ಬಿಜೆಪಿಯಲ್ಲಿ 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಷ್ಟೇ ತಯಾರಿಗಳು ಆರಂಭಗೊಂಡಿದೆ ಇದರ ನಡುವೆ ಯಾರಿಗೆ ಟಿಕೆಟ್ ನೀಡಬೇಕು ಟಿಕೆಟ್ ನೀಡಬಾರದು ಎಂಬ ವಿಚಾರದ ಕುರಿತು ಚರ್ಚೆಗಳು ಜೋರಾಗಿದೆ ಎಂಬ ಮಾತು ಬಿಜೆಪಿ ವಲಯದಿಂದ ಕೇಳಿಬಂದಿದೆ ಈಗ ಸದ್ಯದ ಮಟ್ಟಿಗೆ ಹಾಲಿ 25 ಸಂಸದರ ಪೈಕಿ 12ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ತಪ್ಪುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದಕ್ಕೆ ಪ್ರಮುಖ ಕಾರಣ ಕೆಲವರಿಗೆ ವಯಸ್ಸು ಹಾಗೂ ಅನಾರೋಗ್ಯದ ವಿಚಾರದಿಂದ ಟಿಕೆಟ್ ಕೈ ತಪ್ಪಿದರೆ, ಇನ್ನು ಕೆಲವರಿಗೆ ಪಕ್ಷದ ಸಂಘಟನೆಯಲ್ಲಿನ ನಿಷ್ಕ್ರೀಯತೆ ಮತ್ತು ನಿರಾಸಕ್ತಿ ಕಾರಣಕ್ಕಾಗಿ ಟಿಕೆಟ್ ನೀಡದೇ ಇರುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗುತ್ತಿದೆ ಇನ್ನು ಕೆಲವೊಂದು ಲೋಕಸಭಾ ಕ್ಷೇತ್ರಗಳಲ್ಲಿ ಮೂರು ನಾಲ್ಕು ಬಾರಿ ಒಬ್ಬರೇ ಸಂಸದರು ಗೆದ್ದಿರುವುದರಿಂದ ಆಡಳಿತ ವಿರೋಧಿ ಅಲೆ ಇರುವ ಕಾರಣ ಕೆಲವರಿಗೆ ಟಿಕೆಟ್ ನೀಡದೇ ಇರಲು ಸಾಧ್ಯತೆಗಳಿವೆ ಎನ್ನಲಾಗುತ್ತದೆ
ಅದರಲ್ಲೂ ಪ್ರಮುಖರ ಹೆಸರುಗಳು ಈ ಪಟ್ಟಿಯಲ್ಲಿ ಕೇಳಿಬಂದಿರುವುದು ಮುಂಬರುವ ದಿನಗಳಲ್ಲಿ ಹಲವು ಪ್ರಮುಖರಿಗೆ ಟಿಕೆಟ್ ಕೊಡದೆ ಇರಬಹುದು ಎನ್ನಲಾಗುತ್ತದೆ ಇದರ ಜೊತೆಗೆ ಒಂದು ವೇಳೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸೆಯಿದ್ದು ಬಿಜೆಪಿ ಟಿಕೆಟ್ ನೀಡದೆ ಹೋದರೆ ಆ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಸಾಧ್ಯತೆಗಳು ಇದಾವೆ ಎನ್ನಲಾಗುತ್ತಿದೆ
ಇದರಲ್ಲಿ ಪ್ರಮುಖವಾಗಿಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವಯೋ ಮಾನದ ಕಾರಣ ಸ್ರ್ಪಧಿಸುವ ಸಾಧ್ಯತೆ ಇಲ್ಲ. ಸಂಗಣ್ಣ ಕರಡಿ ಅವರು ಟಿಕೆಟ್ ನೀಡದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದಾರೆ. ಉತ್ತರಕನ್ನಡದ ಸಂಸದ ಅನಂತಕುಮಾರ್ ಹೆಗಡೆ ಅವರೂ ಅನಾರೋಗ್ಯದಿಂದ ಬಳಲುತ್ತಿದ್ದು, ಅವರೂ ಸ್ರ್ಪಧಿಸುವ ಸಾಧ್ಯತೆ ಇಲ್ಲ. ಬಾಗಲಕೋಟೆಯ ಪಿ.ಸಿ. ಗದ್ದಿಗೌಡರ್ ಸ್ಪರ್ಧೆಯಿಂದ ದೂರ ಉಳಿಯುವ ಸಾಧ್ಯತೆಗಳೇ ಸಂಸದರಾದ ಸಿದ್ದೇಶ್ವರ – ದಾವಣಗೆರೆ, ರಮೇಶ ಜಿಗಜಿಣಗಿ- ವಿಜಯಪುರ, ಡಿ.ವಿ. ಸದಾನಂದಗೌಡ-ಬೆಂಗಳೂರು ಉತ್ತರ, ಸ್ಪರ್ಧಿಸುವುದು ಅನುಮಾನ ಎನ್ನಲಾಗುತ್ತದೆ