• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ, ಸ್ಥಿತಿ ಗಂಭೀರ

ಕೃಷ್ಣ ಮಣಿ by ಕೃಷ್ಣ ಮಣಿ
February 7, 2024
in ಇದೀಗ
0
ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ, ಸ್ಥಿತಿ ಗಂಭೀರ
Share on WhatsAppShare on FacebookShare on Telegram

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದಲ್ಲಿ ಹಿಂದೂ ಯುವಕನಿಗೆ ಚಾಕು ಇರಿಯಲಾಗಿದೆ. 23 ವರ್ಷದ ಉಪನ್ಯಾಸಕ ಸುಶೀಲ್ ಚಾಕು ಇರಿತಕ್ಕೊಳಗಾದ ಯುವಕ. ಕುಮದ್ವತಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಬೈಕ್‌ನಲ್ಲಿ ವೀಲಿಂಗ್ ಮಾಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿಯಲಾಗಿದೆ. ಸುಶೀಲ್‌ಗೆ ಚಾಕು ಇರಿತ ಘಟನೆ ಬಳಿಕ ಶಿಕಾರಿಪುರ ಪಟ್ಟಣದಲ್ಲಿ ಜನರು ಜಮಾಯಿಸಿದ್ದು, ಪೊಲೀಸ್‌‌ ಬಂದೋಬಸ್ತ್‌ ಮಾಡಲಾಗಿದೆ.

ADVERTISEMENT

ನಾಲ್ಕು ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕರು ವೀಲಿಂಗ್‌ ಮಾಡುವಾಗ ಬುದ್ಧಿ ಹೇಳಿದ್ದಕ್ಕೆ ಚಾಕು ಇರಿಯಲಾಗಿದೆ. ಶಿಕಾರಿಪುರ ಪಟ್ಟಣದ ದೊಡ್ಡಪೇಟೆ ಮುಖ್ಯರಸ್ತೆಯಲ್ಲಿರುವ ವಿಠ್ಠಲ ದೇವಸ್ಥಾನದ ಬಳಿ ಘಟನೆ ನಡೆದಿದೆ. ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಬೈಕ್ ವೀಲಿಂಗ್ ಮಾಡುತ್ತಿದ್ದ ಯುವಕರ ತಂಡ, ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಆಗುತ್ತಿತ್ತು ಎನ್ನಲಾಗ್ತಿದೆ.

ವೀಲಿಂಗ್ ಮಾಡುತ್ತಿದ್ದಾಗ ಅದರಿಂದ ಸಾಮಾನ್ಯ ಜನರಿಗೆ ಆಗುವ ತೊಂದರೆ ಬಗ್ಗೆ ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ, ಉಪನ್ಯಾಸಕ ಸುಶೀಲ್‌ಗೆ ಆವಾಜ್‌ ಹಾಕಿ ಅಲ್ಲಿಂದ ತೆರಳಿದ್ದ ಮುಸ್ಲಿಂ ಯುವಕ, ಕೆಲ ಸಮಯದ ಬಳಿಕ ಸ್ನೇಹಿತರೊಂದಿಗೆ ಸ್ಥಳಕ್ಕೆ ಆಗಮಿಸಿ, ಸುಶೀಲ್‌ಗೆ ಚಾಕು ಇರಿದಿದ್ದಾರೆ. ಸುಶೀಲ ಹೊಟ್ಟೆ ಹಾಗೂ ಎದೆ ಭಾಗಕ್ಕೆ ಚಾಕುವಿನಿಂದ ಚುಚ್ಚಿರುವ ದುಷ್ಕರ್ಮಿಗಳ ತಂಡ, ಪರಾರಿಯಾಗಿದೆ.

ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿರುವ ಸುಶೀಲ್‌ಗೆ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಡಿಎಸ್ಪಿ ಕೇಶವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಶೀಲ್ ಮೇಲಿನ ದಾಳಿಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಅರಳಿಹಳ್ಳಿ ಖಂಡಿಸಿದ್ದಾರೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

Tags: AttackLectuermuslimshimoggaಉಪನ್ಯಾಸಕಚಾಕು ಇರಿತಪೊಲೀಸರುಮುಸ್ಲಿಂ ಯುವಕರುವ್ಹೀಲಿಂಗ್ಶಿಕಾರಿಪುರಶಿವಮೊಗ್ಗಹಿಂದೂ ಯುವಕ
Previous Post

‘ಲೋಕ’ ಗೆಲ್ಲಲು ಶಕ್ತಿ ದೇವತೆಯ ಮೊರೆ ಹೋದ ‘ರಾಜಾಹುಲಿ’

Next Post

ಪ್ರತಿಮಾ ರಾಜಕಾರಣವೂ ವಿಘಟನೆಯ ಹಾದಿಯೂ ಧ್ವಜ-ಲಾಂಛನ ಮತ್ತು ಪ್ರತಿಮೆಗಳು ಭ್ರಾತೃತ್ವನಾಶಕವಾಗಿ ಪರಿಣಮಿಸುತ್ತಿರುವುದು ಆತಂಕಕಾರಿ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಪ್ರತಿಮಾ ರಾಜಕಾರಣವೂ ವಿಘಟನೆಯ ಹಾದಿಯೂ ಧ್ವಜ-ಲಾಂಛನ ಮತ್ತು ಪ್ರತಿಮೆಗಳು ಭ್ರಾತೃತ್ವನಾಶಕವಾಗಿ ಪರಿಣಮಿಸುತ್ತಿರುವುದು ಆತಂಕಕಾರಿ

ಪ್ರತಿಮಾ ರಾಜಕಾರಣವೂ ವಿಘಟನೆಯ ಹಾದಿಯೂ ಧ್ವಜ-ಲಾಂಛನ ಮತ್ತು ಪ್ರತಿಮೆಗಳು ಭ್ರಾತೃತ್ವನಾಶಕವಾಗಿ ಪರಿಣಮಿಸುತ್ತಿರುವುದು ಆತಂಕಕಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada