ಪಂಜಾಬ್ ಮೂಲದ ಗಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸೇವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ನನ್ನು ಪೊಲೀಸರು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಗೋಲ್ಡಿ ಬ್ರಾರ್ ಬಂಧನದ ಬಗ್ಗೆ ಅಧಿಕೃತವಾಗಿ ಯಾವುದೇ ವಿಷಯ ಹೊರ ಬಂದಿಲ್ಲ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ಮೇ 29ರಂದು ಪಂಜಾಬಿನ ಮಾನ್ಸಾದಲ್ಲಿ ಸಿಧು ಮೂಸೇವಾಲಾರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು ಮತ್ತು ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೊಯಿ ಗ್ಯಾಂಗ್ನ ಗೋಲ್ಡಿ ಬ್ರಾರ್ ಹೊತ್ತಿದ್ದ.
ಆರೋಪಿ ಗೋಲ್ಡಿ ಬ್ರಾರ್ ವಿರುದ್ದ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.