2023ರ ರಾಜ್ಯ ವಿಧಾನಸಭೆ ಚುನಾವಣೆಗೆ ರಾಷ್ಟ್ರೀಯ ಪಕ್ಷಗಲಿಗೆ ಸೆಡ್ಡು ಹೊಡೆದು ವಿಭಿನ್ನವಾಗಿ ಪ್ರಚಾರ ನಡೆಸುತ್ತಿರುವ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದ ಸುಮಾರು ನಾಯಕರು ಸೇರ್ಪಡೆಯಾಗಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ಮತ್ತು ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನ ಒಪ್ಪಿ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಸುಮಾರು 75ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಧನಗೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಅನೇಕ ನಾಯಕರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಅನ್ನದಾನಿ ನಾನು MLA ಆದ ನಂತರ ಎರಡು ವರ್ಷ ಕೋವಿಡ್ ಇತ್ತು ಆದರೂ ಎದೆಗುಂದದೆ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಫುಡ್ ಕಿಟ್ ಕೊಟ್ಟಿದ್ದೇನೆ. ಕ್ವಾರಂಟೈನಲ್ಲಿದ್ದವರನ್ನ ಹಾಡಿನ ಮೂಲಕ ಖುಷಿಪಡಿಸಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸರಿಯಾಗಿ ಹಣ ಬಿಡುಗಡೆಯಾಗಿಲ್ಲ ಅವರ ಬಳಿ ಗಲಾಟೆ ಮಾಡಿ ಹಣ ಬಿಡುಗಡೆ ಮಾಡಿಸಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಪಂಚರತ್ನ ಕಾರ್ಯಕ್ರಮ ಜಾರಿಯಾಗಬೇಕು ಇದರಿಂದ ರಾಜ್ಯದ ಜನರಿಗೆ ಉಪಯೋಗ ಇದೆ ನಮ್ಮ ನಾಯಕರು ಹಾಗೂ ನಮ್ಮ ಪಕ್ಷದ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಸಭೆಯಲ್ಲಿ ಮಾತನಾಡುವ ವೇಳೆ ವಿನಂತಿಸಿದ್ದಾರೆ.