
ನವದೆಹಲಿ: ಚುನಾವಣೆ ದೃಷ್ಟಿಯಿಂದ ಪಕ್ಷದ ಸಂಘಟನೆ ಹಾಗೂ ದೇಶಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ಕುರಿತು ಇಂದು ಕಾಂಗ್ರೆಸ್ ಸಭೆಯಲ್ಲಿ ಚರ್ಚಿಸಲಾಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದ ಈ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಘಟಕಗಳ ಮುಖ್ಯಸ್ಥರು ಮತ್ತು ಎಐಸಿಸಿ ರಾಜ್ಯ ಉಸ್ತುವಾರಿಗಳು ಪಾಲ್ಗೊಂಡಿದ್ದರು.
ಬಳಿಕ ಮಾತನಾಡಿದ ಖರ್ಗೆ, ಸೆಬಿ ಮತ್ತು ಅದಾನಿ ನಡುವಿನ ಸಂಬಂಧದ ಕುರಿತು ಕೂಲಂಕುಷ ತನಿಖೆ ನಡೆಸಬೇಕು ಎಂದು ಇದೇ ವೇಳೆ ಆಗ್ರಹಿಸಿದ ಅವರು. ಸಣ್ಣ ಮಟ್ಟದ ಹೂಡಿಕೆದಾರರ ಹಣಕ್ಕೆ ಹಾನಿ ಮಾಡುವಂತಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕೂಡಲೇ ಸೆಬಿ ಮುಖ್ಯಸ್ಥರ ರಾಜೀನಾಮೆ ಪಡೆಯಬೇಕು. ಈ ನಿಟ್ಟಿನಲ್ಲಿ ಜಂಟಿ ಸಂಸದೀಯ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು.
We convened a meeting of AICC General Secretaries, In-charges and Pradesh Congress Committee Presidents to discuss Organisational matters and various issues of national importance for election preparedness.
— Mallikarjun Kharge (@kharge) August 13, 2024
1⃣The shocking revelations of nexus between SEBI and Adani needs to a… pic.twitter.com/jNOmGRI22V
ಬಡ ಮತ್ತು ಮಧ್ಯಮ ವರ್ಗದವರಿಗೆ ಕೇಂದ್ರ ದ್ರೋಹ ಬಗೆದಿದೆ. ನಿಯಂತ್ರಣಕ್ಕೆ ಬಾರದ ನಿರುದ್ಯೋಗ ಮತ್ತು ನಿಯಂತ್ರಣ ಮೀರಿದ ಹಣದುಬ್ಬರದಂಥ ಸಮಸ್ಯೆಗಳಿಗೆ ಕಾಂಗ್ರೆಸ್ ಹೆಚ್ಚಿನ ಮಹತ್ವ ನೀಡುತ್ತದೆ. ಈ ಸಮಸ್ಯೆಗಳ ಕುರಿತು ರಾಷ್ಟ್ರವ್ಯಾಪಿ ಅಭಿಯಾನ ರೂಪಿಸಲಿದ್ದೇವೆ ಎಂದು ಹೇಳಿದರು.

ಸಂವಿಧಾನದ ಮೇಲೆ ದಾಳಿ ನಡೆಸುವುದನ್ನು ಎನ್ಡಿಎ ಸರ್ಕಾರವು ಈಗಲೂ ಮುಂದುವರಿಸಿದೆ. ಜನಗಣತಿ ನಡೆಸಬೇಕು ಎಂಬುದು ಜನರ ಬೇಡಿಕೆಯಾಗಿದೆ. ನಮ್ಮ ರೈತರಿಗೆ ಎಂಎಸ್ಪಿಯನ್ನು ಕಾನೂನುಬದ್ಧವಾಗಿ ಖಾತರಿಪಡಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ತನ್ನ ಹೋರಾಟವನ್ನು ಮುಂದುವರಿಸಲಿದೆ. ನಮ್ಮ ದೇಶಪ್ರೇಮಿ ಯುವಕರ ಮೇಲೆ ಹೇರಿರುವ ಅಗ್ನಿಪಥ ಯೋಜನೆಯನ್ನು ರದ್ದುಗೊಳಿಸಬೇಕು ಎಂದು ಅವರು ಹೇಳಿದರು.
ರೈಲು ಹಳಿ ತಪ್ಪಿ ಕೋಟ್ಯಂತರ ಪ್ರಯಾಣಿಕರು ಪರದಾಡುವಂತಾಗಿದೆ. ಹವಾಮಾನ ಸಂಬಂಧಿತ ವಿಪತ್ತುಗಳು ಮತ್ತು ಭೂಮಿ ಕುಸಿಯುತ್ತಿರುವುದು ಕಳವಳಕ್ಕೆ ಕಾರಣವಾಗಿವೆ. ನಾವು ಈ ವಿಷಯಗಳ ಬಗ್ಗೆ ರಾಷ್ಟ್ರೀಯ ಅಭಿಯಾನವನ್ನು ರೂಪಿಸುತ್ತೇವೆ ಮತ್ತು ಜನರ ಬಳಿಗೆ ಹೋಗುತ್ತೇವೆ ಎಂದು ಖರ್ಗೆ ತಿಳಿಸಿದರು.