ಮಣಿಪುರದಲ್ಲಿ ವಿದ್ಯಾರ್ಥಿಗಳ ಸಂಘಟನೆ ಕರೆ ನೀಡಿರುವ ಬಂದ್ ಸಂಬಂಧ ಬಿಷ್ಣುಪುರ ಜಿಲ್ಲೆಯಲ್ಲಿ ಶನಿವಾರ ಹಿಂಸಾಚಾರ ಸಂಭವಿಸಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಐದು ದಿನಗಳ ಕಾಲ ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.
ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಗಲಭೆಯ ಚಿತ್ರ , ವಾಹನಗಳಿಗೆ ಬೆಂಕಿ ಹಚ್ಚುವ ವಿಡಿಯೋಗಳು ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು ಇದು ಇನ್ನಷ್ಟು ಹದಗೆಡುವ ಸಾದ್ಯತೆ ಇರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಹಾಲಿ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲಿ ಸ್ವಾಯತ್ತ ಜಿಲ್ಲಾ ಕೌನ್ಸಿಲ್ ಮಸೂದೆ (ತಿದ್ದುಪಡಿ) 2021ಅನ್ನು ಮಂಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಸಂಘಟನೆಯೂ ಶುಕ್ರವಾರದಿಂದ ಬಂದ್ಗೆ ಕರೆ ನೀಡಿದೆ.
ಸದ್ಯ ಸಾಮಾಜಿಕ ಜಾಲತಾಣಗಳನ್ನು ವದಂತಿಗಳನ್ನು ಹರಡಲು ಸೂಕ್ತ ಸಾಧನವಾಗಿ ಸಾರ್ವಜನಿಕರನ್ನು ಪ್ರಚೋದಿಸಲು ಬಳಸಲಾಗುತ್ತಿದೆ. ಆದ ಕಾರಣ ಮೊಬೈಲ್ ಕಂಪನಿಯವರು ಈ ಕೂಡಲ್ಲೇ ಆದೇಶವನ್ನ ಪಾಲಿಸಬೇಕು ಎಂದು ಗೃಹ ಕಾರ್ಯದರ್ಶಿ ಮನವಿ ಮಾಡಿದ್ದಾರೆ.