ಬಿಜೆಪಿ (Bjp) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ರಾಯಚೂರು ನಗರ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶಿವರಾಜ್ ಪಾಟೀಲ್ (Shivraj Patil) ಹಾಡಿಹೊಗಳಿರುವ ವಿಡಿಯೋ ಒಂದು ವೈರಲ್ ಆಗಿದೆ.
ಲೋಕಸಭಾ ಚುನಾವಣೆ (MP Elections) ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸದ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಹೊಗಳಿದ್ದ ಡಾ.ಶಿವರಾಜ್ ಪಾಟೀಲ್ ಹೇಳಿಕೆ ಈಗ ಸದ್ದು ಮಾಡುತ್ತಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲಬೇಕು ಎಂಬ ಕಾರಣಕ್ಕೆ ಅಶೋಕ ಚಕ್ರವರ್ತಿಯಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ವಿಜಯೇಂದ್ರ ತಿರುಗಾಡುತ್ತಿದ್ದಾರೆ. ಈ ರಾಜ್ಯ ಕಂಡಂತ ಅತ್ಯಂತ ಕಿರಿಯ, ಮುತ್ಸದಿ ರಾಜಕಾರಣಿ ವಿಜಯೇಂದ್ರ ಎಂದು ವೇದಿಕೆ ಮೇಲೆ ಶಾಸಕ ಶಿವರಾಜ್ ಪಾಟೀಲ್ ಹಾಡಿಹೊಗಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಬಿಜೆಪಿಯಲ್ಲಿ ಈಗ ವಿಜಯೇಂದ್ರ ಯುವ ಆರಂಭವಾಗಿದೆ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಬರಲಿದೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಹೇಳಿದ್ದಾರೆ.
#Vijayendra #bjp #jds #congress #politics #shivarajpatil