ಅಯೋಧ್ಯೆಯ(Ayodhya) ರಾಮಮಂದಿರ(Rama Mandira) ಉದ್ಘಾಟನೆ ಹಿನ್ನೆಲೆಯಲ್ಲಿ ಭಾರತ(Team India) ಕ್ರಿಕೆಟ್(Cricket) ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ(Mahendra Singh Dhoni) ಅಧಿಕೃತ ಆಹ್ವಾನ ನೀಡಲಾಯಿತು.
ಎಂ.ಎಸ್.ಧೋನಿ ಅವರನ್ನು ಭೇಟಿಯಾದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾನ ಟ್ರಸ್ಟ್ನ ಸದಸ್ಯರು, ಜವನರಿ 22ರಂದು ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ನೀಡಿ, ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು. ಇಡೀ ವಿಶ್ವವೇ ಎದುರು ನೋಡುತ್ತಿರುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಇನ್ನು ಏಳು ದಿನಗಳಷ್ಟೇ ಬಾಕಿ ಉಳಿದಿದ್ದು, ಸಮಾರಂಭದ ಯಶಸ್ವಿಗೆ ಅಗತ್ಯವಿರುವ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ.
ಈ ನಡುವೆ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾನ ಟ್ರಸ್ಟ್ನ ಸದಸ್ಯರು ದೇಶದ ಹಲವು ಪ್ರಮುಖರನ್ನು ಸಮಾರಂಭಕ್ಕೆ ಆಹ್ವಾನಿಸುವಲ್ಲಿ ನಿರತರಾಗಿದ್ದು, ಇತ್ತೀಚೆಗೆ ಟೀಂ ಇಂಡಿಯಾದ ಮಾಜಿ ಆಟಗಾರ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರಿಗೂ ಸಹ ಆಹ್ವಾನ ನೀಡಿದ್ದರು.