• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಂಡ್ಯದಲ್ಲಿ ಜೆಡಿಎಸ್​ ಬಗ್ಗೆ ಕಿಂಚಿತ್ತು ಟೀಕಿಸದೆ ಮೋದಿ ಉರುಳಿಸಿದ ದಾಳ..!

ಕೃಷ್ಣ ಮಣಿ by ಕೃಷ್ಣ ಮಣಿ
March 13, 2023
in ರಾಜಕೀಯ
0
ಮಂಡ್ಯದಲ್ಲಿ ಜೆಡಿಎಸ್​ ಬಗ್ಗೆ ಕಿಂಚಿತ್ತು ಟೀಕಿಸದೆ ಮೋದಿ ಉರುಳಿಸಿದ ದಾಳ..!
Share on WhatsAppShare on FacebookShare on Telegram

ಮಂಡ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಭಾನುವಾರ ಅಬ್ಬರದ ಕಾರ್ಯಕ್ರಮ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಕಡಿಮೆ ಅರ್ಧದಿನ ಮಂಡ್ಯದಲ್ಲಿ ಕಾಲ ಕಳೆದಿದ್ದಾರೆ. ಪ್ರಧಾನಿ ಆದ 9 ವರ್ಷದ ಬಳಿಕ ಮಂಡ್ಯಕ್ಕೆ ಆಗಮಿಸಿದ ನರೇಂದ್ರ ಮೋದಿ, ಬೆಂಗಳೂರು – ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಮಾಡಿದ್ರು. ಆ ಬಳಿಕ ಬೃಹತ್​ ಸಮಾವೇಶ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಜೆಡಿಎಸ್​ ಬಗ್ಗೆ ಕುಹಕ ಆಡಲಿಲ್ಲ, ಜೆಡಿಎಸ್​ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲಿಲ್ಲ. ಜೆಡಿಎಸ್ ಭದ್ರಕೋಟೆಗೆ ನಿಂತು ಭಾಷಣ ಮಾಡಿದಾಗಲೂ, ಜೆಡಿಎಸ್ ಬಗ್ಗೆ ಎಲ್ಲಿಯೂ ಮಾತನಾಡದೆ ಹೋಗಿದ್ದು, ಸ್ವತಃ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರಿಗೂ ಅಚ್ಚರಿಯನ್ನುಂಟು ಮಾಡಿತು. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಜಾಣ ನಟಡೆ ಇಟ್ಟಿದ್ದಾರೆ ಎನ್ನಲಾಗ್ತಿದೆ. ಒಂದು ವೇಳೆ ಜೆಡಿಎಸ್​ ಬಗ್ಗೆ ಟೀಕಾಪ್ರಹಾರ ನಡೆಸಿದ್ರೆ ಏನಾಗುತ್ತೆ ಅನ್ನೋದನ್ನು ತಿಳಿದುಕೊಂಡು ಪ್ರಧಾನಿ ಈ ನಿರ್ಧಾರ ಮಾಡಿದ್ದಾರೆ ಅನ್ನೋದು ಗೊತ್ತಾಗ್ತಿದೆ..

ADVERTISEMENT

ಕಾಂಗ್ರೆಸ್​ ಬಗ್ಗೆ ಟೀಕೆಗಳ ಮಳೆ ಸುರಿಸಿದ ಪ್ರಧಾನಿ..!

ಜೆಡಿಎಸ್ ಬಗ್ಗೆ ಟೀಕೆಯ ಕಲ್ಲನ್ನು ಎಸೆಯದ ಪ್ರಧಾನಿ ನರೇಂದ್ರ ಮೋದಿ​ ಕಾಂಗ್ರೆಸ್ ಪಕ್ಷವನ್ನು ಸುಮ್ಮನೆ ಬಿಡಲಿಲ್ಲ. ಕಾಂಗ್ರೆಸ್​ ಮತ್ತು ಅದರ ಮೈತ್ರಿ ಪಕ್ಷಗಳಿಗೆ ಮಾಡಲು ಕೆಲಸ ಇಲ್ಲ, ಕೇವಲ ಮೋದಿ ಬಗ್ಗೆ ಅಪಪ್ರಚಾರ ಮಾಡೋದ್ರಲ್ಲಿ ತೊಡಗಿದ್ದಾರೆ. ನರೇಂದ್ರ ಮೋದಿಗೆ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಮಾಡೋ ಕೆಲಸ ಇದೆ. ಅಭಿವೃದ್ಧಿ ಕೆಲಸದಲ್ಲಿ ನಾನು ಬ್ಯುಸಿ ಆಗಿದ್ದೇನೆ. ಹೈವೇ ಕನಸ್ಸನ್ನು ನನಸು ಮಾಡಿದ್ದೇವೆ. ಬಡವರ ಕಲ್ಯಾಣಕ್ಕೆ ಶ್ರಮಿಸುವ ಕೆಲಸ ಮಾಡ್ತಿದ್ದೇವೆ. ಮಂಡ್ಯದ ಜನರ ಪ್ರೀತಿಯ ಋಣವನ್ನು ಅಭಿವೃದ್ಧಿ ಮೂಲಕ ಬಡ್ಡಿ ಸಮೇತ ತೀರಿಸುತ್ತೇನೆ. ಈಗಾಗಲೇ ಸಾವಿರಾರು ಕೋಟಿ ಅಭಿವೃದ್ಧಿ ಕಾರ್ಯಗಳು ಈ ಭಾಗದಲ್ಲಿ ನಡೆಯುತ್ತಿವೆ ಎಂದಿದ್ದಾರೆ. ಇನ್ನು ಕಾಂಗ್ರೆಸ್‌ ಬಡವರ ಕಲ್ಯಾಣಕ್ಕೆ ಶ್ರಮಿಸಲಿಲ್ಲ. 2014ಕ್ಕೂ ಮೊದಲು ಭಾರತ ದೇಶದಲ್ಲಿ ಲೂಟಿ ಮಾಡುವ ಸರ್ಕಾರ ಇತ್ತು. ಸಾಮಾನ್ಯ ಜನರ ಸುಖ ದುಃಖ, ನೋವು ನಲಿವುಗಳಿಗೆ ಸ್ಪಂದಿಸಲಿಲ್ಲ. ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಿದ್ದು ಬಿಟ್ಟರೆ ಬಡವರ ಕಲ್ಯಾಣವನ್ನು ಕಾಂಗ್ರೆಸ್‌ ಮಾಡಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

JDS ಕುಟುಂಬದ ಎಟಿಎಂ ಎಂದಿದ್ದ ಅಮಿತ್​ ಷಾ..!!

ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್​ ಪಕ್ಷದ ಬಗ್ಗೆ ಕಿಂಚಿತ್ತು ಮಾತನಾಡಲಿಲ್ಲ. ಆದರೆ ಈ ಹಿಂದೆ ಮಂಡ್ಯದಲ್ಲಿ ಸಮಾವೇಶ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಷಾ ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ಮಾಡಿದ್ದರು. ಕಾಂಗ್ರೆಸ್​ಗೆ ಮತ ಹಾಕಬೇಡಿ, ಅದು ಜೆಡಿಎಸ್​ಗೆ ಸಹಾಯ ಆಗುತ್ತದೆ. ಜೆಡಿಎಸ್​ಗೂ ಮತ ಹಾಕಬೇಡಿ, ಅವರು ಕಾಂಗ್ರೆಸ್​ ಜೊತೆಗೆ ಹೋಗ್ತಾರೆ ಎಂದಿದ್ದರು. ಇನ್ನು ಕಾಂಗ್ರೆಸ್​ ಪಕ್ಷ ಗೆಲ್ಲಿಸಿದ್ರೆ ದೆಹಲಿ ಪರಿವಾರ ಒಂದಕ್ಕೆ ಎಟಿಎಂ ರೀತಿ ಕೆಲಸ ಮಾಡುತ್ತದೆ. ಅದೇ ರೀತಿ ಜೆಡಿಎಸ್​ ಅಧಿಕಾರಕ್ಕೆ ಬಂದರೆ ಒಂದು ಕುಟುಂಬದ ಎಟಿಎಂ ರೀತಿಯಲ್ಲಿ ಕೆಲಸಗಳು ಆಗುತ್ತವೆ ಎಂದಿದ್ದು. ಅಮಿತ್​ ಷಾ ಟೀಕೆ ಬಳಿಕ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದರು. ವಿಧಾನಸಭಾ ಅಧಿವೇಶನದಲ್ಲೂ ಈ ಬಗ್ಗೆ ಅಮಿತ್​ ಷಾ ಹೆಸರು ಹೇಳದೆ ವಾಗ್ದಾಳಿ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಯಾವುದಕ್ಕೂ ಆಸ್ಪದ ಕೊಡಲಿಲ್ಲ. ಜೆಡಿಎಸ್​ ಬಗ್ಗೆ ಮೋದಿ ಸಾಫ್ಟ್​ ಕಾರ್ನರ್​ ತೋರಿಸಿದ್ದು ಯಾಕೆ ಅನ್ನೋ ಬಗ್ಗೆ ಗಹನವಾದ ಚರ್ಚೆ ಬಿಜೆಪಿ ನಾಯಕರಲ್ಲೇ ನಡೆಯುತ್ತಿದೆ.

ಸಾಫ್ಟ್​ ಕಾರ್ನರ್​ ಹಿಂದೆ ಮೋದಿ ಮಾಸ್ಟರ್​ ಪ್ಲ್ಯಾನ್​..!

ಮಂಡ್ಯದಲ್ಲಿ ಜೆಡಿಎಸ್​ ಅದರಲ್ಲೂ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಹಾಗು ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಭಾರೀ ಅಭಿಮಾನ ಇಟ್ಟುಕೊಂಡಿದ್ದಾರೆ. ರಾಜಕೀಯ ಕಾರಣಕ್ಕೆ ಮಂಡ್ಯ ನೆಲದಲ್ಲಿ ನಿಂತು ಏನನ್ನೋ ಮಾತನಾಡಿ ದೇವೇಗೌಡರಿಗೆ ನೋವುಂಟು ಮಾಡುವುದು. ಆ ಮಾತುಗಳೇ ಬಿಜೆಪಿಗೆ ಮತಗಳು ಬಾರದಂತೆ ತಡೆಯುವುದು ಬೇಡ ಅನ್ನೋದು ಒಂದು ಕಾರಣ. ಇನ್ನು ಮಾಜಿ ಪ್ರಧಾನಿ ದೇವೇಗೌಡರ ಜೊತೆಗೆ ಒಡನಾಟ ಚೆನ್ನಾಗಿದೆ. ಈ ಹಿಂದೆ ದೇವೇಗೌಡರಿಗೆ ಕೊಟ್ಟ ಗೌರವದ ಬಗ್ಗೆ ಕರುನಾಡಿನ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ ದೇವೇಗೌಡರು ವಯೋಸಹಜ ಸ್ಥಿತಿಗೆ ತಲುಪಿದ್ದಾರೆ. ಈ ಸಮಯದಲ್ಲಿ ರಾಜಕೀಯವಾಗಿ ಹಿಯ್ಯಾಳಿಸುವುದು, ವಯಸ್ಸಾದ ದೇವೇಗೌಡರಿಗೆ ನೋವು ಕೊಡುವುದು ಸರಿಯಲ್ಲ, ನೋವು ಕೊಟ್ಟ ಕಾರಣದಿಂದ ಬಿಜೆಪಿಗೆ ಬರುವ ಸಾಧ್ಯತೆ ಇರುವ ಮತಗಳು ದೂರ ಆಗುತ್ತವೆ ಅನ್ನೋದು ಎರಡನೇ ಕಾರಣ. ಇದೇ ಕಾರಣದಿಂದ ಕಾಂಗ್ರೆಸ್ ವಿರುದ್ಧ ಮಾತ್ರ ಟೀಕೆ ಮಾಡಿ, ಜೆಡಿಎಸ್ ಬಗ್ಗೆ ಎಲ್ಲಿಯೂ ಮಾತಾಡದೇ ಚುನಾವಣೆ ಮಾಡಲು ಮೋದಿ ಮಾಸ್ಟರ್​ ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗ್ತಿದೆ. ಇದು ವರ್ಕೌಟ್​ ಆಗುತ್ತಾ ಅನ್ನೋದನ್ನು ಫಲಿತಾಂಶದ ಬಳಿಕ ನೋಡಬೇಕಿದೆ.

Previous Post

ಭಾರತೀಯ ಜನತಾ ಪಾರ್ಟಿಗೆ ಕುಮಾರಸ್ವಾಮಿ 15 ಪ್ರಶ್ನೆ..! ಉತ್ತರ ಕೊಡೋದ್ಯಾರು..?

Next Post

ಧ್ರುವ ನಾರಾಯಣ ನಿಧನ ಬಳಿಕ ‘ಕೈ’ ಕಾರ್ಯಕರ್ತರಿಂದ ಪಟ್ಟು : ಪುತ್ರ ದರ್ಶನ್​ಗೆ ಟಿಕೆಟ್​ ನೀಡುವಂತೆ ಆಗ್ರಹ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಧ್ರುವ ನಾರಾಯಣ ನಿಧನ ಬಳಿಕ ‘ಕೈ’ ಕಾರ್ಯಕರ್ತರಿಂದ ಪಟ್ಟು : ಪುತ್ರ ದರ್ಶನ್​ಗೆ ಟಿಕೆಟ್​ ನೀಡುವಂತೆ ಆಗ್ರಹ

ಧ್ರುವ ನಾರಾಯಣ ನಿಧನ ಬಳಿಕ ‘ಕೈ’ ಕಾರ್ಯಕರ್ತರಿಂದ ಪಟ್ಟು : ಪುತ್ರ ದರ್ಶನ್​ಗೆ ಟಿಕೆಟ್​ ನೀಡುವಂತೆ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada