• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಧಾರವಾಡ MLC ಚುನಾವಣೆ: ಕಾಂಗ್ರೆಸ್ ಟಿಕೆಟ್ ಸ್ಥಳೀಯ ಶಕೀರ್ ಸನದಿಗೋ? ವಲಸೆ ಹಕ್ಕಿ ಸಲೀಂ ಅಹ್ಮದ್‌ಗೋ?

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
November 20, 2021
in ಕರ್ನಾಟಕ, ರಾಜಕೀಯ
0
ಧಾರವಾಡ MLC ಚುನಾವಣೆ: ಕಾಂಗ್ರೆಸ್ ಟಿಕೆಟ್ ಸ್ಥಳೀಯ ಶಕೀರ್ ಸನದಿಗೋ? ವಲಸೆ ಹಕ್ಕಿ ಸಲೀಂ ಅಹ್ಮದ್‌ಗೋ?
Share on WhatsAppShare on FacebookShare on Telegram

ಧಾರವಾಡ ಎಂಎಲ್ಸಿ ಕ್ಷೇತ್ರ ವಿಶಾಲವಾದುದು. ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳನ್ನು ಒಳಗೊಂಡ ಈ ಕ್ಷೇತ್ರದಿಂದ ಇಬ್ಬರು ಎಂಎಲ್ಸಿ ಆಯ್ಕೆ ಆಗುತ್ತಾರೆ.

ADVERTISEMENT

ಇಲ್ಲಿ ಪ್ರತಿ ಪಾರ್ಟಿಗೂ ಇಬ್ಬರು ಅಭ್ಯರ್ಥಿಗಳನ್ನು ಹಾಕುವ ಅವಕಾಶವಿದ್ದರೂ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಒಂದೇ ಅಭ್ಯರ್ಥಿ ಹಾಕುವ ಮೂಲಕ ಹಂಚಿ ತಿನ್ನುವ ಕೆಲಸ ಮಾಡುತ್ತವೆ.

ಬಿಜೆಪಿಯಿಂದ ಈಗಾಗಲೇ ಎರಡು ಅವಧಿ ಮುಗಿಸಿರುವ ಪ್ರದೀಪ್ ಶೇಟ್ಟರ್ ಈ ಸಲವೂ ಅಭ್ಯರ್ಥಿ. ಕಳೆದ ಬಾರಿ ಕಾಂಗ್ರೆಸ್ನಿಂದ ಗೆದ್ದಿದ್ದ ಶ್ರೀನಿವಾಸ್ ಮಾನೆ ಈಗ ಹಾನಗಲ್ ಉಪ ಚುನಾವಣೆಯಲ್ಲಿ ಗೆದ್ದು ವಿಧಾನಸಭೆಯ ಸದಸ್ಯರಾಗಿದ್ದಾರೆ.

ಈಗಿನ ಸಂದರ್ಭದಲ್ಲಿ ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಸಹೋದರ ಪ್ರದೀಪ್ ಶೇಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಬಿಜೆಪಿಯಲ್ಲಿ ಸ್ಪರ್ಧೆ ಇಲ್ಲ. ಸ್ಥಳೀಯ ಸಂಸ್ಥೆಗಳ ಸದಸ್ಯರ ಮತದಾನದಿಂದ ನಡೆಯುವ ಈ ಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೇ ಇಲ್ಲ,

ಕಾಂಗ್ರೆಸ್ನಲ್ಲಿ 28 ಜನ ಅರ್ಜಿ ಹಾಕಿದ್ದರು. ಈ ವರದಿ ಬರೆಯುವ ಹೊತ್ತಿನಲ್ಲಿ ಮೂವರು ಅಂತಿಮ ಸ್ಪರ್ಧೆಯಲ್ಲಿ ಇದ್ದಾರೆ. ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂದು ಬಲವಾದ ಒತ್ತಡ ಇರುವುದರಿಂದ ಈಗ ಅಂತಿಮವಾಗಿ ಮಾಜಿ ಎಂಎಲ್ಸಿ ಎ.ಎಂ ಹಿಂಡಸಗೇರಿ, ವಲಸೆ ಹಕ್ಕಿ ಸಲೀಂ ಅಹ್ಮದ್ ಮತ್ತು ಸ್ಥಳೀಯ ಯುವ ನಾಯಕ ಶಕೀರ್ ಸನದಿ ಟಿಕೆಟ್ಗಾಗಿ ಸ್ಪರ್ಧೆಯಲ್ಲಿದ್ದಾರೆ.

ಸಲೀಂ ಅಹ್ಮದ್‌ ಮತ್ತು ಶಕೀರ್ ಸನದಿ

ಎ.ಎಂ ಹಿಂಡಸಗೇರಿ ಹಿರಿಯ ಮತ್ತು ಸಜ್ಜನ ರಾಜಕಾರಣಿ. ಆದರೆ, ಈ ಸಂದರ್ಭಕ್ಕೆ ಅವರು ಹೊಂದಲಾರರು. ಕೋಮುವಿಷ ಹರಡುತ್ತಿರುವ ಈ ಸಮಯದಲ್ಲಿ ಹಿಂಡಸಗೇರಿಯಂತಹ ನಾಯಕರು ಅಪ್ರಸ್ತುತರಾಗುತ್ತಾರೆ.

ಇನ್ನು ಸಲೀಂ ಅಹ್ಮದ್ ಎಂಬ ವಲಸೆ ಹಕ್ಕಿ ಹೇಗಾದರೂ ಅಧಿಕಾರದಲ್ಲಿ ಇರುವ ಆಶೆ ಅಥವಾ ದುರಾಶೆ ಹೊಂದಿದವರು. ಮೂಲತಃ ಶ್ರೀಮಂತ ಕುಟುಂಬದಿಂದ ಬಂದವರು. ಮಂಗಳೂರು ಮೂಲದ ಸಲೀಂ ಈಗ ಬೆಂಗಳೂರಿನಲ್ಲಿ ಸೆಟ್ಲ್ ಆಗಿದ್ದಾರೆ. ಸದ್ಯ ರಾಜ್ಯ ಕಾಂಗ್ರೆಸ್ನ ಕಾರ್ಯಾಧ್ಯಕ್ಷರಾಗಿರುವ ಅವರಿಗೆ ದೆಹಲಿ ಹೈಕಮಾಂಡ್ನಲ್ಲಿ ಸಾಕಷ್ಟು ಸಂಪರ್ಕವಿದೆ. ಇಲ್ಲಿವರೆಗೂ ಅವರು ಎಂದೂ ಒಂದು ನೇರ ಚುನಾವಣೆ ಗೆದ್ದಿಲ್ಲ. ಒಂದು ಸಲ ನಾಮನಿರ್ದೇಶಿತರಾಗಿ ಎಂಎಲ್ಸಿ ಆಗಿದ್ದರು. ಅಪರಿಚಿತ ಹಾವೇರಿ ಸಂಸತ್ ಕ್ಷೇತ್ರದಲ್ಲಿ ಎರಡು ಸಲ ಸ್ಪರ್ಧಿಸಿ ಸೋತಿದ್ದಾರೆ. ಹಾವೇರಿಯಲ್ಲಿ ಇವರ ಸ್ಪರ್ಧೆಯ ಕಾರಣಕ್ಕೆ ಹಿಂದೂ-ಮುಸ್ಲಿಂ ಮತಗಳ ಧ್ರುವೀಕರಣವಾಗಿ ಬಿಜೆಪಿಯ ಸಂಸದ ಶಿವಕುಮಾರ್ ಉದಾಸಿ ಬಂಪರ್ ಲಾಭ ಮಾಡಿಕೊಳ್ಳುತ್ತಿದ್ದಾರೆ.

ಶಕೀರ್ ಎಂಬ ಪ್ರಗತಿಪರ

ಎರಡು ಸಲ ಧಾರವಾಡ ದಕ್ಷಿಣ ಕ್ಷೇತ್ರದಿಂದ ಸಂಸದರಾಗಿದ್ದ ಮತ್ತು ಒಮ್ಮೆ ಹುಬ್ಬಳ್ಳಿ ನಗರದಿಂದ ಎಂಎಲ್ಎ ಆಗಿದ್ದ ಹಿರಿಯ ಸಜ್ಜನ ರಾಜಕಾರಣಿ ಐ.ಜಿ. ಸನದಿಯವರ ಪುತ್ರ ಶಕೀರ್ ಸನದಿ ಅವರಿಗೆ ಟಿಕೆಟ್ ಸಿಗಲಿದೆ ಎಂಬ ಮಾತಿದೆ. ಹುನ್ನಳ್ಳಿಯ ಸ್ಥಳೀಯ ನಿವಾಸಿಯೂ ಆಗಿರುವ ಅವರು ಯುವ ಕಾಂಗ್ರೆಸ್ ಘಟಕದ ಹಲವಾರು ಹುದ್ದೆಗಳಲ್ಲಿ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದಾರೆ. ಯುವ ಕಾಂಗ್ರೆಸ್ ಘಟಕದ ಚುನಾವಣಾ ಪ್ರಕ್ರಿಯೆ ರೂಪಿಸಿದ್ದು ಅವರೇ. ಅದು ಈಗಲೂ ಚಾಲ್ತಿಯಲ್ಲಿದೆ. ತಂದೆಯಂತೆ ಜಾತ್ಯಾತೀತ ನಿಲುವು ಹೊಂದಿರುವ ಶಕೀರ್, ಕಾಂಗ್ರೆಸ್ನಲ್ಲಿ ಜಾತ್ಯಾತೀತ ಧೋರಣೆಗೆ ಧಕ್ಕೆ ಬಂದಾಗ ಆಂತರಿಕವಾಗಿ ಧ್ವನಿ ಎತ್ತಿದ್ದಾರೆ. ಮುಸ್ಲಿಂಮರಲ್ಲಿ ಇರುವ ಜಾತಿ ಅಸಮಾಮನತೆಯ ಬಗ್ಗೆಯೂ ಅವರು ಮಾತನಾಡಿದ್ದಲ್ಲದೇ, ವಂಚಿತ ಮುಸ್ಲಿಂ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಯತ್ನಿಸಿದ್ದಾರೆ.

ಧಾರವಾಡ ಕ್ಷೇತ್ರದ ಎರಡು ಸ್ಥಾನಗಳಲ್ಲಿ ಒಂದು ಬಿಜೆಪಿಯ ಹಾಲಿ ಎಂಎಲ್ಸಿ ಪ್ರದೀಪ್ ಶೇಟ್ಟರ್ ಪಾಲಾಗಲಿದೆ. ಕಾಂಗ್ರೆಸ್ನಿಂದ ಯಾರೇ ನಿಂತರೂ ಗೆಲುವು ಖಚಿತ. ಪ್ರಚಲಿತ ವಿದ್ಯಮಾನ ಗನಬಿಸಿದರೆ ಶಕೀರ್ ಸನದಿಯವರೇ ಸೂಕ್ತ ಅಭ್ಯರ್ಥಿ.

Tags: Basavaraj BommaiBJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮುಂಬೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಮೊದಲ ಪಾಡ್ ಹೋಟೆಲ್ ಉದ್ಘಾಟನೆ !

Next Post

ತಾಲಿಬಾನಿಗೆ ಪ್ರಧಾನಿ ಮೋದಿ ನೀಡಿದ 4 ಸಲಹೆಗಳೇನು? ಯಾಕೆ?

Related Posts

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
0

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಗರಿಗೆದರಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. https://youtu.be/lJkxhAdZhXc?si=7skLOG-oaNLSzXaG ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಭೇಟಿ...

Read moreDetails
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
Next Post
NEP: ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಈಗ 11 ಪ್ರಾದೇಶಿಕ ಭಾಷೆಗಳಲ್ಲಿ ಕಲಿಸಲಾಗುವುದು: ಪ್ರಧಾನಿ ಮೋದಿ

ತಾಲಿಬಾನಿಗೆ ಪ್ರಧಾನಿ ಮೋದಿ ನೀಡಿದ 4 ಸಲಹೆಗಳೇನು? ಯಾಕೆ?

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada