ತೆಲಂಗಾಣದ ಹೈದರಬಾದಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಾರೋಪ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಹಾಗು ಹಿಮಾಂತ ಬಿಸ್ವಾಸ್ ಶರ್ಮಾ ಸಭೆಯ ನಿರ್ಣಯಗಳನ್ನು ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಭಾನುವಾರ ನಡೆಯುವ ಸಭೆಯಲ್ಲಿ ರಾಷ್ಟ್ರೀಯ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಸಭೆಯ ಮುಖ್ಯ ಉದ್ದೇಶವನ್ನ ಹೇಳಲಿದ್ದಾರೆ. ಇದರ ಜೊತೆಜೊತೆಗೆ NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಪರವಾಗಿ ಪ್ರಚಾರದ ಬಗೆಯೂ ಚರ್ಚಿಸಲಾಗುತ್ತದೆ ಎಂದು ವರದಿಯಾಗಿದೆ.
ಒಟ್ಟು ಬಿಜೆಪಿಯ 500ಕ್ಕು ಹೆಚ್ಚು ಸದಸ್ಯರು ಕಾರ್ಯಕಾರಿಣಿಯಲ್ಲಿ ಭಾಗಿಯಾಗಿದ್ದಾರೆ. ವರ್ಷದ ಅವಧಿಯಲ್ಲಿ ಎರಡನೇ ಭಾರೀ ಕಾರ್ಯಕಾರಿಣಿ ಸಬೆ ನಡೆಯುತ್ತಿದೆ. 2004ರ ನಂತರ ಹೈದರಬಾದಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ.
ಸಭೆಯಲ್ಲಿ ತಮಿಳುನಾಡು, ಮಧ್ಯಪ್ರದೇಶ, ಎಸ್ಟಿ ಮೋರ್ಚಾ ಹಾಗು ಯುವ ಮೋರ್ಚಾ ಸದಸ್ಯರು ಸ್ಥಿತಿ ಗತಿ ಕುರಿತು ವರದಿಯನ್ನು ವರಿಷ್ಠರಿಗೆ ಸಲ್ಲಿಸಲಿದ್ದಾರೆ.
2023ರ ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ತೆಲಂಗಾಣದ ಬಗ್ಗೆಯೂ ನಿರ್ಣಯವನ್ನ ಅಂಗೀಕರಿಸಲಾಗುವುದು. ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗು ಪ್ರಧಾನಿ ನರೇಂದ್ರ ಮೋದಿ ಸಮಾರೋಪ ಭಾಷಣವನ್ನ ಮಾಡಲಿದ್ದಾರೆ.
ಸಂಜೆ ಸಿಕಂದ್ರಬಾದಿನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.