ಮೈಸೂರು: ಕಲುಷಿತ ನೀರು (Contaminated water) ಸೇವಿಸಿದ ಪರಿಣಾಮ ಹಲವರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
![](https://pratidhvani.com/wp-content/uploads/2022/10/water_drinkingwater_tap_1200x_0_2.jpg)
ಘಟನೆಯಲ್ಲಿ ಸುಮಾರು 25ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಈ ಘಟನೆ ಹುಣಸೂರು (Hunasuru) ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ (Jal Jeevan Mission) ಕಾಮಗಾರಿ ನಡೆಯುತ್ತಿದೆ.
![](https://pratidhvani.com/wp-content/uploads/2024/05/mysore-25-people-sick-1024x576.webp)
ಈ ಕಾಮಗಾರಿಯಿಂದ ಮನೆಗಳಿಗೆ ನೀರು ಪೂರೈಸುವ ಪೈಪ್ ಹಾನಿಯಾಗಿದೆ. ಹೀಗಾಗಿ ಪೈಪ್ ನಲ್ಲಿ ಕಲುಷಿತ ನೀರು ಸೇರಿಕೊಂಡಿದೆ. ಇದೇ ನೀರನ್ನು ಸೇವಿಸಿದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.