• Home
  • About Us
  • ಕರ್ನಾಟಕ
Sunday, November 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಉಪ ಚುನಾವಣೆ ಕಾವು ಇನ್ನೂ ಆರಿಲ್ಲ: ಖಾಲಿಯಾಗಲಿರುವ 25 MLC ಸ್ಥಾನಗಳಿಗಾಗಿ ಪೈಪೋಟಿ ಶುರು, ಗ್ರಾಪಂ ಸದಸ್ಯರಿಗೆ ಭಾರಿ ಡಿಮ್ಯಾಂಡ್‌!

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
November 9, 2021
in ಕರ್ನಾಟಕ, ದೇಶ
0
ಉಪ ಚುನಾವಣೆ ಕಾವು ಇನ್ನೂ ಆರಿಲ್ಲ: ಖಾಲಿಯಾಗಲಿರುವ 25 MLC ಸ್ಥಾನಗಳಿಗಾಗಿ ಪೈಪೋಟಿ ಶುರು, ಗ್ರಾಪಂ ಸದಸ್ಯರಿಗೆ ಭಾರಿ ಡಿಮ್ಯಾಂಡ್‌!
Share on WhatsAppShare on FacebookShare on Telegram

ಉಪ ಚುನಾವಣೆಯ ಕಾವು ಇನ್ನೂ ಹಾಗೆಯೇ ಇದೆ. ಆದರೀಗ ಮತ್ತೆ ಚುನಾವಣೆಯ ಖದರು ಶುರುವಾಗಿದೆ. ಇದಕ್ಕಾಗಿ ಮೂರೂ ಪಕ್ಷಗಳು ಡಿಸೆಂಬರ್‌ ನಲ್ಲಿ ಖಾಲಿಯಾಗಲಿರುವ 25 ವಿಧಾನ ಪರಿಷತ್‌ (MLC) ಸ್ಥಾನಗಳ ಮೇಲೆ ಕಣ್ಣು ಹಾಕಿವೆ.

ADVERTISEMENT

ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗಿದ್ದು , ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ತಂತ್ರ ಹೆಣೆಯುತ್ತಿದ್ದಾರೆ. ಪ್ರತಿ 6 ವರ್ಷಕ್ಕೊಮ್ಮೆ 25 ವಿಧಾನ ಪರಿಷತ್‌ ಸ್ಥಾನ ಖಾಲಿಯಾಗುತ್ತವೆ. ಡಿಸೆಂಬರ್‌ನಲ್ಲಿ 25 ಎಂಎಲ್‌ಸಿಗಳ ಅವಧಿ ಮುಗಿಯಲಿದೆ.

ಗ್ರಾಪಂ ಸದಸ್ಯರಿಗೆ ಡಿಮ್ಯಾಂಡು

ನಿವೃತ್ತಿಯಾಗಲಿರುವ 25 ಎಂಎಲ್‌ಸಿಗಳು ಸ್ಥಳೀಯ ಸಂಸ್ಥೆಗಳ ಸದಸ್ಯರಿಂದ ಚುನಾಹಿತರಾದವರು. ಅಂದರೆ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌, ಗ್ರಾಮ ಪಂಚಾಯತ್‌, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿ ಸದಸ್ಯರು ಈ ಚುನಾವಣೆಯಲ್ಲಿ ಮತದಾರರು. ಆದರೆ ಈ ಸಲ ಜಿಪಂ, ತಾಪಂಗಳಿಗೆ ಇನ್ನೂ ಚುನಾವಣೆ ನಡೆದಿಲ್ಲ. ಹಲವಾರು ನಗರಸಭೆ ಗಳಿಗೂ ಚುನಾವಣೆ ತಡೆ ಹಿಡಿಯಲಾಗಿದೆ.

ಹೀಗಾಗಿ ಗ್ರಾಮ ಪಂಚಾಯತಿ ಸದಸ್ಯರೇ ಈ ಸಲದ ಚುನಾವಣೆಯಲ್ಲಿ ನಿರ್ಣಾಯಕ. ಅಧಿಕೃತವಾಗಿ ಗ್ರಾಪಂ ಸದಸ್ಯರು ಯಾವುದೇ ಪಕ್ಷದ ಚಿಹ್ನೆಯಿಂದ ಗೆದ್ದವರಲ್ಲ. ಹೀಗಾಗಿ ಇವರಿಗೆ ಡಿಮ್ಯಾಂಡು ಬಂದಿದೆ. ದೊಡ್ಡ ದೊಡ್ಡ ನಾಯಕರು ಈಗ ಗ್ರಾಪಂ ಸದಸ್ಯರ ಓಲೈಕೆಯಲ್ಲಿ ತೊಡಗಲಿದ್ದಾರೆ.

ಈಗಿರುವ ಮ್ಯಾಟ್ರಿಕ್ಸ್‌

ವಿಧಾನ ಪರಿಷತ್‌ ಸದಸ್ಯರ ಒಟ್ಟು ಸಂಖ್ಯೆ 75 ಇದರಲ್ಲಿ ಬಿಜೆಪಿಯ 32 ಸದಸ್ಯರಿದ್ದರೂ, ಸಂಪೂರ್ಣ ಬಹುಮತವಿಲ್ಲ. ಆದರೂ ಅದು ಜೆಡಿಎಸ್‌ ನೆರವಿನಿಂದ ಹಲವಾರು ಮಸೂದೆಗಳನ್ನು ಪಾಸು ಮಾಡಿಸಿಕೊಂಡಿದೆ. ಕಾಂಗ್ರೆಸ್‌ನ 29 ಮತ್ತು ಜೆಡಿಎಸ್‌ನ 12 ಸದಸ್ಯರಿದ್ದಾರೆ. ಸಭಾಪತಿಯಲ್ಲದೇ ಒಬ್ಬ ಪಕ್ಷೇತರ ಸದಸ್ಯರಿದ್ದಾರೆ.

ಬಿಜೆಪಿ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಬಹುಮತ ಪಡೆಯಲು ಭಾರಿ ಯತ್ನ ನಡೆಸಿದೆ.

ನಿವೃತ್ತಿ ಆಗಲಿರುವ 25 ಎಂಎಲ್‌ಸಿಗಳ ಪೈಕಿ ಈಗ ಹಾನಗಲ್‌ನಿಂದ ಎಂಎಲ್ಎ‌ ಗೆದ್ದಿರುವ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಕೂಡ ಒಬ್ಬರು. ಶುರುವಾಯಿತು ತಂತ್ರಗಾರಿಕೆ ನಿನ್ನೆ ಭಾನುವಾರ ಕಾಂಗ್ರೆಸ್‌ ನಾಯಕರು ಇದೇ ವಿಷಯಕ್ಕೆ ತೀವ್ರ ಚರ್ಚೆ ನಡೆಸಿದ್ದಾರೆ. ಈಗ ನಿವೃತ್ತಿ ಆಗಲಿರುವ ಸದಸ್ಯರ ಸ್ಥಾನಗಳನ್ನು ಉಳಿಸಿಕೊಳ್ಳಲು ಮತ್ತು ಬಿಜೆಪಿಗೆ ಪರಿಷತ್‌ನಲ್ಲಿ ಬಹುಮತ ಸಿಗದಂತೆ ಮಾಡಲು ತೀವ್ರ ಕಸರತ್ತು ನಡೆಸಿದ್ದಾರೆ.

ಬಿಜೆಪಿಯ ರಾಜ್ಯಯಾತ್ರೆ

ಬಿಜೆಪಿ ನಾಲ್ಕು ತಂಡಗಳನ್ನು ರಚಿಸಿದ್ದು ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಮತ್ತು ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌ ಈ ತಂಡಗಳ ಮುಂದಾಳುಗಳು. ನವೆಂಬರ್‌ 19ರಿಂದ ನಡೆಯುವ ಈ ಯಾತ್ರೆಗೆ ʼಜನ ಸ್ವರಾಜ್ಯʼ ಎಂದು ಕರೆಯಲಾಗಿದೆ.

ಜೆಡಿಎಸ್‌ನಿಂದ ಮೂವರು ಔಟ್‌?

ಜೆಡಿಎಸ್‌ನಿಂದ ಗೆದ್ದಿರುವ ಮೂವರು ಎಂಎಲ್‌ಸಿಗಳು ಈಗಾಗಲೇ ಒಂದು ಕಾಲು ಹೊರಗೆ ಇಟ್ಟಿದ್ದಾರೆ. ಸಂದೇಶ್‌ ನಾಗರಾಜ್‌, ಕಾಂತರಾಜು (ಬೆಮೆಲ್)‌ ಮತ್ತು ಸಿ.ಆರ್‌. ಮನೋಹರ್‌ ಜೆಡಿಎಸ್‌ ತೊರೆಯುವ ಸಾಧ್ಯತೆ ಇದೆ. ಸಂದೇಶ್‌ ನಾಗರಾಜ್‌ ಮತ್ತು ಮನೋಹರ್‌ ಬಿಜೆಪಿ ಸೇರುವ ಯತ್ನ ನಡೆಸಿದ್ದಾರೆ.

ಒಟ್ಟಿನಲ್ಲಿ, ಬೈ ಎಲೆಕ್ಷನ್‌ ಬಿಸಿ ಇನ್ನೂ ಆರಿಲ್ಲ. ಈಗ ಎಂಎಲ್‌ಸಿ ಚುನಾವಣೆ ಕಾವು ಏರತೊಡಗಿದೆ ಈ ಚುನಾವಣೆಯಲ್ಲಿ ಪ್ರ,ಮುಖ ಮತದಾರರಾದ ಗ್ರಾಪಂ ಸದಸ್ಯರಿಗೆ ಭರ್ಜರಿ ಬೇಡಿಕೆ ಬಂದಿದೆ.

Tags: BJPCongress PartyCovid 19MLCಉಪ ಚುನಾವಣೆಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಗ್ರಾಪಂ ಸದಸ್ಯನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಪ್ಪು ಅಗಲಿ ಇಂದಿಗೆ 12ನೇ ದಿನ! ಪ್ಯಾಲೇಸ್ ಗ್ರೌಂಡ್ ನಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ, ಹರಿದು ಬಂದ ಜನಸಾಗರ!

Next Post

ರಂಗ ಭೂಮಿ ಕಾಲವಿದರಾದ ಶ್ರೀ ಕೋಳ್ಯೂರು ರಾಮಚಂದ್ರ ಅವರಿಗೆ 90 ವರ್ಷ ತುಂಬಿದ ಹಿನ್ನೆಲೆ ಅವರ ಬಗ್ಗೆ ಗೌರವದ ಮಾತುಗಳನ್ನಾಡಿದ Purushottama Bilimale

Related Posts

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
0

ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ...

Read moreDetails
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

November 2, 2025
Next Post
ರಂಗ ಭೂಮಿ ಕಾಲವಿದರಾದ  ಶ್ರೀ ಕೋಳ್ಯೂರು ರಾಮಚಂದ್ರ  ಅವರಿಗೆ 90 ವರ್ಷ ತುಂಬಿದ ಹಿನ್ನೆಲೆ ಅವರ ಬಗ್ಗೆ ಗೌರವದ ಮಾತುಗಳನ್ನಾಡಿದ  Purushottama Bilimale

ರಂಗ ಭೂಮಿ ಕಾಲವಿದರಾದ ಶ್ರೀ ಕೋಳ್ಯೂರು ರಾಮಚಂದ್ರ ಅವರಿಗೆ 90 ವರ್ಷ ತುಂಬಿದ ಹಿನ್ನೆಲೆ ಅವರ ಬಗ್ಗೆ ಗೌರವದ ಮಾತುಗಳನ್ನಾಡಿದ Purushottama Bilimale

Please login to join discussion

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada