ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರ ಬುಧವಾರ ನಿಷೇಧಿಸಿ ಆದೇಶ ಹೊರಡಿಸಿತ್ತು. ಇನ್ನು ಈ ಕುರಿತು ಹೇಳಿಕೆ ನೀಡಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡದ್ದಾರೆ.
ಪಿಎಫ್ ಐ ಕಾಂಗ್ರೆಸ್ ನ ಪಾಪದ ಕೂಸು ಎಂಬ ಮಾಜಿ ಸಿಎಂ BSY ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ಯತೀಂದ್ರ SDPI-PFI ಏರಡು ಬಿಜೆಪಿಯ ಬಿ ಟೀಂ ಅವರಿಂದಲೇ ಇವರ ಕೋಮುವಾದಿ ಬೇಳೆ ಬೇಯುತ್ತಿದೆ ಎಂದು ಕಿಡಿಕಾರಿದ್ದಾರೆ.
ನಿಜವಾಗಲೂ ಅವರಿಗೆ ಬದ್ಧತೆ ಇದ್ದಿದ್ದರೆ ಸರ್ಕಾರ ಬಂದಾಗಲೇ ಬ್ಯಾನ್ ಮಾಡಬೇಕಿತ್ತು ಚುನಾವಣೆ ಹತ್ತಿರ ಬರ್ತಿದೆ ಅಂತ ಗಿಮಿಕ್ ಮಾಡುತ್ತಿದ್ದಾರೆ. ನಾವು ಗಟ್ಟಿಯಾಗಿದ್ದೇವೆ ಎಂದು ತೋರಿಸಿಕೊಳ್ಳಲು ಈ ರೀತಿ ಬ್ಯಾನ್ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಗುಂಡ್ಲುಪೇಟೆಯಲ್ಲಿ ಪ್ಲೆಕ್ಸ್ ಹರಿದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಯತೀಂದ್ರ ಭಾರತ್ ಜೋಡೋಯಾತ್ರೆ ತಡೆಯಲು ಬಿಜೆಪಿ ಯತ್ನಿಸುತ್ತಿದೆ ಅದಕ್ಕಾಗಿ ಬ್ಯಾನರ್ ಹರಿಯುವ ಕೆಲಸ ಮಾಡಿದ್ದಾರೆ. ಜನ ಬೆಂಬಲ ನೋಡಿ ಬಿಜೆಪಿಯವರಿಗೆ ಹೊಟ್ಟೆಉರಿಯುತ್ತಿದೆ ಎಂದು ಲೇವಡಿಯಾಡಿದ್ದಾರೆ.
ನಾಡಹಬ್ಬ ದಸರೆಯಲ್ಲೂ ಕಮೀಷನ್ ವಿಚಾರ ಇದೆ ಎಂಬ ವಿಚಾರ ನನಗೂ ಕೇಳಿಬಂದಿದೆ ನಾಡಹಬ್ಬ ದಸರೆಯಲ್ಲಿ ಅವ್ಯವಸ್ಥೆಯಿಂದ ಬೇಸರವಾಗಿದೆ. ಇದರಿಂದ ಮೈಸೂರಿನ ಮಾನ ಹೋಗಿದೆ ಈ ಬಾರಿ ಸರ್ಕಾರ ದಸರೆ ಯಶಸ್ವಿ ನಡೆಸಲು ವಿಫಲ ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೇ ನೇರ ಹೊಣೆ ಈ ಅವ್ಯವಸ್ಥೆಯನ್ನ ಅವರೇ ಹೊರಬೇಕು ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.