ಆರ್ಎಸ್ಎಸ್ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಕಟು ಟೀಕೆ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಸಂಸದ ಪ್ರತಾಪ್ ಸಿಂಹ ಸ್ಥಳದಿಂದ ಕಾಲ್ಕಿತ್ತಿರುವ ಘಟನೆ ಮೈಸೂರು ಮಹಾರನಗರ ಪಾಲಿಕೆ ಆವರಣದಲ್ಲಿ ನಡೆದಿದೆ.
ಬುಧವಾರ ಜಿಲ್ಲಾ ಕುರುಬರ ಸಂಘದ ವತಿಯಿಂದ ಆಯೋಜನೆಗೊಂಡಿದ್ದ ಕನಕದಾಸ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ವಾಗ್ದಾಳಿ ನಡೆಸಿದ್ದರು ಮತ್ತು ಬಿಜೆಪಿ-ಆರ್ಎಸ್ಎಸ್ ವಿರುದ್ದದ ತಮ್ಮ ಕಟುಟೀಕೆಯನ್ನು ಮುಂದುವರೆಸಿದ್ದರು.
ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಪ್ರಧಾನಿ ಮೋದಿ ಅವರ ಅಭಿವೃದ್ಧಿ ಕಾರ್ಯಗಳ ಮೇಲೆ ನಾವು ಚುನಾವಣೆ ಎದುರಿಸುತ್ತೀವಿ. ನಾವು ಯಾವುದೇ ದ್ವೇಷ ರಾಜಕಾರಣ ಮಾಡಲ್ಲ ವಿಪಕ್ಷಗಳು ಕೂಡ ಜವಬ್ದಾರಿಯಿಂತ ವರ್ತಿಸಬೇಕು ಎಂದು ಹೇಳಿದ್ದಾರೆ.
ಈ ವೇಳೆ ಮಾಧ್ಯಮದವರು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಸಂಸದ ಪ್ರತಾಪ್ ಸಿಂಹ ಉತ್ತರಿಸದೆ ಸ್ಥಳದಿಂದ ಪೇರಿಕಿತ್ತಿದ್ದಾರೆ.