವಷ್ಟೇ” ಎಂದು ಹೇಳಿದರು.

Ramya on Darshan: ದರ್ಶನ್ ಹೆಂಡ್ತಿ ವಿಜಯಲಕ್ಷ್ಮಿ ಪೋಸ್ಟ್ ಬಗ್ಗೆ ನಟಿ ರಮ್ಯಾ ಶಾಕಿಂಗ್ ರಿಯಾಕ್ಷನ್ #pratidhvani

“ನಾವು ಹಂಚುವುದರಲ್ಲಿ ತಾರತಮ್ಯ ಮಾಡಿದರೆ ಮಾತನಾಡಲಿ. ನಮ್ಮ ಬಳಿ ಎಲ್ಲ ಲೆಕ್ಕವೂ ಇದೆ. ಯಾವ ಯಾವ ಸೊಸೈಟಿಗಳಿಗೆ ಎಷ್ಟು ಹಂಚಲಾಗಿದೆ, ಯಾವ ಜಿಲ್ಲೆಯಲ್ಲಿ ಎಷ್ಟು ದಾಸ್ತಾನಿದೆ ಎನ್ನುವ ಎಲ್ಲ ಲೆಕ್ಕವೂ ಇದೆ. ಇದನ್ನು ಪರಿಶೀಲನೆ ನಡೆಸಲಿ, ಅದನ್ನು ಎಲ್ಲರೂ ನೋಡಲಿ. ನಾವುಗಳು ಯಾರೂ ರೈತರ ವಿರುದ್ಧ ಹೋಗಿಲ್ಲ, ಆ ಕೆಲಸ ಮಾಡುವುದೂ ಇಲ್ಲ” ಎಂದು ತಿಳಿಸಿದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

Next Post

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

Related Posts

Top Story

M B Patil: ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ರೂ. ಹೂಡಿಕೆ..!!

by ಪ್ರತಿಧ್ವನಿ
July 29, 2025
0

ವರ್ಷದಲ್ಲಿ ವೇಮಗಲ್‌ನಲ್ಲಿ ತಯಾರಿಕೆ ಆರಂಭ, ಬಳಿಕ ವಿಜಯಪುರದಲ್ಲೂ ಘಟಕ ಸ್ಥಾಪನೆ ಬೆಂಗಳೂರು: ಸಿವಿಸಿ ಮತ್ತು ಪಿವಿಸಿ ಪೈಪುಗಳ ಉತ್ಪಾದಿಸುವ ಪೊದ್ದಾರ್‌ ಪ್ಲಂಬಿಂಗ್‌ ಸಿಸ್ಟಂ ಪ್ರೈವೇಟ್‌ ಲಿಮಿಟೆಡ್‌ ರಾಜ್ಯದಲ್ಲಿ...

Read moreDetails
ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

July 29, 2025

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

July 29, 2025
ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

July 29, 2025
ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

July 29, 2025
Next Post

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

Recent News

Top Story

M B Patil: ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ರೂ. ಹೂಡಿಕೆ..!!

by ಪ್ರತಿಧ್ವನಿ
July 29, 2025
ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !
Top Story

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

by Chetan
July 29, 2025
Top Story

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

by ಪ್ರತಿಧ್ವನಿ
July 29, 2025
Top Story

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

by ಪ್ರತಿಧ್ವನಿ
July 29, 2025
ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 
Top Story

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

by Chetan
July 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M B Patil: ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ರೂ. ಹೂಡಿಕೆ..!!

July 29, 2025
ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

July 29, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada