• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ನಂದಗುಡಿ ಕೈಗಾರಿಕಾ ಪ್ರದೇಶ: 

ಪ್ರತಿಧ್ವನಿ by ಪ್ರತಿಧ್ವನಿ
October 28, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿಯಲ್ಲಿ ಕೈಗಾರಿಕೆಗಳಿಗಾಗಿ 1,000 ಎಕರೆ ಭೂಸ್ವಾಧೀನಕ್ಕೆ ಪ್ರಾಥಮಿಕ ಹಂತದ ಅಧಿಸೂಚನೆ ಆಗಿದ್ದು, ತ್ವರಿತಗತಿಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಬೇಕು. ಈ ಮೂಲಕ ಆಧುನಿಕ ಕೈಗಾರಿಕೆಗಳು ಇಲ್ಲಿಗೆ ಬರಲು ಅನುವು ಮಾಡಿಕೊಡಬೇಕು ಎಂದು ಅಲ್ಲಿನ ಶಾಸಕ ಶರತ್ ಬಚ್ಚೇಗೌಡ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

CM Siddaramaiah : CM  ಸಿದ್ದರಾಮಯ್ಯ ಪೊಲೀಸರ ಮುಂದೆ ಭರ್ಜರಿ ಕಾಮಿಡಿ..! #pratidhvani #karnatakapolice

ಮಂಗಳವಾರ ಅವರು ಖನಿಜ ಭವನದಲ್ಲಿ ಈ ಸಂಬಂಧ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವರೊಂದಿಗೆ ಮಾತನಾಡಿದ ಶಾಸಕರು, ಹೊಸಕೋಟೆಯು ಬೆಂಗಳೂರಿಗೆ ಸಮೀಪದಲ್ಲಿದ್ದು, ಕೈಗಾರಿಕೆಗಳ ಬೆಳವಣಿಗೆಗೆ ಸೂಕ್ತವಾಗಿದೆ. ಜಾಗತಿಕ ಮಟ್ಟದ ಹತ್ತಾರು ಕಂಪನಿಗಳು ಇಲ್ಲಿ ತಮ್ಮ ಡೇಟಾ ಸೆಂಟರ್ ಗಳನ್ನು ಆರಂಭಿಸಲು ಆಸಕ್ತಿ ಹೊಂದಿವೆ. ಇದನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು. ಸದ್ಯಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾಥಮಿಕ ಹಂತದಲ್ಲಿ ನಿಂತಿದೆ. ಇದನ್ನು ತ್ವರಿತವಾಗಿ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಿ, ಅಂತಿಮ ಅಧಿಸೂಚನೆ ಹೊರಡಿಸಬೇಕು. ಹಲವು ಕಂಪನಿಗಳು ಈ ಭಾಗದಲ್ಲಿ ಭೂಮಿ ಬೇಕೆಂದು ಕೇಳುತ್ತಿವೆ ಎಂದು ವಿವರಿಸಿದ್ದಾರೆ.

ಇದಕ್ಕೆ ಸ್ಪಂದಿಸಿದ ಸಚಿವರು, `ಹೊಸಕೋಟೆ ತಾಲ್ಲೂಕಿನ ಶಾಸಕರು ಗಮನಕ್ಕೆ ತಂದಿರುವ ವಿಚಾರಕ್ಕೆ ಸ್ಪಂದಿಸಿ ಕ್ರಮ ಕೈಗೊಳ್ಳಲಾಗುವುದು. ನಂದಗುಡಿಯಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಸ್ವೀಡಿಷ್ ಕೈಗಾರಿಕಾ ಪಾರ್ಕ್ ಮತ್ತು ತೈವಾನ್ ಕೈಗಾರಿಕಾ ಪಾರ್ಕ್ ಸ್ಥಾಪಿಸುವ ಉದ್ದೇಶ ಸರಕಾರದ್ದಾಗಿದೆ. ಇದು ಸಾಧ್ಯವಾದರೆ, ಹೊಸಕೋಟೆ ಸುತ್ತಮುತ್ತಲಿನ ಯುವಜನರಿಗೂ ಉದ್ಯೋಗ ಸಿಗಲಿದ್ದು, ಆರ್ಥಿಕ ಅಭಿವೃದ್ಧಿಗೆ ವೇಗ ದೊರೆಯಲಿದೆ’ ಎಂದಿದ್ದಾರೆ.

Tags: prathap gowda patilsharat bache gowdasharath bacchegowdasharath bache gowdasharath bache gowda birthdaysharath bache gowda latest newssharath bache gowda on bjpsharath bache gowda reactionsharath bache gowda today newssharath bachegowda on katilsharath kumar bache gowdasharath kumar bache gowda assembly session 2024sharath kumar bache gowda assembly speechsharath kumar bache gowda on bjpsharath kumar bache gowda reactionsharath kumar bache gowda today latest news
Previous Post

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

Next Post

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada