• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯ ಸುತ್ತ ಬಿಗಿ ಭದ್ರತೆ

ಪ್ರತಿಧ್ವನಿ by ಪ್ರತಿಧ್ವನಿ
August 14, 2021
in ದೇಶ
0
ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯ ಸುತ್ತ ಬಿಗಿ ಭದ್ರತೆ
Share on WhatsAppShare on FacebookShare on Telegram

ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿದ್ದಂತೆಯೇ ದೆಹಲಿಯ ಕೆಂಪು ಕೋಟೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಲವು ಹಂತಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸುಮಾರು 5000ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಬಾರಿ ಕೆಂಪು ಕೋಟೆಯ ಸುತ್ತ ಬಿಗಿ ಪಹರೆ ಕಾಯ್ದುಕೊಳ್ಳಲಿವೆ.

ADVERTISEMENT

NSG ಸ್ನೈಪರ್ಸ್ ಪಡೆ, SWAT ಕಮಾಂಡೊ, ಕೈಟ್ ಕ್ಯಾಚರ್ಸ್ ಪಡೆ, ಶ್ವಾನ ದಳ ಮತ್ತು ಶಾರ್ಪ್ ಶೂಟರ್ಸ್ ಪಡೆಗಳನ್ನು ಕೆಂಪು ಕೋಟೆಯ ಸುತ್ತಲಿರುವ ಎತ್ತರದ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಇತ್ತೀಚಿಗೆ ಜಮ್ಮು ಏರ್ಪೋರ್ಟ್’ನಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಡ್ರೋನ್ ಬಳಸಿ ಬಾಂಬ್ ದಾಳಿ ನಡೆಸಿದ ಕಾರಣಕ್ಕೆ, ಕೆಂಪು ಕೋಟೆಯ ಸುತ್ತ ಡ್ರೋನ್ ನಿರೋಧಕ ವ್ಯವಸ್ಥೆಯನ್ನು ಕೂಡಾ ಅಳವಡಿಸಿಕೊಳ್ಳಲಾಗಿದೆ.

ಎರಡು ಪೊಲೀಸ್ ಕಂಟ್ರೋಲ್ ರೂಮ್ ಬಳಸಿಕೊಂಡು 350 ಕ್ಯಾಮೆರಾಗಳ ಮುಖಾಂತರ ಪ್ರತಿಕ್ಷಣದ ಚಲನವಲನಗಳ ಮೇಲೆ ನಿಗಾ ಇರಿಸಲಾಗುತ್ತಿದೆ. ಕೋವಿಡ್ ನಿಯಮಗಳ ಪಾಲನೆಯನ್ನು ಅನುಷ್ಠಾನಗೊಳಿಸಲು ಹಾಗೂ ಭದ್ರತೆಯನ್ನು ಕಾಪಾಡಲು 5000ದಷ್ಟು ಭದ್ರತಾ ಪಡೆಯ ಸಿಬ್ಬಂದಿಗಳು ಕೆಂಪು ಕೋಟೆಯಲ್ಲಿ ಇರಲಿದ್ದಾರೆ.

ಹಿಂದೆಂದೂ ಕೈಗೊಳ್ಳದ ವಿಶೇಷ ಭದ್ರತಾ ಕ್ರಮವೊಂದನ್ನು ಈ ಬಾರಿ ಕೈಗೊಳ್ಳಲಾಗಿದೆ. ಜನವರಿ 26ರಂದು ರೈತರ ಟ್ರ್ಯಾಕ್ಟರ್ ಮೆರವಣಿಗೆಯ ವೇಳೆ ನಡೆದಂತಹ ಅನಾಹುತಕಾರಿ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ, ಬೃಹತ್ ಕಂಟೈನರ್’ಗಳನ್ನು ಕೆಂಪು ಕೋಟೆಯ ಪ್ರವೇಶ ದ್ವಾರದ ಬಳಿ ಇಡಲಾಗಿದೆ. ಆಮಂತ್ರಿತ ಅತಿಥಿಗಳ ಹೊರತಾಗಿ ಬೇರೆ ಯಾರೂ ಸ್ವಾತಂತ್ರ್ಯ ದಿನಾಚರಣೆಯ ಸ್ಥಳ ಪ್ರವೇಶಿಸದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ, ದೆಹಲಿಯ ಚಾಂದನಿ ಚೌಕ್ ಹಾಗೂ ಆಸುಪಾಸಿನ ಪ್ರದೇಶದಿಂದ ಕೆಂಪುಕೋಟೆಯ ಒಳಗೆ ಏನು ನಡೆಯುತ್ತಿದೆ ಎಂಬುದು ಕಾಣಿಸದಷ್ಟು ಎತ್ತರಕ್ಕೆ ಈ ಕಂಟೈನರ್’ಗಳನ್ನು ಇಡಲಾಗಿದೆ.

ಇದರೊಂದಿಗೆ, 70 ಪಿಸಿಆರ್ ವಾಹನಗಳು, ಪ್ರಹಾರ್ ವಾಹನಗಳು ಮತ್ತು ತುರ್ತು ರಕ್ಷಣಾ ಘಟಕದ ವಾಹನಗಳು ಕೂಡಾ ಕೆಂಪು ಕೋಟೆಯ ಸುತ್ತ ನಿಯೋಜಿಸಲಾಗಿವೆ. ಕೋಟೆಯ ಆಸುಪಾಸಿನ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಗಳು ಬೈಕುಗಳ ಮೇಲೆ ಗಸ್ತು ತಿರುಗಲಿದ್ದಾರೆ. ಯಮುನಾ ನದಿಯಲ್ಲಿಯೂ ಬೊಟ್ ಮೂಲಕ ಪೊಲೀಸ್ ಪಡೆಗಳು ಗಸ್ತು ತಿರುಗಲಿದ್ದು, ಯಾವುದೇ ಅಚಾತುರ್ಯ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಕೃಷಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಬೀಡು ಬಿಟ್ಟಿರುವ ಪ್ರತಿಭಟನಾ ನಿರತ ರೈತರು ನಗರದೊಳಗೆ ಪ್ರವೇಶಿಸದಂತೆಯೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೆಹಲಿಯೊಳಗೆ ಪ್ರವೇಶಿಸಿರುವ ವ್ಯಕ್ತಿಗಳ ಕುರಿತು ಮಾಹಿತಿ ದೃಢೀಕರಣ ಪ್ರಕ್ರಿಯೆ ನಡೆಸಲಾಗಿದೆ. ದೆಹಲಿಯ ನಿವಾಸಿಗಳ ಹಾಗೂ ಇಲ್ಲಿ ಬಾಡಿಗೆಗೆ ಇರುವವರ ಗುರುತು ಪತ್ತೆ ಕೂಡಾ ಮಾಡಲಾಗಿದೆ.

ನಾಳೆ ಕೆಂಪು ಕೋಟೆಯಲ್ಲಿ ಕಾರ್ಯಕ್ರಮ ನಡೆಯುತ್ತಿರುವ ವೇಳೆ ದೆಹಲಿಯ ಎಂಟು ರಸ್ತೆಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಯಾವುದೇ ರೀತಿಯ ಭೌತಿಕ ವಸ್ತುಗಳ ಹಾರಾಟವನ್ನು ಆಗಸ್ಟ್ 16ರ ವರೆಗೆ ನಿರ್ಬಂಧಿಸಲಾಗಿದೆ. ನಿಯಮ ಮೀರಿ ಡ್ರೋನ್ ಹಾರಾಟ ನಡೆಸಿದ ವೆಬ್ ಸಿರೀಸ್ ತಂಡವೊಂದರ ವಿರುದ್ದ ಈಗಾಗಲೇ ಪ್ರಕರಣವನ್ನೂ ದಾಖಲಿಸಲಾಗಿದೆ

Tags: DelhiIndependence Day
Previous Post

ರೈತರ ಜೀವನದ ಜೊತೆ ಚೆಲ್ಲಾಟವಾಡಬೇಡಿ – ಮಾಜಿ ಶಾಸಕ ಹೆಚ್‌ ಸಿ ಬಾಲಕೃಷ್ಣ

Next Post

ಭದ್ರಾ ಜಲಾಶಯ ಮೈದುಂಬಿದ್ದು, ನೀರಾವರಿ ಸಚಿವ ಗೋವಿಂದ ಕಾರಜೋಳ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಬಾಗಿನ ಅರ್ಪಿಸಲಾಯಿತು

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post

ಭದ್ರಾ ಜಲಾಶಯ ಮೈದುಂಬಿದ್ದು, ನೀರಾವರಿ ಸಚಿವ ಗೋವಿಂದ ಕಾರಜೋಳ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಬಾಗಿನ ಅರ್ಪಿಸಲಾಯಿತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada