ಚಿಕ್ಕಬಳ್ಳಾಪುರದಲ್ಲಿ (Chikkaballapura) ಶಾಸಕ ಪ್ರದೀಪ್ ಈಶ್ವರ್ (Pradeep eshwar) ಮನೆ ಮೇಲೆ ತಡರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕರ ಮನೆ ಮೇಲೆ ಕಲ್ಲು ತೂರಿದ್ದು ದುರ್ಘಟನೆಯಲ್ಲಿ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.
![](https://pratidhvani.com/wp-content/uploads/2024/06/IMG_8090.jpeg)
ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ (Dr.k.sudhakar) ಗೆಲುವು ಹಿನ್ನೆಲೆ ಬೆನ್ನಲ್ಲೇ ಕಲ್ಲು ತೂರಾಟ ನಡೆದಿರೋದು ದ್ವೇಷದ ರಾಜಕಾರಣದ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
![](https://pratidhvani.com/wp-content/uploads/2024/06/IMG_8091.jpeg)
ಚಿಕ್ಕಬಳ್ಳಾಪುರದಲ್ಲಿ ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್ರನ್ನ ಸೋಲಿಸಿದ್ದ ಪ್ರದೀಪ್ ಈಶ್ವರ್ ನಿರಂತರವಾಗಿ ಅವರ ಮೇಲೆ ವಾಗ್ದಾಳಿ ನಡೆಸಿದ್ದರು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೂಡ ಸುಧಾಕರ್ರನ್ನ ಸೋಲಿವಂತೆ ಸವಾಲು ಹಾಕಿದ್ದರು.