• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆ

Any Mind by Any Mind
January 17, 2024
in ಕರ್ನಾಟಕ, ರಾಜಕೀಯ
0
ಫೆ.4ಕ್ಕೆ ಮೈಸೂರಿನಿಂದ ಅಯೋಧ್ಯೆಗೆ ರೈಲು ಸಂಚಾರ
Share on WhatsAppShare on FacebookShare on Telegram

ಮೈಸೂರು: ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರನ್ನು ನೋಡಿದರೆ ಅಯ್ಯೋ ಪಾಪ ಅನ್ನಿಸುತ್ತೆ. ಎಸ್‌.ಎಂ. ಕೃಷ್ಣ ಅವರ ಬಳಿಕ ಮತ್ತೊಮ್ಮೆ ಸಿಎಂ ಆಗುವ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಅಂತ ಹಳೇ ಮೈಸೂರು ಭಾಗದಲ್ಲಿ ಪ್ರಚಾರ ಮಾಡಿದ್ದರು. ಒಕ್ಕಲಿಗರ ಮನೆ ಮನೆಗೆ ಹೋಗಿ ವೋಟು ಕೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಚುನಾವಣೆ ನಾಯಕತ್ವ ವಹಿಸಿದ್ದರು‌. ಮಾತ್ರವಲ್ಲ, ಚುನಾವಣೆಗೆ ಬಂಡವಾಳವನ್ನೂ ಹಾಕಿದ್ದರು. ಈ ಕಾರಣಕ್ಕಾಗಿಯೇ ಎರಡೂವರೆ ವರ್ಷದ ಬಳಿಕ ಸಿಎಂ ಆಗುವ ಭರವಸೆ ಸಿಕ್ಕಿತ್ತು. ಆದರೆ ಸಿದ್ದರಾಮಯ್ಯ ಸಿಎಂ ಚೇರ್‌ಗೆ ಬಂದು ಕುಳಿತ ಮೇಲೆ ವರಸೆ ಬದಲಾಗಿದೆ. ಮೊದಲು ಎಂ.ಬಿ‌.ಪಾಟೀಲ್ ಬಾಯಿಂದ ಐದು ವರ್ಷ ನಾನೇ ಸಿಎಂ ಅಂತ ಹೇಳಿಸಿದ್ದರು, ನಂತರ ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಕೆ‌.ಎನ್.ರಾಜಣ್ಣ ಅವರಿಂದ ಹೇಳಿಕೆ ಕೊಡಿಸಿದ್ದಾರೆ. ಬಳಿಕ ಸ್ವತಃ ಸಿದ್ದರಾಮಯ್ಯ ಅವರೇ ನಾನೇ ಐದು ವರ್ಷ ಸಿಎಂ ಅಂತ ಹೇಳಿದ್ದರು.

ADVERTISEMENT

ಆದರೆ ಇದೀಗ ಮಗನ ಮೂಲಕ ಹೇಳಿಸುತ್ತಿದ್ದಾರೆ. ಡಾ.ಯತೀಂದ್ರ ಹಾಸನದಲ್ಲಿ ನೀಡಿದ ಹೇಳಿಕೆ ಗಮನಿಸಿದ್ದೇನೆ. ನಮ್ಮ ಸಮುದಾಯದವರು, ಮುಸಲ್ಮಾನರು ಸಹಕಾರ ನೀಡಿದ್ದರಿಂದ ಸರ್ಕಾರ ಬಂತು ಅಂತ ಹೇಳಿದ್ದಾರೆ. ಆ ಮೂಲಕ ನಮಗೆ ಸ್ವಜಾತಿಯವರು, ಮುಸಲ್ಮಾನರು ಮಾತ್ರ ಮುಖ್ಯ ಅನ್ನುವ ಸಂದೇಶ ರವಾನಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಒಕ್ಕಲಿಗರು, ವರುಣದಲ್ಲಿ ಲಿಂಗಾಯತರು ಮತ ‌ನೀಡದೆ ಕಾಂಗ್ರೆಸ್ ಸರ್ಕಾರ ಬಂತಾ? 39 ಲಿಂಗಾಯತರು, ಹತ್ತಾರು ಒಕ್ಕಲಿಗರು ಶಾಸಕರಾಗಿದ್ದಾರೆ. ಖರ್ಗೆ ಕಾರಣಕ್ಕೆ ದಲಿತರೂ ಮತ ಹಾಕಿದ್ದಾರೆ. ಇದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ರಾಜ್ಯದ ಎಲ್ಲ ಜಾತಿ, ಜನಾಂಗದವರೂ ನಿಮಗೆ ದೋಖಾ ಆಗಿದೆ ಅಂತ ಅರ್ಥ ಮಾಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೋಲಾರದಲ್ಲಿ ರಾಮನ ಫ್ಲೆಕ್ಸ್‌ ಹರಿದ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದರೆ ರಾಮನಿಗೆ ಮನ್ನಣೆ ಇಲ್ಲ ಅನ್ನೋದು ಸಾಬೀತಾಗಿದೆ. ರಾಮಸೇತು ಪ್ರಕರಣದಲ್ಲಿ ಕಾಂಗ್ರೆಸ್ ಅಫಿಡೆವಿಟ್ ಸಲ್ಲಿಸಿತ್ತು. ಕಪಿಲ್ ಸಿಬಲ್ ಮೂಲಕ ರಾಮ ಕಾಲ್ಪನಿಕ ವ್ಯಕ್ತಿ ಅಂತ ಸುಪ್ರೀಂಕೋರ್ಟ್‌ನಲ್ಲಿ ವಾದ ಮಾಡಿಸಿತ್ತು. ಕರ್ನಾಟಕದಲ್ಲೂ ರಾಮನ ಆಶಯಕ್ಕೆ ಅನುಗುಣವಾದ ಸರ್ಕಾರ ಇಲ್ಲ. ಅದರಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಟೀಕಿಸಿದರು.

ಮೈಸೂರು: ಮೈಸೂರು- ಅಯೋಧ್ಯೆ ನಡುವೆ ರೈಲು ಸಂಪರ್ಕದ ಬಗ್ಗೆ ಮಾಹಿತಿ ನೀಡಿದ ಅವರು, ಫೆ.4ರಿಂದ ರೈಲು ಸಂಚಾರ ಆರಂಭ ಆಗಲಿದೆ.
15 ದಿನಕ್ಕೊಮ್ಮೆ ರೈಲು ಸಂಚರಿಸಲಿದೆ. 1280 ಆಸನಗಳ ವ್ಯವಸ್ಥೆ ಇರಲಿದ್ದು, ಇನ್ನೂ ಬುಕ್ಕಿಂಗ್ ಶುರುವಾಗಿಲ್ಲ. ಶೀರ್ಘದಲ್ಲೇ ಬುಕಿಂಗ್‌ಗೆ ಅವಕಾಶ ನೀಡಲಾಗುವುದು. ಆಸಕ್ತರು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.

Previous Post

ರಾಮ ಜಪ ಮಾಡಿ ಎಂದ ಗಾಯಕಿ ಚಿತ್ರಾ : ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಜೋರು

Next Post

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉತ್ತರ ಕೊಡಲ್ಲ : ಸಚಿವ ಸತೀಶ್ ಜಾರಕಹೊಳಿ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉತ್ತರ ಕೊಡಲ್ಲ : ಸಚಿವ ಸತೀಶ್ ಜಾರಕಹೊಳಿ

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉತ್ತರ ಕೊಡಲ್ಲ : ಸಚಿವ ಸತೀಶ್ ಜಾರಕಹೊಳಿ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada