ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕ ಸುಧಾರಣಾ ನೀತಿಗಳನ್ನು ಮುಂದಿನ ವರ್ಷ ನಡೆಯುವ 7 ರಾಜ್ಯಗಳ ಚುನಾವಣೆಯ ನಂತರ ಅನುಷ್ಠಾನ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆದ ರೀತಿ ಈ ಕಾನೂನನ್ನು ತರಾತುರಿಯಲ್ಲಿ ಅನಿಷ್ಠಾನಗೊಳಿಸಿದ್ದರೆ ಕಾರ್ಮಿಕ ಸಂಘಟನೆಗಳ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಮುಂದಿನ ವರ್ಷ ಚುನಾವಣಾ ಪರ್ವ ಮುಗಿದ ನಂತರ ಜಾರಿಗೆ ತರಲು ಚಿಂತಿಸಿದೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ನೀತಿಗಳನ್ನು ಅನುಷ್ಠಾನ ಮಾಡುವುದಾಗಿ ಹೇಳುತ್ತಾ ಮುಂದೂಡುತ್ತಾ ಬಂದಿದೆ. 2019-20ರಲ್ಲಿ ಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಮತ್ತು ವಜಾ ಮಾಡಲು ಸುಲಭವಾಗುವಂತೆ ಮತ್ತು ಹೂಡಿಕೆಯನ್ನು ಆರ್ಕಷಿಸುವಂತೆ ಸಂಸತ್ತಿನಲ್ಲಿ ಕಳೆದ ವರ್ಷ ಮಸೂದೆಗಳನ್ನು ಅಂಗೀಕರಿಸಲಾಗಿತ್ತು.

ಸುಮಾರು 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ಹಾಗೆ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿವೆ.
2014ರಲ್ಲಿ ಅಧಿಕಾರಕ್ಕೆ ಬಂಧ ಮೋದಿ ಸರ್ಕಾರವು ಕಳೆದ ವಾರ ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ತಿಳಿಸಿತ್ತು. ಇದು ಮುಂಬರುವ ಉತ್ತರ ಪ್ರದೇಶ ಚುನಾವಣೆ ಮತ್ತು 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕಾನೂನುಗಳನ್ನು ಹಿಂಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ.
ಮುಂದಿನ ವರ್ಷ ನಡೆಯಲಿರುವ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಭಾವವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲು ಯೋಜನೆ ರೂಪಿಸಿದೆ. ಪ್ರಸ್ತುತ 17 ರಾಜ್ಯಗಳಲ್ಲಿ ಬಿಜೆಪಿ ಆಡಳತ ನಡೆಸುತ್ತಿದೆ. ಅದರಲ್ಲಿ 10 ರಾಜ್ಯಗಳು ತಮ್ಮದೇ ಆದ ಕಾರ್ಮಿಕ ನೀತಿಗಳನ್ನು ರೂಪಿಸಿವೆ.






