ಮಹಾರಾಷ್ಟ್ರ ರಾಜ್ಯ ಸರಕಾರದ ಸಚಿವ ಸಂಪುಟ ನಾಳೆ ವಿಸ್ತರಣೆ ಆಗುವ ಸಾಧ್ಯತೆ ಇದ್ದು, 12 ಶಾಸಕರು ಸಚಿವ ಸ್ಥಾನ ಪಡೆಯವ ಸಾಧ್ಯತೆ ಇದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಬಂಡಾಯ ಶಿವಸೇನೆ ಶಾಸಕರ ನೇತೃತ್ವದಲ್ಲಿ ಜೂನ್ 30ರಂದು ನೂತನ ಸರಕಾರ ರಚನೆ ಆಗಿ ಸುಮಾರು ಒಂದು ತಿಂಗಳು ಕಳೆದಿದ್ದು, ಕೊನೆಗೂ ಸಂಪುಟ ವಿಸ್ತರಣೆ ಖಚಿತವಾಗಿದೆ.
12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬಿಜೆಪಿಯಿಂದ ಸುಧೀರ್ ಮುಂಗಟಿವರ್, ಚಂದ್ರಕಾಂತ್ ಪಾಟೀಲ್, ಗಿರೀಶ್ ಮಹಾಜನ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದಿಂದ ಗುಲಾಬ್ ರಘುನಾಥ್ ಪಾಟೀಲ್, ಸಾದಾ ಸಾರ್ವಕರ್, ದೀಪಕ್ ವಸಂತ್ ಸಚಿವರಾಗಿ ಬಡ್ತಿ ಪಡೆಯುವ ಸಾಧ್ಯತೆ ಇದೆ.