• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ – ದೀದಿ ಬಿಕ್ಕಟ್ಟು: ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕರೆಸಿಕೊಂಡ ಕೇಂದ್ರ ಸರ್ಕಾರ

ಫೈಝ್ by ಫೈಝ್
May 29, 2021
in ದೇಶ
0
ಮೋದಿ – ದೀದಿ ಬಿಕ್ಕಟ್ಟು: ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕರೆಸಿಕೊಂಡ ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಸಭೆ ಬಳಿಕ ಉಂಟಾದ ಬಿಕ್ಕಟ್ಟಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್‌ ಬಂಡೋಪಾಧ್ಯಾಯ ಅವರನ್ನು ಕೇಂದ್ರ ಸರ್ಕಾರ ವಾಪಸ್‌ ಕರೆಸಿಕೊಂಡಿದೆ.

ADVERTISEMENT


ಅಲಪನ್‌ ಬಂಡೋಪಾಧ್ಯಾಯ ಅವರ ಅಧಿಕಾರವಧಿ ಕಳೆದ ಮೇ 24ಕ್ಕೆ ಕೊನೆಗೊಂಡಿತ್ತು. ಕೋರಿಕೆಯ ಮೇರೆಗೆ ಅವರ ಸೇವಾವಧಿಯನ್ನು ಮೂರು ತಿಂಗಳವರೆಗೆ ವಿಸ್ತರಣೆ ಮಾಡಲಾಗಿತ್ತು. ಇದಾಗಿ ನಾಲ್ಕೇ ದಿನಕ್ಕೆ ಕೇಂದ್ರ ಸರ್ಕಾರ ಅವರನ್ನು ವಾಪಸ್‌ ಕರೆಸಿಕೊಂಡಿದೆ. ಆದರೆ, ಏಕಾಏಕಿ ಅವರನ್ನು ವಾಪಾಸ್ ಕರೆಸಿಕೊಳ್ಳಲು ಮೋದಿ-ದೀದಿ ಬಿಕ್ಕಟ್ಟೇ ಕಾರಣ ಎನ್ನಲಾಗಿದೆ.

ಪಶ್ಚಿಮ ಬಂಗಾಳದಿಂದ ವಾಪಸ್‌ ಕರೆಸಿಕೊಂಡಿರುವ ಅವರನ್ನು ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ ಸಚಿವಾಲಯಕ್ಕೆ ನೇಮಕ ಮಾಡಲಾಗಿದ್ದು, ದೆಹಲಿಯಲ್ಲಿ ಕಚೇರಿಗೆ ಮೇ 31 ರಂದು ಅಧಿಕಾರ ಸ್ವೀಕರಿಸುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.
ಯಾಸ್‌ ಚಂಡಮಾರುತದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಮತಾ ಬ್ಯಾನರ್ಜಿ ನಡುವೆ ನಡೆದ ಸಭೆಯಲ್ಲಿ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಅಗೌರವ ತೋರಿ ಧಾರ್ಷ್ಟ್ಯ ಪ್ರದರ್ಶಿಸಿದ್ದಾರೆ ಎಂದು ಕೇಂದ್ರ ಆರೋಪಿಸಿದ ಬೆನ್ನಿಗೆ ಈ ಬೆಳವಣಿಗೆಗಳು ನಡೆದಿರುವುದು, ಮುಖ್ಯಮಂತ್ರಿ Vs ಪ್ರಧಾನಮಂತ್ರಿ ಬಿಕ್ಕಟ್ಟಿನ ಮುಂದುವರಿದ ಭಾಗವಾಗಿದೆ ಎನ್ನಲಾಗಿದೆ.

ಯಾಸ್ ಚಂಡಮಾರುತದಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಲು ಶುಕ್ರವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲ ಜಗದೀಪ ಧಾಂಕರ್ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು 30 ನಿಮಿಷಗಳ ಕಾಲ ಕಾಯಿಸಿದ್ದರು ಎಂದು ಕೇಂದ್ರ ಸರಕಾರವು ಆರೋಪಿಸಿದೆ.
ಕೇಂದ್ರ ಸರ್ಕಾರದ ಮೂಲಗಳು ಹಂಚಿಕೊಂಡಿರುವ ಚಿತ್ರವು ಪರಿಶೀಲನಾ ಸಭೆಯ ಆರಂಭಕ್ಕೆ ಮುನ್ನ ಮೋದಿ ಅವರು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ಕುಳಿತಿದ್ದರೆ, ಅವರ ಬಲಭಾಗದಲ್ಲಿಯ ಖುರ್ಚಿಗಳು ಖಾಲಿ ಇರುವುದನ್ನು ತೋರಿಸಿದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿಯೂ ಬ್ಯಾನರ್ಜಿಯವರ ಇಂತಹ ವರ್ತನೆಯು ವಿಷಾದನೀಯವಾಗಿದೆ ಮತ್ತು ಕೆಳದರ್ಜೆಯ ರಾಜಕಾರಣ ಎಂದು ಬಣ್ಣಿಸಲಾಗಿದೆ.


ಮೋದಿಯವರು ಪರಿಶೀಲನಾ ಸಭೆಗೆ ಆಗಮಿಸಿದಾಗ ಪಶ್ಚಿಮ ಬಂಗಾಳ ಸರಕಾರದ ಯಾರೂ ಅಲ್ಲಿರಲಿಲ್ಲ. ಬ್ಯಾನರ್ಜಿ ಮತ್ತು ಮುಖ್ಯ ಕಾರ್ಯದರ್ಶಿ ಅದೇ ಆವರಣದಲ್ಲಿದ್ದರೂ ಕೂಡಾ ಪ್ರಧಾನಿಯನ್ನು ಬರಮಾಡಿಕೊಳ್ಳಲು ಅವರು ಬಂದಿರಲಿಲ್ಲ ಎಂದಿರುವ ಕೇಂದ್ರ ಸರಕಾರದ ಮೂಲಗಳು ಹೇಳಿವೆ. ಮಮತಾ ಬ್ಯಾನರ್ಜಿಗೆ ಹಾಗೂ ರಾಜ್ಯದ ಉನ್ನತಾಧಿಕಾರಿಗಳಿಗೆ ರಾಜ್ಯಪಾಲರು ಹಾಗೂ ಪ್ರಧಾನಮಂತ್ರಿ ಅರ್ಧ ಗಂಟೆಗೂ ಹೆಚ್ಚು ಕಾಲ ಕಾದಿದ್ದರು ಎಂದು ವರದಿಯಾಗಿದೆ. ಅದಾಗ್ಯೂ, ದಿಢೀರನೆ ಸಭಾಂಗಣವನ್ನು ಪ್ರವೇಶಿಸಿದ ಬ್ಯಾನರ್ಜಿ ಚಂಡಮಾರುತದಿಂದ ಉಂಟಾದ ಹಾನಿಯ ಕುರಿತು ಕೆಲವು ದಾಖಲೆಗಳನ್ನು ಪ್ರಧಾನಿಯವರಿಗೆ ನೀಡಿ, ತನಗೆ ಇತರ ಕಾರ್ಯಕ್ರಮಗಳೂ ಇವೆ ಎಂದು ತಿಳಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ.

ಭಾರತೀಯ ಗಣರಾಜ್ಯದ ಇತಿಹಾಸದಲ್ಲಿಯೇ ರಾಜ್ಯವೊಂದರ ಮುಖ್ಯಮಂತ್ರಿಗಳು ಪ್ರಧಾನಿ ಮತ್ತು ರಾಜ್ಯಪಾಲರಂತಹ ಉನ್ನತ ಸಾಂವಿಧಾನಿಕ ಹುದ್ದೆಗಳಲ್ಲಿರುವವರ ಜೊತೆಗೆ ಇಷ್ಟೊಂದು ಕೆಟ್ಟದ್ದಾಗಿ, ಅಗೌರವಯುತವಾಗಿ ಮತ್ತು ದುರಹಂಕಾರದಿಂದ ನಡೆದುಕೊಂಡಿರಲಿಲ್ಲ ಎಂದಿವೆ.


ಆದರೆ, ಮುಖ್ಯ ಕಾರ್ಯದರ್ಶಿಯನ್ನ ಏಕಾಏಕಿ ವಾಪಾಸ್‌ ಕರೆಸಿಕೊಂಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ತೃಣಮೂಲ ಕಾಂಗ್ರೆಸ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸ್ವಾತಂತ್ರೋತ್ತರ ಭಾರತದಲ್ಲಿ ಈ ರೀತಿಯ ಘಟನೆ ಎಂದಾದರೂ ನಡೆದಿದೆಯೇ? ಕೇಂದ್ರ ಸರ್ಕಾರ ಒತ್ತಾಯಪೂರ್ವಕವಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನು ವಾಪಾಸ್‌ ಕರೆಸಿಕೊಂಡಿದೆ. ಮೋದಿ ಮತ್ತು ಶಾ ರಾಜಕೀಯ ಹಗೆ ಸಾಧಿಸಲು ಎಷ್ಟು ಕೀಳು ಮಟ್ಟಕ್ಕಾದರೂ ಹೋಗುತ್ತಾರೆಂಬುದಕ್ಕೆ ಇದು ಸಾಕ್ಷಿ. ಬಂಗಾಳದ ಜನರು ಮೋದಿ-ಶಾ ರನ್ನು ತಿರಸ್ಕರಿಸಿದ ಅವಮಾನದಿಂದ ಕೇಂದ್ರ ಸರ್ಕಾರ ಬಂಗಾಳದ ಜನರನ್ನು ಈ ರೀತಿ ಅಪಮಾನಗೊಳಿಸಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್‌ ಸಂಸದ ಸುಖೆಂದು ಸೇಖರ್ ರೇ ಹೇಳಿದ್ದಾರೆ
ಕೇಂದ್ರ ಸರ್ಕಾರ ಉನ್ನತಾಧಿಕಾರಿಗಳನ್ನು ಹೀಗೆ ವಾಪಾಸ್‌ ಕರೆಸಿಕೊಳ್ಳುವುದು ಇದೇ ಮೊದಲಲ್ಲ. ಬಂಗಾಳ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಉನ್ನತ ಹುದ್ದೆಯಲ್ಲಿದ್ದ ಮೂವರು ಐಪಿಎಸ್‌ ಅಧಿಕಾರಿಗಳನ್ನು ಹಿಂದಕ್ಕೆ ಕರೆಸಿಕೊಂಡಿತ್ತು.

Previous Post

ಬೇಲಿ ಇಲ್ಲದ ನಾಡಿಗೆ ಇದೆಂತಾ ಬಳುವಳಿ ? ಪಟೇಲ್ ದಾದಗಿರಿಗೆ ನಲುಗಿದ ಲಕ್ಷದ್ವೀಪ…!

Next Post

ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

Related Posts

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?
ಇದೀಗ

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

by ಪ್ರತಿಧ್ವನಿ
January 27, 2026
0

ಬೆಂಗಳೂರು : ಭಾರತ ಮತ್ತು ಯುರೋಪಿಯನ್ ಒಕ್ಕೂಟ ಮಂಗಳವಾರ ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ. ಯುರೋಪಿನಿಂದ ಆಮದು ಮಾಡಿಕೊಳ್ಳುವ ಸುಮಾರು 97% ಸರಕುಗಳ ಮೇಲಿನ ಸುಂಕವನ್ನು...

Read moreDetails
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

January 27, 2026
ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

January 27, 2026
Next Post
ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

Please login to join discussion

Recent News

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?
Top Story

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

by ಪ್ರತಿಧ್ವನಿ
January 27, 2026
Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ
Top Story

Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada