• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹನಿಟ್ರ್ಯಾಪ್ ಬಗ್ಗೆ ಮಾತನಾಡಿದಕ್ಕೆ ಶಾಸಕರನ್ನು ಅಮಾನತು ಮಾಡಲಾಗಿದೆ. ಇದರಲ್ಲಿ ತಪ್ಪೇನಿಲ್ಲ: ಕಾರ್ಮಿಕ ಸಚಿವ ಸಂತೋಷ್‌ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
March 23, 2025
in ಇದೀಗ, ಕರ್ನಾಟಕ, ರಾಜಕೀಯ, ಶೋಧ
0
Share on WhatsAppShare on FacebookShare on Telegram

ಹುಬ್ಬಳ್ಳಿ: ಬಿಜೆಪಿಯವರು ಹನಿಟ್ರ್ಯಾಪ್ ವಿಚಾರವಾಗಿ ಸದನದಲ್ಲಿ ಚರ್ಚೆ ಮಾಡಬೇಕು ಅನ್ನೊ ಕಾರಣಕ್ಕೆ ಹದಿನೆಂಟು ಶಾಸಕರು ಆರು ತಿಂಗಳು ಅಮಾನತು ಆಗಿದ್ದಾರೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ADVERTISEMENT

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಷಯವನ್ನು ಸದನದಲ್ಲಿ ಮುಖ್ಯವಾಗಿ ತೆಗೆದುಕೊಳ್ಳಿ ಎಂದು ಬಿಜೆಪಿಯವರು ಕಲಾಪದಲ್ಲಿ ಗದ್ದಲ ಮಾಡಿದ್ದರು. ಆದರೆ ನಮ್ಮ ಸರ್ಕಾರ ಹನಿಟ್ರ್ಯಾಪ್‌ ಬಗ್ಗೆ ಸ್ಪಷ್ಟನೆ ನೀಡಿತ್ತು. ಉನ್ನತ ಮಟ್ಟದ ತನಿಖೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಹೇಳಿದ್ದರು. ಆದರೂ ಗಲಾಟೆ ಮಾಡಿದರು. ಇದು ಎಷ್ಟು ಸರಿ ನೀವೆ ಹೇಳಿ, ಸ್ಪೀಕರ್ ಹತ್ತಿರ ಗಲಾಟೆ ಮಾಡಿ ಕಾಗದ ಪತ್ರವನ್ನು ಅವರ ಮೇಲೆ ಎಸೆಯುವ ಅವಶ್ಯಕತೆ ಏನಿತ್ತು. ಹನಿಟ್ರ್ಯಾಪ್ ಬಗ್ಗೆ ಅವಸರ ಏನಿದೆ, ಈ ನಾಟಕ ಏನು? ಎಂದು ಕಿಡಿ ಕಾರಿದರು.

ಹನಿಟ್ರ್ಯಾಪ್‌ ಗಿಂತ ಚರ್ಚೆ ಮಾಡುವ ಹಲವು ವಿಷಯಗಳಿದ್ದವು. ರೈತರ ಸಮಸ್ಯೆ ಇದ್ದವು. ಕುಡಿಯುವ ನೀರಿನ ವಿಷಯದ ಬಗ್ಗೆ ಮಾತನಾಡಬೇಕಿತ್ತು. ಮುಖ್ಯಮಂತ್ರಿಗಳು ಉತ್ತರ ನೀಡಿದ ಮೇಲೂ ಹನಿಟ್ರ್ಯಾಪ್‌ ವಿಷಯವನ್ನೇ ಮುಖ್ಯವಾಗಿ ತೆಗೆಯಬೇಕಾದ ತುರ್ತು ಏನಿತ್ತು ಎಂದು ಪ್ರಶ್ನಿಸಿದರು.

ಬಿಜೆಪಿಯವರಿಗೆ ಪ್ರಚಾರ ಗಿಟ್ಟಿಸಿಕೊಳ್ಳಬೇಕು, ಮಾಧ್ಯಮಗಳಲ್ಲಿ ಬರಬೇಕು ಎಂಬ ಉದ್ದೇಶವಿದೆ. ಅವರ ಸಾಧನೆ ಏನಿದೆ. ನ್ಯಾಯ ಕಲಾಪದಲ್ಲಿ ಸಿಗುತ್ತಾ. ಬಿಜೆಪಿಯವರ ಈ ವರ್ತನೆ ನಾಚಿಕೆಗೇಡು. ಇದರ ಬಗ್ಗೆ ವಿಷಾದವಿದೆ ಎಂದರು.

ಹನಿಟ್ರ್ಯಾಪ್‌ ಅನ್ನೇ ತೆಗೆದುಕೊಂಡು ಸಾರ್ವಜನಿಕರಿಗೆ ಏನೋ ಪ್ರಯೋಜನ ಆಗಿದೆ ಅನ್ನೋ ರೀತಿ ಬಿಜೆಪಿಯವರು ಬಿಂಬಿಸಿದರು. ಲಿಖಿತ ದೂರು ನೀಡೋದು ಬೇಡ ಸರ್ಕಾರವೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತೆ.‌ ಸರ್ಕಾರ ಸದನದಲ್ಲಿ ಹೇಳಿದ ಮೇಲೆ ಮುಗಿಯಿತು. ಸ್ವತಃ ಸಿಎಂ ಅವರೇ ತನಿಖೆ ನಡೆಸುತ್ತೇವೆ ಅಂತ ಹೇಳಿದ್ದಾರೆ. ಇದನ್ನೇ ಪ್ರಚಾರಕ್ಕಾಗಿ, ಟಿವಿಯಲ್ಲಿ ತೋರಿಸುವ ಬದಲು ಸಾರ್ವಜನಿಕರಿಗೆ ಉಪಯೋಗವಾಗುವ ವಿಷಯ ತೋರಿಸಿ ಎಂದರು.

G Parameshwar : ರಾಜಣ್ಣ ಮೇಲೆ ಹನಿಟ್ರ್ಯಾಪ್ ಯತ್ನ ....ಪರಮೇಶ್ವರ್ ರಿಯಾಕ್ಷನ್ #pratidhvani

ಇದು ನಮ್ಮ ಸಮಾಜ ಅವನತಿಗೆ ಹೋಗುತ್ತಿರುವ ಸೂಚನೆ. ಇಂತಹ ವ್ಯವಸ್ಥೆಯಲ್ಲಿ ನಾವು ಇದ್ದೇವೆ. ಬೇರೆ ದೇಶಗಳಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತೆವೆ. ಆದರೆ ನಾವು ಬರೀ ಹನಿ ಟ್ರ್ಯಾಪ್ ಬಗ್ಗೆ ಮಾತನಾಡುತ್ತೇವೆ. ಇದು ನಾಚಿಕೇಡು ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಯಾವ ಮಾನದಂಡಗಳನ್ನು ಪರಿಗಣಿಸಿ ಕ್ಷೇತ್ರ ಮರುಹಂಚಿಕೆ ಮಾಡುತ್ತಿದೆ ಎಂಬ ಆತಂಕ ನಮಗಿದೆ. ಪಕ್ಷಾತೀತವಾಗಿ ಎಲ್ಲರಿಗೂ ಈ ಆತಂಕ ಇದೆ. ಪ್ರತಿನಿಧಿಸುವ ಅವಕಾಶ ಕಡಿಮೆಯಾದರೆ ನಮಗೆ ತೊಂದರೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ನಾವೆಲ್ಲ ಈ ಬಗ್ಗೆ ಪ್ರಶ್ನಿಸಬೇಕು ಎಂದರು.

Tags: 18 bjp leader suspended for 6 months in session18 bjp mlas suspended18 mla suspended for 6 months18 mlas suspended for 6 months18 mlas suspended from vidhana soudhabjp leaders suspendedbjp mla's suspended from assemblybjp mlas suspendedbjp mlas suspended from karnataka assemblybjp mlas suspended in karnatakaBreaking NewsHoneytrapHoneytrap Casekarnataka bjp mlas suspendedsuspended amid honey trap row
Previous Post

ಕಾಂಗ್ರೆಸ್ ನಲ್ಲಿ ಹನಿ ಟ್ರ್ಯಾಪ್ ಸಂಚಲನ..! ಸಿಎಂ ಭೇಟಿಯಾದ ಮಲ್ಲಿಕಾರ್ಜುನ ಖರ್ಗೆ ! 

Next Post

ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ನಿರ್ಧಾರ.. ಪತ್ರ ವೈರಲ್​..

Related Posts

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 19, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್‌ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 1 ಸ್ವತಂತ್ರ...

Read moreDetails
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
Next Post
ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ನಿರ್ಧಾರ.. ಪತ್ರ ವೈರಲ್​..

ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ನಿರ್ಧಾರ.. ಪತ್ರ ವೈರಲ್​..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada