• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

ಪ್ರತಿಧ್ವನಿ by ಪ್ರತಿಧ್ವನಿ
July 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗ ಕಂಡ ಅದ್ಭುತ ನಟಿ ಬಿ. ಸರೋಜಾ ದೇವಿ ಇನಿಲ್ಲ..! ಹಲವು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ.. ಅಂದಿನ ಕಾಲದ ಎಲ್ಲಾ ಭಾಷೆಯ ಸೂಪರ್‌ ಸ್ಟಾರ್‌ ನಟರೊಂದಿಗೆ ತೆರೆಹಂಚಿಕೊಂಡಿದ್ದ ಬಿ ಸರೋಜಾ ದೇವಿ ಇಂದು ಕೊನೆಯುಸಿರೆಳೆದಿದ್ದಾರೆ.

ADVERTISEMENT

ಬಿ. ಸರೋಜಾ ದೇವಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಸುಮಾರು 9 ಗಂಟೆ ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿ ಸರೋಜಾ ದೇವಿ ಅವರಿಗೆ 87 ವರ್ಷ ವಯಸ್ಸಾಗಿತ್ತು.

ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರತಾರೆಯರಲ್ಲಿ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿ.

ಬಿ. ಸರೋಜದೇವಿ ಅವರು ಏಳು ದಶಕಗಳಲ್ಲಿ ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರ ಮನೋಜ್ಞ ಅಭಿನಯಕ್ಕೆ ಕನ್ನಡದಲ್ಲಿ “ಅಭಿನಯ ಸರಸ್ವತಿ” ಮತ್ತು ತಮಿಳಿನಲ್ಲಿ “ಕನ್ನಡತು ಪೈಂಗಿಲಿ” ಅಂದ್ರೆ ; ಕನ್ನಡದ ಗಿಳಿ ಎಂದೇ ಕರೆಯಲಾಗುತ್ತಿತ್ತು.

ಬಹುಭಾಷಾ ನಟಿ:

ಬಿ. ಸರೋಜದೇವಿ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ನಟಿಸಿ ಸೈ ಎನ್ನಿಸಿಕೊಂಡಿದ್ದರು.
ಕನ್ನಡದಲ್ಲಿ ಡಾ.ರಾಜ್‌ಕುಮಾರ್, ಕಲ್ಯಾಣ್‌ಕುಮಾರ್, ಉದಯಕುಮಾರ್ ಅವರ ಜೊತೆ ನಟಿಸಿದರು. ತೆಲುಗಿನಲ್ಲಿ ಎ. ನಾಗೇಶ್ವರರಾವ್, ಎನ್.ಟಿ. ರಾಮರಾವ್ ಅವರ ಜೊತೆ ನಟಿಸಿದರು. ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿಗಣೇಶನ್ ಜೊತೆಗೆ ಸುಮಾರು ೨೨ ಹಿಟ್ ಚಿತ್ರಗಳಲ್ಲಿ ನಟಿಸಿದ್ದರು.


ಅಂದಿನ ತಮಿಳಿನ ಸೂಪ್ಪರ್‌ ಸ್ಟಾರ್‌ ನಟ ಎಂ.ಜಿ. ರಾಮಚಂದ್ರನ್ ಜೊತೆ ಸುಮಾರು ೨೬ ಹಿಟ್ ಚಿತ್ರಗಳಲ್ಲಿ ನಟಿಸಿದರು.
ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಬಿ. ಸರೋಜದೇವಿ ಅವರು ನಿರ್ವಹಿಸದ ಪಾತ್ರವೇ ಇಲ್ಲಾ.


ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರಕುಮಾರ್, ಶಮ್ಮೀಕಪೂರ್, ಸುನಿಲ್‌ದತ್ ಜೊತೆ ನಟಿಸಿದ ಸರೋಜಾದೇವಿ, ಚತುರ್ಭಾಷಾ ತಾರೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೊದಲ ಕನ್ನಡ ನಟಿ ಎಂಬ ಕೀರ್ತಿಗೆ ಪಾತ್ರರಾಗಿದ್ದರು.

ಬಾಲ್ಯದಲ್ಲೇ ಕಲಾ ಸರಸ್ವತಿ ಕೈ ಹಿಡಿದಳು:

ಸರೋಜಾದೇವಿಯವರು ಬೆಂಗಳೂರಿನ್ನಲಿ ೭ ಜನವರಿ ೧೯೩೮ ರಂದು ಜನಿಸಿದರು. ಸರೋಜಾದೇವಿ ಅವರಿಗೆ ಬಾಲ್ಯದಿಂದಲೇ ಲಲಿತಕಲೆಗಳ ಬಗ್ಗೆ ಆಸಕ್ತಿ ಇತ್ತು. ಆಕೆಯ ತಂದೆ ಭೈರಪ್ಪ ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು ಮತ್ತು ತಾಯಿ ರುದ್ರಮ್ಮ ಗೃಹಿಣಿಯಾಗಿದ್ದರು.

ಅವಳು ಅವರ ನಾಲ್ಕನೇ ಮಗಳು. ಭೈರಪ್ಪ ಆಕೆಗೆ ನೃತ್ಯ ಕಲಿಯಲು ಹೇಳಿದರು ಮತ್ತು ನಟನೆಯನ್ನು ವೃತ್ತಿಯಾಗಿ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸಿದರು. ಯುವತಿಯಾದ ಸರೋಜಾ ದೇವಿಯು ತಂದೆ ಸ್ಟುಡಿಯೋಗಳಿಗೆ ಆಗಾಗ್ಗೆ ಜೊತೆಯಾಗುತ್ತಿದ್ದರು. ಬಿ. ಸರೋಜದೇವಿ ಅವರು ತಮ್ಮ ೧೭ ನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪ್ರವೇಶ ಪಡೆದಿದ್ದರು.

ಒಟ್ಟಾರೆ ಕನ್ನಡದ ಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ ಎಂಬ ಸುದ್ದಿ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದೇ ಹೇಳಬಹುದು.

Tags: A Nageshwara RaoAmitha BacchanB Saroja DeviDr RajkumarGemini GaneshanHindhiKalyan KumarKannadaKannada ActressMGRNT Rama raontrsandalwoodShivaji GaneshantamilteluguUday Kumar
Previous Post

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

Next Post

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada