ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಈ ರೀತಿ ಪರಸ್ಪರ ಕೆಸರೆರಚುತ್ತಿರುವುದು ಸರಿಯಲ್ಲ. ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಹೇಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು.
ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು.
![](https://pratidhvani.com/wp-content/uploads/2023/02/ro-ru1676889117.jpg)
ಅಧಿಕಾರಿಗಳ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ. ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಷಯ ಅತ್ಯಂತ ದುರ್ದೈವ. ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು ಎಂದು ಜೋಶಿ ಹೇಳಿದರು