
ಬಿಜೆಪಿ+ಜೆಡಿಎಸ್ ರಾಜ್ಯದ ಜನರಿಂದ ದಾಖಲೆಗಳನ್ನು ಮರೆ ಮಾಚಿ ಆಡಿದ ಜಂಟಿ ಕಪಟತನಕ್ಕೆ ದಾಖಲೆಗಳ ಮೂಲಕವೇ ಉತ್ತರ ಕೊಟ್ಟ ಸಿಎಂ ಸಿದ್ದರಾಮಯ್ಯ, ಜಂಟಿ ಸುಳ್ಳುಗಳಿಗೆ ಬಿಜೆಪಿ ಜೆಡಿಎಸ್ ಸದಸ್ಯರ ಸಮ್ಮುಖದಲ್ಲೇ ಆಗಿರುವ ಮೂಡಾ ನಿರ್ಣಯಗಳನ್ನು ಪತ್ರಿಕಾಗೋಷ್ಠಿಯಲ್ಲಿ ಓದಿದ ಸಿಎಂ, ಆಗ ಮೂಡದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ನಿಷ್ಠುರ ಪ್ರಶ್ನೆ ಮುಂದಿಟ್ಟ ಸಿಎಂ.

ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ, ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ?

ಬಿಜೆಪಿ ಮತ್ತು ಜೆಡಿಎಸ್ ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ+ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ, ಬಿಜೆಪಿ ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ ಏಕೆ? ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು , ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ ಬಿಜೆಪಿ+ ಜೆಡಿಎಸ್ ಮುಖಂಡರು ಮೂಡಾದಿಂದ ಪಡೆದಿರುವ ಸೈಟ್ ಗಳ ವಿವರ ಮತ್ತು ಹೆಸರನ್ನು ಓದಿ ದಾಖಲೆ ಮುಂದಿಟ್ಟ ಸಚಿವ ಬೈರತಿ ಸುರೇಶ್
