• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಾಸಕ ಮುನಿರತ್ನ ಅಭಿನಯದ ‘ಆಸಿಡ್ ಮೊಟ್ಟೆ’ ಸಿನಿಮಾ 100 ದಿನ ಓಡಿಸಿ: ಡಿ.ಕೆ. ಸುರೇಶ್ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
December 28, 2024
in Top Story, ಕರ್ನಾಟಕ, ರಾಜಕೀಯ
0
ಶಾಸಕ ಮುನಿರತ್ನ ಅಭಿನಯದ ‘ಆಸಿಡ್ ಮೊಟ್ಟೆ’ ಸಿನಿಮಾ 100 ದಿನ ಓಡಿಸಿ: ಡಿ.ಕೆ. ಸುರೇಶ್ ವಾಗ್ದಾಳಿ
Share on WhatsAppShare on FacebookShare on Telegram

“ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ. ಶಾಸಕ ಮುನಿರತ್ನ ಅಭಿನಯದ ‘ಆಸಿಡ್ ಮೊಟ್ಟೆ’ ಸಿನಿಮಾ 100 ದಿನ ಓಡಿಸಿ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.

ADVERTISEMENT

ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

“ವಿಡಿಯೋ ಪ್ರಕರಣ ಹಾಗೂ ಮಾಧ್ಯಮದ ವರದಿಗಳನ್ನು ನೋಡಿದಾಗ ಬಿಜೆಪಿ ಶಾಸಕರು, ನನ್ನ ಮೇಲೆ, ನನ್ನ ಸಹೋದರ ಹಾಗೂ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ಹಾಗೂ ಅವರ ತಂದೆ ವಿರುದ್ಧ ನೇರ ಆರೋಪ ಮಾಡಿದ್ದಾರೆ.

ಈ ವಿಡಿಯೋ ಅತ್ಯುತ್ತಮವಾಗಿ ಮೂಡಿ ಬಂದಿದೆ. ಆಸಿಡ್ ದಾಳಿ ಎಂದ ಮೂರು ಸೆಕೆಂಡ್ ನಲ್ಲಿ ಮೊಟ್ಟೆ ಎಸೆಯಲಾಗಿದೆ. ಕನ್ನಡ ಚಿತ್ರರಂಗದ ಅಧ್ಯಕ್ಷ, ನಿರ್ಮಾಪಕರು, ಚಿತ್ರಕಥೆ ತಿರುಚುವ ಕೆಲಸ ಮಾಡಿದ್ದ ಮುನಿರತ್ನ, ಈಗ ತಾವೇ ನಟನೆಗೂ ಇಳಿದಿದ್ದಾರೆ ಎಂದು ಈ ವಿಡಿಯೋ ನೋಡಿದ ಮೇಲೆ ನನಗೆ ತಿಳಿಯಿತು. ಅದಕ್ಕಾಗಿ ಒಳ್ಳೆ ಡ್ರಾಮಾ ಮಾಡಿ ಮಾಧ್ಯಮಗಳ ಕೈಗೆ ನೀಡಿದ್ದಾರೆ. ಮಾಧ್ಯಮಗಳು ಕೂಡ ಏನೂ ಸುದ್ದಿ ಇಲ್ಲ ಎಂದು ಇದನ್ನು ಚೆನ್ನಾಗಿ ಬಿತ್ತರಿಸಿದ್ದೀರಿ. ಅಭಿನಯ ಮಾಡಿದ ಅವರಿಗೂ ಅಭಿನಂದನೆ, ಅದನ್ನು ತೋರಿಸಿದ ನಿಮಗೂ ಅಭಿನಂದನೆಗಳು.

Munirathna: ಮುನಿರತ್ನಗೆ ದೂರು ಕೊಟ್ಟ ಮಹಿಳೆ ತಿರುಗೇಟು..! #mla #bjp #munirathna #videoviral #pratidhvani

ಈ ವಿಚಾರವಾಗಿ ಪ್ರಧಾನಮಂತ್ರಿ, ಕೇಂದ್ರ ಗೃಹಸಚಿವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಅವರು ಅನೇಕ ಸಿನೆಮಾ ಮಾಡಿದ್ದು, ಕೆಲವು ಡಬ್ಬಾ ಯಶಸ್ವಿಯಾದರೆ, ಮತ್ತೆ ಕೆಲವು ಯಶಸ್ವಿಯಾಗಿಲ್ಲ. ಹೀಗಾಗಿ ಹೊಸ ಸ್ಕ್ರಿಪ್ಟ್ ಸಿದ್ಧಪಡಿಸುತ್ತಿದ್ದಾರೆ. ಮೊದಲು ಮಾಧ್ಯಮಗಳನ್ನು ಬಳಸಿಕೊಂಡು ಮಾರುಕಟ್ಟೆ ಇದ್ದರೆ ನಂತರ ಸಿನಿಮಾ ಮಾಡಲು ಮುಂದಾಗಿದ್ದಾರೆ.

ಎಲ್ಲವನ್ನು ಸಿಬಿಐ ತನಿಖೆಗೆ ನೀಡಲಿ:

ಈ ಪ್ರಕರಣವನ್ನು ಸಿಬಿಐಗೆ ನೀಡಲಿ. ಅವರು ಗೃಹಮಂತ್ರಿಗೆ ಪತ್ರ ಬರೆದು ಎಸ್ ಪಿಜಿ ಭದ್ರತೆಯನ್ನೇ ಪಡೆಯಲಿ. ಕಾರಣ ಅವರ ಬಳಿ ರಘು ಎಂಬ ಚಾಲಕ ಇದ್ದ. ಅವನು ಏನಾದ ಎಂದು ತಿಳಿಯಬೇಕಲ್ಲವೇ. ಉಳಿದ ವಿಚಾರಗಳನ್ನು ಮಾಧ್ಯಮಗಳೇ ತನಿಖೆ ಮಾಡಿ ಪ್ರಸಾರ ಮಾಡಿ. ಮತ್ತೊಬ್ಬ ಮಳ್ಳತಹಳ್ಳಿ ರಂಜಿತ್ ಎಂಬ ಹುಡುಗನ ಕೈ ಕಾಲು ಮುರಿದಿದ್ದಾರೆ. ಇಷ್ಟು ದಿನ ಅವರ ಖಾಸಗಿ ವಿಚಾರ ಮಾತನಾಡಬಾರದು ಎಂದು ಸುಮ್ಮನೆ ಇದ್ದೆ. ಈ ಪ್ರಕರಣಗಳನ್ನು ಸಿಬಿಐ ತನಿಖೆಯಾಗಲಿ ಎಂದು ಪತ್ರ ಬರೆಯಲಿ. ಅವರ ಹೈಕಮಾಂಡ್ ಗೆ ಕೊಟ್ಟಿರುವ ವರದಿಯಲ್ಲಿ ಇದನ್ನು ಸೇರಿಸಲಿ.

ಮತದಾರರ ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ಬಾಲಾಜಿ ಎಂಬುವವರು ತಿರುಪತಿ ಲಡ್ಡು ತೆಗೆದುಕೊಂಡು ಹೋಗಿ ಕೊಟ್ಟರಂತೆ. ಇದರ ಮೇಲೂ ಸಿಬಿಐ ತನಿಖೆಯಾಗಲಿ.

ನಮ್ಮ ಹೆಸರು ಹೇಳಿದರೆ ಮಾತ್ರ ಅವರ ಸಿನಿಮಾ ನಡೆಯುವುದು:

ಆದಿಚುಂಚನಗಿರಿಯಲ್ಲಿ MLA Munirathnaಪ್ರಮಾಣ ಮಾಡ್ಲಿ ಅಂತ ಸವಾಲು ಹಾಕಿದ ದೂರುದಾರೆ #pratidhvani #politics #bjp

ನನ್ನನ್ನು ಸೋಲಿಸಿದರು ಎಂದು ಹೇಳುತ್ತಾರೆ. ನನ್ನನ್ನು ಸೋಲಿಸಿದವರು ಜನರೇ ಹೊರತು ಬಿಜೆಪಿ ನಾಯಕರಲ್ಲ ಎಂದು ಫಲಿತಾಂಶ ಬಂದ ದಿನವೇ ಹೇಳಿದ್ದೇನೆ. ಇವರ ಯೋಗ್ಯತೆಗೆ ನನ್ನ ಸೋಲಿಸಲು ಆಗುವುದಿಲ್ಲ. ಜನ ತೀರ್ಮಾನಿಸಿ ನನ್ನನ್ನು ಸೋಲಿಸಿದ್ದಾರೆ. ಅದನ್ನು ನಾನು ಒಪ್ಪಿದ್ದೇನೆ. ಇವರು ದೊಡ್ಡ ಸಾಧನೆ ಮಾಡಿರುವವರಂತೆ ನನ್ನ ಹೆಸರು ಹೇಳಿಕೊಂಡು ಇವರ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ನನ್ನ ಹಾಗೂ ನನ್ನ ಅಣ್ಣನ ಹೆಸರು ಹೇಳಿದರಷ್ಟೇ ಇವರ ಸಿನಿಮಾ ನಡೆಯುತ್ತದೆ.

ಸುಟ್ಟು ಹೋಗಿದ್ದ ಮುನಿರತ್ನ ಕೂದಲು ವಾಪಸ್ ಬಂದಿದೆ:

ಅವರನ್ನು ಪರೀಕ್ಷೆ ಮಾಡಿರುವ ದೊಡ್ಡ ಡಾಕ್ಟರ್, ಕೂದಲು ಸುಟ್ಟಿದೆ ಸಿ.ಟಿ ಸ್ಕ್ಯಾನ್ ಮಾಡಬೇಕು ಎಂದಿದ್ದಾರೆ. ಆದರೆ ನಿನ್ನೆ ಸಂಜೆ ಮತ್ತೊಂದು ವಿಡಿಯೋ ನೋಡಿದ್ದು, ಅದರಲ್ಲಿ ಮುನಿರತ್ನ ಅವರು ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಅವರ ಮನೆಯಿಂದ ಹೊರಗೆ ಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲಿ ಮುನಿರತ್ನ ಅವರಿಗೆ ಸುಟ್ಟು ಹೋಗಿದ್ದ ಕೂದಲು ಮತ್ತೆ ವಾಪಸ್ ಬಂದಿವೆ. ಮುನಿರತ್ನ ತಲೆಗೆ ಟೋಕನ್ ಹಾಕಿದ್ದಾರೋ, ಅಥವಾ ನಿಜವಾದ ಕೂದಲು ಇಟ್ಟುಕೊಂಡಿದ್ದಾರೋ ಎಂದು ಮಾಧ್ಯಮಗಳೇ ಪರೀಕ್ಷೆ ಮಾಡಬೇಕು. ದೊಡ್ಡ ಡಾಕ್ಟರ್ ಕೂದಲು ಸುಟ್ಟಿದೆ ಎಂದು ಹೇಳಿದ ಮೇಲೆ ನಾವು ನಂಬಲೇ ಬೇಕಲ್ಲವೇ?

ಸಿ.ಟಿ. ರವಿಗೆ ತಮ್ಮ ತಾಯಿ ನೆನಪಾಗಲಿಲ್ಲವೇ

Muniratna on Kusuma: ಡಿಕೆಶಿ, ಡಿಕೆ ಸುರೇಶ್ ಕುಸುಮಾ ಮಾತು ಕೇಳ್ತಾರೆ ಎಂದ ಮುನಿರತ್ನ  #pratidhvani

ಮುನಿರತ್ನ ಒಕ್ಕಲಿಗರ ಹೆಣ್ಣು ಮಕ್ಕಳ ವಿಚಾರದಲ್ಲಿ ಹೇಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಒಕ್ಕಲಿಗ ಹಾಗೂ ದಲಿತ ಮಹಿಳೆಯರನ್ನು ಮಂಚಕ್ಕೆ ಕರೆದು ಅಪಮಾನ ಮಾಡಿದ್ದಾರೆ. ಆತನ ಅಸಭ್ಯ ವರ್ತನೆಯ ಆಡಿಯೋ ನಿಜ ಎಂದು ಎಫ್ ಎಸ್ ಎಲ್ ವರದಿಯಲ್ಲಿ ಸಾಬೀತಾಗಿದೆ. ಹೀಗಾಗಿ ಎಸ್ ಐಟಿಯು ಎಫ್ ಐಆರ್ ದಾಖಲಿಸಿದೆ. ಆತ ಹೇಗೆ ನೀಚವಾಗಿ ನಡೆದುಕೊಂಡಿದ್ದಾನೆ ಎಂಬುದನ್ನು ಮಾಧ್ಯಮಗಳು ಸರಿಯಾಗಿ ಜನರಿಗೆ ತೋರಿಸಬೇಕು. ಇಷ್ಟೆಲ್ಲಾ ಆದರೂ ರವಿ ಅವರು ಆತನ ಮನೆಗೆ ಹೋಗಿದ್ದಾರೆ. ಅವರು ತಮ್ಮ ತಾಯಿಯನ್ನು ಮರೆತು ಅವರ ಮನೆಗೆ ಹೋಗಿದ್ದಾರೆ.

ಪಾಪ, ಬಿಜೆಪಿಯವರು ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ:

ಒಬ್ಬ ವಿಧಾನ ಪರಿಷತ್ತಿನಲ್ಲಿ ಮಹಿಳೆಗೆ ವೇ* ಎಂದು ಕರೆಯುತ್ತಾರೆ. ಮತ್ತೊಬ್ಬ ಸರ್ಕಾರದ ಆಡಳಿತ ನಡೆಸುವ ದೇವಾಲಯದಲ್ಲಿ ಮಹಿಳೆಯರ ಅತ್ಯಾಚಾರ ಮಾಡುತ್ತಾನೆ. ಬಿಜೆಪಿಯವರು ಇಂತಹವರನ್ನು ಒಪ್ಪಿಕೊಂಡು ಕೂತಿದ್ದಾರೆ. ಇಷ್ಟಾದರೂ ಪಾಪ, ಬಿಜೆಪಿಯವರು ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ.

ವಿಕಾಸಸೌಧದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಿಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಲು ಸಾಧ್ಯವಾಗಲಿಲ್ಲ. ವಿಧಾನ ಪರಿಷತ್ತಿನಲ್ಲಿ ನಡೆದ ನೀಚ ಕೃತ್ಯವನ್ನು ಪ್ರಶ್ನೆ ಮಾಡಲಿಲ್ಲ. ಈ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲಿ. ನಾನು ಇಂತಿಂತಹ ಮಾಧ್ಯಮಕ್ಕೆ ಇಷ್ಟು ಪ್ರಮಾಣದ ಸಹ ಮಾಲೀಕ ಎಂದು ಹೇಳುತ್ತಾರೆ. ಇದಕ್ಕೆ ಬೇಕಾದ ದಾಖಲೆಯನ್ನು ನಾನು ನೀಡುತ್ತೇನೆ.

ಅವರು ನಿಮ್ಮ ಮಾಧ್ಯಮ ಸಂಸ್ಥೆಗಳ ಸಹ ಮಾಲೀಕರಾಗಿದ್ದರೆ ಅದನ್ನು ಪ್ರಶ್ನೆ ಮಾಡುವ ನೈತಿಕತೆ ಮಾಧ್ಯಮದವರಿಗೆ ಇಲ್ಲವೇ? ರಾಜಕೀಯ ವಿಚಾರದಲ್ಲಿ ನನ್ನ ಬಗ್ಗೆ ಕೇವಲವಾಗಿ ಮಾತನಾಡುತ್ತೀರಿ. ವಿಕಾಸಸೌಧದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ಈ ಪವಿತ್ರ ಜಾಗವನ್ನು ಮೋಜು ಮಸ್ತಿಗೆ ಬಳಸಿರುವುದು ಬಿಜೆಪಿ ನಾಯಕರ ಕಣ್ಣಿಗೆ ಕಾಣುತ್ತಿಲ್ಲವೇ?

Aishwarya Gowda' : ಐಶ್ವರ್ಯಗೌಡ ಮಾತಾಡಿರುವ ವಿಡಿಯೋ ಲಭ್ಯ #pratidhvani

ಈ ಎಲ್ಲ ವಿಚಾರಗಳ ಬಗ್ಗೆ ಮಾತನಾಡಬಾರದು ಎಂದು ನಿರ್ಧರಿಸಿದ್ದೆ. ಆದರೆ ಬಿಜೆಪಿ ಶಾಸಕರೆ ಈ ವಿಚಾರವಾಗಿ ನಾನು ಮಾತನಾಡುವಂತೆ ಉತ್ತೇಜನ ನೀಡಿದ್ದಾರೆ. ನಮ್ಮ ಬಗ್ಗೆ ನಿರ್ಧಾರ ಮಾಡಬೇಕಿರುವುದು ಜನರು. ನಿಮ್ಮ ವಿರುದ್ಧ ಏನೆಲ್ಲಾ ಹಗರಣಗಳಿವೆ ಎಂದು ಲೋಕಾಯುಕ್ತ ಸಂಸ್ಥೆ ತನಿಖೆಯಲ್ಲಿದೆ. ಮಾತೆತ್ತಿದರೆ ಡಿ.ಕೆ. ಶಿವಕುಮಾರ್, ಡಿ.ಕೆ ಸುರೇಶ್. ನಾನು ಎಂದೂ ಮುನಿರತ್ನ, ಕೊರಂಗು ಎಂದು ಹೇಳಿಲ್ಲ. ಕೊರಂಗು ನಿಮ್ಮ ಸಹೋದರ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ. ಕೊರಂಗು ಯಾರು? ಮಾಧ್ಯಮದ ಸ್ನೇಹಿತರು ಹೇಳಬೇಕಲ್ಲವೇ? ಕೊರಂಗು ಬಳಸಿಕೊಂಡು ಮುನಿರತ್ನ ಏನೆಲ್ಲಾ ಮಾಡಿದ್ದಾರೆ ಎಂದು ಮಾಧ್ಯಮಗಳು ಹೇಳಬೇಕಲ್ಲವೇ?

ಬಿಜೆಪಿಯಲ್ಲಿ ಅತ್ಯುತ್ತಮ ನಟರ ದಂಡು:

ರಮೇಶ್ ಜಾರಕಿಹೊಳಿ ಅವರು ಕೂಡ ಶಿವಕುಮಾರ್ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿಯಲ್ಲಿ ಎಂತೆಂಥ ನಟರಿದ್ದಾರೆ. ಅದರಲ್ಲಿ ರಮೇಶ್ ಜಾರಕಿಹೊಳಿ ಅವರು ಒಬ್ಬರು. ಇಂತಹ ಕೊಳಕು ವಿಚಾರಗಳ ಬಗ್ಗೆ ಮಾತನಾಡಬಾರದು ಎಂದು ಇಷ್ಟು ದಿನ ಮೌನವಾಗಿದ್ದೆ. ಅವರೇ ನನ್ನ ಬಾಯಲ್ಲಿ ಈ ವಿಚಾರ ಮಾತನಾಡಿಸುತ್ತಿದ್ದಾರೆ.

ಯಡಿಯೂರಪ್ಪ ಅವರ ವಿಚಾರವಾಗಿ ವಿವರಣೆ ನೀಡುವುದಾಗಿ ಯಾರೋ ಮಹಿಳೆ ವಿಜಯೇಂದ್ರ ಅವರ ಸಮಯ ಕೇಳಿದ್ದಾರಲ್ಲವೇ? ಮಾಧ್ಯಮಗಳ ಮುಂದೆ ಚರ್ಚೆ ಮಾಡಲು ಸಮಯ ನೀಡಲಿ. ಇದರ ಹಿಂದಿರುವ ರಹಸ್ಯವೇನು ಎಂದು ತಿಳಿಯಲು ಮಾಧ್ಯಮಗಳು ವಿಜಯೇಂದ್ರ ಜತೆ ಮಾತನಾಡಿ ಸಮಯ ಕೊಡಿಸಲಿ. ಈ ಎಲ್ಲಾ ಪ್ರಕಾರಣಗಳನ್ನು ಸಿಬಿಐಗೆ ನೀಡಲಿ.

ಸಿ.ಟಿ. ರವಿ ಅವರು ಆರ್.ಅಶೋಕ್ ಅವರನ್ನು ಕರೆದುಕೊಂಡು ಹೋಗಿ ಸಿಬಿಐ ತನಿಖೆಗೆ ನೀಡಲಿ.

ಪ್ರಶ್ನೋತ್ತರ

ಎಸ್ ಐಟಿ ಎಫ್ ಐಆರ್ ನಲ್ಲಿ ಏಡ್ಸ್ ಟ್ರಾಪ್ ಸೇರಿದಂತೆ ಇತರ ವಿಚಾರಗಳನ್ನು ಸ್ಪಷ್ಟವಾಗಿ ತಿಳಿಸಿರುವ ಬಗ್ಗೆ ಕೇಳಿದಾಗ, “ಬಿಜೆಪಿಯವರಿಗೆ ನೈತಿಕತೆ ಇದ್ದರೆ ಯಾವ ರೀತಿ ಮಟ್ಟ ಹಾಕಬೇಕು, ಶಿಕ್ಷೆ ನೀಡಬೇಕೋ ಅದನ್ನು ಮಾಡುತ್ತಾರೆ. ಆದರೆ ಬಿಜೆಪಿಯವರ ಬಳಿ ನೈತಿಕತೆ, ಸಂಸ್ಕೃತಿ ಏನೂ ಇಲ್ಲ. ಅವರು ಹೇಳುವುದೊಂದು ಮಾಡುವುದೊಂದು. ಅವರಿಗೆ ಹೇಳಿ ಪ್ರಯೋಜನವಿಲ್ಲ. ಸಮಯ ಬಂದಾಗ ಜನರೇ ಉತ್ತರ ನೀಡುತ್ತಾರೆ. ಮಾಧ್ಯಮಗಳಿಗಾಗಿ ಒಳ್ಳೊಳ್ಳೆ ಸಿನಿಮಾ ಬರುತ್ತಿವೆ. ತಮಿಳುನಾಡಿನಲ್ಲಿ ಚಾಟಿ ಏಟಿನ ಸಿನಿಮಾ ಬಂದಿದೆ. ಮುನಿರತ್ನ ಸಿನಿಮಾಗೆ ಏನೆಂದು ಕರೆಯಬಹುದು? ಆಸಿಡ್ ಮೊಟ್ಟೆ ಎಂದು ಕರೆಯಬಹುದೇ? ಮುನಿರತ್ನಗೆ ಒಳ್ಳೆಯ ಹೆಸರು ಸಲಹೆ ನೀಡಿ. ಅವರು ನಮ್ಮ ಜತೆ ಇದ್ದರೂ ನಾಲ್ಕೈದು ವರ್ಷಗಳಿಂದ ಬಿಜೆಪಿ ಸೇರಿದ್ದಾರೆ. ಅಲ್ಲಿಗೆ ಹೋಗಿ ಹೊಸ ಹೊಸ ಐಡಿಯಾ ಮಾಡುತ್ತಿದ್ದಾರೆ. ಮೊಟ್ಟೆಯೊಳಗೆ ಆಸಿಡ್ ಹೇಗೆ ಹಾಕಬಹುದು, ಕೂದಲು ಸುಟ್ಟಿದೆ ಎಂದು ಸಿ.ಟಿ ಸ್ಕ್ಯಾನ್ ಮಾಡೋದು, ಮರುದಿನ ಕೂದಲು ವಾಪಸ್ ಬರೋ ಐಡಿಯಾ ಬರುವುದು ಯಾರಿಗೆ? ಸಿನಿಮಾದವರಿಗೆ ಅಲ್ಲವೇ. ಗ್ರಾಫಿಕ್ಸ್ ಮಾಡೋದು ಅವರೇ ಅಲ್ಲವೇ? ಇದೆಲ್ಲವನ್ನು ಮಾಧ್ಯಮದವರು ರಾಜ್ಯದ ಜನರಿಗೆ ಸರಿಯಾಗಿ ತೋರಿಸಿ ಎಂದು ಕೈಮುಗಿದು ಕೇಳುತ್ತೇನೆ” ಎಂದು ತಿರುಗೇಟು ನೀಡಿದರು.

ಶೀಘ್ರದಲ್ಲೇ ಪೊಲೀಸ್ ಆಯುಕ್ತರಿಗೆ ದೂರು

ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರು ಬಳಸಿಕೊಂಡಿದ್ದಾರೆ ಎಂದು ಕೇಳಿದಾಗ, “ನಾನು ಕೂಡ ನಾಲ್ಕೈದು ದಿನಗಳ ಹಿಂದೆ ಇದನ್ನು ಗಮನಿಸಿದೆ. ಯಾರೇ ನನ್ನ ಹೆಸರು ದುರ್ಬಳಕೆ ಮಾಡಿಕೊಂಡಿದ್ದರೂ ತನಿಖೆ ಮಾಡಲಿ. ನಾನು ಇದನ್ನು ಪರಿಶೀಲಿಸಿ, ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಎರಡು ಮೂರು ದಿನಗಳಲ್ಲಿ ಪೊಲೀಸ್ ಆಯುಕ್ತರಿಗೆ ಈ ಬಗ್ಗೆ ದೂರು ನೀಡುತ್ತೇನೆ. ಯಾರೇ ಈ ತಪ್ಪು ಮಾಡಿದ್ದರೂ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಅನ್ಯಾಯ ಆಗಿರುವವರಿಗೆ ನ್ಯಾಯ ಸಿಗಬೇಕು” ಎಂದು ತಿಳಿಸಿದರು.

ಶ್ವೇತಾ ಗೌಡ ಅವರ ಪ್ರಕರಣದಲ್ಲಿ ಬಿಜೆಪಿ ನಾಯಕನ ಹೆಸರು ಕೇಳಿಬಂದಾಗ ಬಂಧನ ಆಗಿ ವಿಚಾರಣೆ ನಡೆಯುತ್ತಿದೆ, ಈ ಪ್ರಕರಣದಲ್ಲಿ ಆ ರೀತಿ ಆಗಿಲ್ಲ. ಈ ತಾರತಮ್ಯ ಏಕೆ ಎಂದು ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ನಾನು ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಕೇಳುತ್ತೇನೆ” ಎಂದು ತಿಳಿಸಿದರು.

ನಟ ಧರ್ಮ ಅವರು ನಿಮ್ಮ ಧ್ವನಿಯಲ್ಲಿ ಮಾತನಾಡಿದ್ದಾರೆ ಎಂದು ಕೇಳಿದಾಗ, “ಕೆಲವು ಸಿನಿಮಾದವರು ಸೇರಿ ಈ ರೀತಿ ಮಾಡುತ್ತಿದ್ದಾರೆ. ನಾನು ಏನು ಮಾಡಲಿ. ಈ ಪ್ರಕರಣದ ಬಗ್ಗೆ ನಾನು ಪೊಲೀಸ್ ಆಯುಕ್ತರಿಗೆ ಪತ್ರ ಬರೆಯುತ್ತಿದ್ದೇನೆ. ನಿಮಗೂ ಆ ದೂರಿನ ಪತ್ರ ಕಳುಹಿಸಿಕೊಡುತ್ತೇನೆ” ಎಂದು ತಿಳಿಸಿದರು.

ಐಶ್ವರ್ಯಾ ಅವರು ಕಾಂಗ್ರೆಸ್ ಸೇರಿದ್ದರಾ ಎಂದು ಕೇಳಿದಾಗ, “ಅವರು ಒಂದು ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದರು. ನಾನು ಆ ಕಾರ್ಯಕ್ರಮಕ್ಕೆ ಹೋಗಿದ್ದೆ. ಮತ್ತೊಮ್ಮೆ ಅಣ್ಣಮ್ಮ ದೇವಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಅಷ್ಟು ಬಿಟ್ಟರೆ ನನಗೂ ಆಕೆಗೂ ಬೇರೆ ಸಂಬಂಧ ಇಲ್ಲ. ನನಗೆ ಇರುವುದು ಒಬ್ಬಳೇ ತಂಗಿ. ನನಗೆ ಗೊತ್ತಿಲ್ಲದೆ ಇನ್ನೊಬ್ಬ ತಂಗಿ ಯಾರು ಎಂದು ನಮ್ಮ ಅಣ್ಣಾ ಬೇಜಾರಾಗಿದ್ದಾನಂತೆ” ಎಂದು ಹಾಸ್ಯ ಚಟಾಕಿ ಹಾರಿಸಿದರು.

ಆಕೆ ನಿಮಗೆ ಬೆಳ್ಳಿ ಖಡ್ಗ ಕೊಟ್ಟಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಎಂದು ಕೇಳಿದಾಗ, “ನಾನು ಆ ಕ್ಷಣದಲ್ಲೇ ಅದನ್ನು ದೇವಸ್ಥಾನಕ್ಕೆ ವಾಪಸ್ ನೀಡಿದ್ದೆ. ನಾನು ಹಾಗೂ ನನ್ನ ಅಣ್ಣ ಅಂತಹ ಉಡುಗೊರೆಯನ್ನು ಅಲ್ಲೇ ವಾಪಸ್ ನೀಡುತ್ತೇವೆ. ಅವುಗಳನ್ನು ಮನೆಗೆ ವಾಪಸ್ ತರುವುದಿಲ್ಲ” ಎಂದರು.

Tags: dk shivakumar vs munirathnadk sureshdk suresh about munirathnadk suresh angry on munirathnadk suresh latest newsdk suresh newsdk suresh on munirathnadk suresh slams munirathnadk suresh vs ashwath narayandk suresh vs munirathnadk suresh warning to munirathnamla munirathnaMunirathnamunirathna latest newsmunirathna newsmunirathna protest against dk shivakumar dk sureshmunirathna vs dk shivakumarmunirathna vs dk suresh
Previous Post

ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

Next Post

BIG BREAKING ದಕ್ಷಿಣ ಕೊರಿಯಾ ವಿಮಾನ ದುರಂತ ಸಾವಿನ ಸಂಖ್ಯೆ 85 ಕ್ಕೆ ಏರಿಕೆಯಾಗಿದೆ 

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

BIG BREAKING ದಕ್ಷಿಣ ಕೊರಿಯಾ ವಿಮಾನ ದುರಂತ ಸಾವಿನ ಸಂಖ್ಯೆ 85 ಕ್ಕೆ ಏರಿಕೆಯಾಗಿದೆ 

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada