ಮೋಘಲ್ ದೊರೆ ಔರಂಗಜೇಬ್ ಸಮಾಧಿಯ ಅವಶ್ಯಕತೆ ಬಗ್ಗೆ ಪ್ರಶ್ನಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷರಾದ ರಾಜ್ ಠಾಕ್ರೆ ಸಮಾಧಿಯನ್ನು ನೆಲಸಮ ಮಾಡಬೇಕು ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ಸಮಾಧಿಯ ಸುತ್ತ ಭದ್ರತೆಯನ್ನ ಹೆಚ್ಚಿಸಲಾಗಿದೆ.
ಸಮಾಧಿ ಸ್ಥಳಕ್ಕೆ ಇತ್ತೀಚಿಗೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದೀನ್ ಓವೈಸಿ ಬೇಟಿ ನೀಡಿದ್ದನ್ನು ಶಿವಸೇನೆ ಹಾಗು ಎಂ ಎನ್ ಎಸ್ ನಾಯಕರು ಕಟುವಾಗಿ ಟೀಕಿಸಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಎಂ ಎನ್ ಎಸ್ ವಕ್ತಾರ ಗಜಾನನ ಕಾಳೆ ಮಹಾರಾಷ್ಟ್ರದಲ್ಲಿ ಔರಂಗಜೇಬಿನ ಅವಶ್ಯಕತೆಯಾದರು ಯಾಕಿದೆ ಜನರು ಅಲ್ಲಿಗೆ ಯಾಕೆ ಬೇಟಿ ನೀಡಬೇಕು ಮೊದಲು ಅದನ್ನ ನೆಲಸಮ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಹೇಳಿಕೆಗಳು ಹೊರಬೀಳುತ್ತಿದ್ದಂತೆ ಪುರಾತತ್ವ ಇಲಾಖೆಯಡಿ ರಕ್ಷಣೆಯಲ್ಲಿರುವ ಖುಲ್ತಬಾದ್ಗೆ ಕೆಲವರು ಬೀಗ ಹಾಕಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾರೆ.
ಓವೈಸಿ ಬೇಟಿಯನ್ನು ತೀವ್ರವಾಗಿ ಖಂಡಿಸಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಮಾಹಾರಷ್ಟ್ರದ ಶಾಂತಿ ಸುವ್ಯವಸ್ಥೆಯನ್ನು ಕದಡುವ ಪ್ರಯತ್ನ ಎಂದು ಕಿಡಿಕಾರಿದ್ದಾರೆ.