• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಶೀಘ್ರದಲ್ಲೇ ಸಂಸದ ಪ್ರತಾಪ್​ ಸಿಂಹ ರಾಜಕೀಯ ಜೀವನ ಕೊನೆಗೊಳ್ಳುತ್ತೆ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​

Any Mind by Any Mind
June 16, 2023
in ರಾಜಕೀಯ
0
ಶೀಘ್ರದಲ್ಲೇ ಸಂಸದ ಪ್ರತಾಪ್​ ಸಿಂಹ ರಾಜಕೀಯ ಜೀವನ ಕೊನೆಗೊಳ್ಳುತ್ತೆ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​
Share on WhatsAppShare on FacebookShare on Telegram

ಬೆಂಗಳೂರು : ಪ್ರತಾಪ್ ಸಿಂಹ ಅವರೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಯಾಕೆ ಪ್ರಚಾರ ಮಾಡಲಿಲ್ಲ. ಅಲ್ಲೇಲ್ಲಾ ನೀವು ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡಿದ್ದೀರಾ. 2024ರ ಚುನಾವಣೆಯಲ್ಲಿ ನಿಮ್ಮ ಪೊಲಿಟಿಕಲ್ ಲೈಫ್ ಎಂಡ್ ಆಗುತ್ತೆ. ಬಿಜೆಪಿಯವರೆ ನಿಮ್ಮನ್ನ ಸೋಲಿಸುವ ಕೆಲಸ ಮಾಡ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗುಡುಗಿದರು.

ADVERTISEMENT

ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂ.ಲಕ್ಷ್ಮಣ್, ವಿರೋಧ ಪಕ್ಷವಾಗಿ ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡ್ತಿರೋದು ರಾಜ್ಯದ ದುರಂತ. ಸಂಸದ ಪ್ರತಾಪ್‌ ಸಿಂಹ, ಸಿ.ಟಿ‌ ರವಿ, ಅಶೋಕ್ ಚುನಾವಣೆ ಸೋತ ದಿನದಿಂದ ಕಾಂಗ್ರೆಸ್ ಪಕ್ಷವನ್ನ ಅಟ್ಯಾಕ್ ಮಾಡ್ತಿದ್ದಾರೆ. ಪ್ರತಾಪ್ ಸಿಂಹ ಅಡ್ಜಸ್ಟ್ಮೆಂಟ್ ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ನಿಮ್ಮ ಪಕ್ಷದಲ್ಲಿ ಯಾರು ಅಡ್ಜಸ್ಟ್ಮೆಂಟ್ ಮಾಡ್ಕೊಂಡಿದ್ರು ಹೇಳಿ..? 2014 ರಲ್ಲಿ ನೀವು ಹೇಗೆ ಗೆದ್ರಿ ಹೇಳಿ. ನೀವು ಗೆಲ್ಲಲು ಯಾರು ಸಪೋರ್ಟ್ ಮಾಡಿದ್ರು, ಯಾವ ಪಕ್ಷದವ್ರನ್ನ ಕಾಲಿಡ್ಕೊಂಡಿದ್ರಿ 2019 ರಲ್ಲಿ ಹೇಗೆ ಗೆದ್ರಿ ಹೇಳಿ…? ನೀವು ಪ್ರತಿನಿಧಿಸುವ ಮೈಸೂರು ಕೊಡಗು ವ್ಯಾಪ್ತಿಯಲ್ಲಿ ಎಲ್ಲಿ ಪ್ರಚಾರ ಮಾಡಿದ್ರಿ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಮಾಡಿದ್ರಿ..? ವರುಣ ಕ್ಷೇತ್ರದಲ್ಲಿ ಪ್ರಚಾರ ಮಾಡ್ತಿದ್ರಿ. ನಿಮ್ಮ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಯಾಕೆ ಪ್ರಚಾರ ಮಾಡ್ಲಿಲ್ಲ. ಅಲ್ಲೇಲ್ಲಾ ನೀವು ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡಿದ್ದೀರಾ ಎಂದು ಕುಟುಕಿದರು.

ಸಿದ್ದರಾಮಯ್ಯನವರ ವಿರುದ್ಧ ತೊಡೆ ತಟ್ಟಿದ್ರಿ. ಜನ ಏನು ಮಾಡಿದ್ರು ಗೊತ್ತಾಯ್ತಾ..? 2018ರಲ್ಲಿ ಪಾಪ ನಿಮ್ಮ ಮನೆಯವರು ಒಟ್ಟಾಗಿ ಕ್ಯಾನ್ವಾಸ್ ಮಾಡಿದ್ರಿ. 2019ರಲ್ಲೂ ನೀವು ನಿಮ್ಮ ಮನೆಯವರು ಕ್ಯಾನ್ವಾಸ್ ಮಾಡಿದ್ರಿ. ಆದ್ರೆ ಈ ಬಾರಿ ಚುನಾವಣೆಯಲ್ಲಿ ನಿಮ್ಮ ಮನೆಯವರು ಎಲ್ಲೂ ಕಾಣಲಿಲ್ಲ. ಯಾಕೆ ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡಿದ್ರಿ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಿಮ್ಮ ಕಾರ್ಯ ಏನು…? ನೀವು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬ್ಲ್ಯಾಕ್ ಮೆಲ್ ಮಾಡ್ತಿದ್ದಿರಿ. ಅದಕ್ಕೆ ಅಲ್ಲಿಗೆ ಹೋಗ್ತಿರಾ..? ಎಂದು ಕಿಡಿಕಾರಿದರು.

ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ಬಡಬಗ್ಗರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಬೇರೆ ಬೇರೆ ರಾಜ್ಯದಲ್ಲಿ ನಾವು ಅಕ್ಕಿಯನ್ನ ಪರ್ಚೇಸ್ ಮಾಡ್ತೀವಿ. ಅದಕ್ಕೆ ಸಂಬಂಧಿಸಿದಂತೆ ಚರ್ಚೆ ಆಗಿದೆ. ಕಳೆದ ಒಂದು ವಾರದಿಂದ ಬಿಜೆಪಿಯವ್ರು ಮೈಮೇಲೆ ಚೇಳು ಬಿಟ್ಕೊಂಡವರ ಆಗೆ ಆಡ್ತಿದ್ದಾರೆ. ವಿದ್ಯುತ್ ದರ ಹೆಚ್ಚಾಗಿದೆ ಅಂತಾ ನಮ್ಮ ಮೇಲೆ ಸುಳ್ಳು ಹೇಳ್ತಿದ್ದಾರೆ. ಆದರೆ ಈಗ ದರ ಏರಿಕೆ ಆಗಿರೋದು. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಒಟ್ಟು 5 ರೂಪಾಯಿ 62 ಪೈಸಾ ಹೆಚ್ಚಾಗಿದೆ. ಈಗ 70 ಪೈಸಾ ಹೆಚ್ಚಾಗಿರೋದು ಬಿಜೆಪಿ ಸರ್ಕಾರದ್ದೆ,ನಮ್ಮದಲ್ಲಾ. ಇವರು ಸುಳ್ಳು ಹೇಳ್ತಾರಲ್ಲ ಇವರಿಗೆ ಯಾವುದರಲ್ಲಿ ಹೊಡಿಬೇಕು. ಈವಾಗ ಎಲ್ಲಾ ಹಾರಾಡ್ತಾರೆ. ಹಿಂದೆ ವಿದ್ಯುತ್ ದರ ಹೆಚ್ಚಾದಾಗ ಯಾಕೆ ಸೌಂಡ್ ಮಾಡ್ಲಿಲ್ಲ. ಈಗ ಕಾಣ್ತಿದ್ಯಾ ನಿಮಗೆ. ಬಿಜೆಪಿಯ ಅಂದಾಭಿಮಾನಿಗಳು ಈಗ ಪ್ರತಿಭಟನೆ ಮಾಡ್ತಾರಂತೆ ಎಂದು ಎಂ.ಲಕ್ಷ್ಮಣ್ ಲೇವಡಿ ಮಾಡಿದರು.
ಪ್ರತಾಪ್ ಸಿಂಹ ಅವರೇ 2024 ರಲ್ಲಿ ನಡೆಯುವ ಚುನಾವಣೆಯಲ್ಲಿ ನಿಮ್ಮ ಪೊಲಿಟಿಕಲ್ ಲೈಫ್ ಎಂಡ್ ಆಗುತ್ತೆ. ನಿಮ್ಮನ್ನ ಸೋಲಿಸುವ ಕೆಲಸವನ್ನ ಬಿಜೆಪಿಯವ್ರೆ ಮಾಡ್ತಾರೆ. ನೀವು ಒಬ್ಬರೇ ಪ್ರೆಸ್ ಮೀಟ್ ಮಾಡ್ತಿದ್ದಿರಿ. ನಿಮ್ಮ ಜೊತೆಗೆ ಯಾವ ಒಬ್ಬ ನಾಯಕ ಬರಲ್ಲ. ಹೋಗಿ ಪಿರಿಯಾಪಟ್ಟಣ, ಚಾಮುಂಡೇಶ್ವರಿ, ಹುಣಸೂರು ಭಾಗದಲ್ಲಿ ಪ್ರೆಸ್ ಮೀಟ್ ಮಾಡಿ ನೋಡಣ. ಅಲ್ಲಿ ಹೋದ ತಕ್ಷಣ ನಿಮ್ಮ ಕಾರ್ಯಕರ್ತರೇ ಹೊಡಿತಾರೆ ನಿಮಗೆ. ಮಡಿಕೇರಿಗೆ ಪ್ರತಾಪ್ ಸಿಂಹ ಯಾವಾಗ ಬರ್ತಾರೆ ಅಂತಾ ಭೋಪಯ್ಯ, ಅಪ್ಪಚ್ಚು ರಂಜನ್ ಕಾಯುತ್ತಿದ್ದಾರೆ. ಮೈಸೂರಿನಲ್ಲಿ ನಾಗೇಂದ್ರ ಕಾಯುತ್ತಿದ್ದಾರೆ. ಅಡ್ಜಸ್ಟ್ಮೆಂಟ್ ರಾಜಕೀಯ ಮಾಡುತ್ತಿರುವ ಪ್ರತಾಪ್ ಸಿಂಹ ನಿಮಗೆ ಚಳಿ ಬಿಡಿಸ್ತಾರೆ. ಇತ್ತೀಚಿಗೆ ಪ್ರತಾಪ್ ಸಿಂಹ ಮಡಿಕೇರಿಗೆ ಹೋದಾಗ ಹಂದಿ ಹಿಂದೆಯಿಂದ ಬಂದು ಕಚ್ಬಿಡ್ತಂತೆ. ಅದಕ್ಕೆ ಪ್ರತಾಪ್ ಸಿಂಹ ಇತ್ತೀಚೆಗೆ ಜಾಸ್ತಿ ಕಿರ್ಚಾಡ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

Tags: BangaloreBJPCentral GovernmentKPCC Spokesperson M. LaxmanPratap SinghState Government
Previous Post

ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ 10 ಐಎಎಸ್​​ ಅಧಿಕಾರಿಗಳ ಪಟ್ಟಿ ಇಲ್ಲಿದೆ

Next Post

ಕಿಯೋನಿಕ್ಸ್‌ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025
Next Post
ಕಿಯೋನಿಕ್ಸ್‌ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

ಕಿಯೋನಿಕ್ಸ್‌ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

Please login to join discussion

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada