ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಭೀಕರವಾಗಿ ಅತ್ಯಚಾರಕ್ಕೆ ಒಳಗಾದ 33 ವರ್ಷದ ಸಂತ್ರಸ್ತೆ ಶನಿವಾರ ನಿಧನರಾಗಿದ್ದಾರೆ. ಸಂತ್ರಸ್ತೆಯನ್ನು ದಾಖಲಿಸಿದ ರಾಜವಾಡಿ ಆಸ್ಪತ್ರೆಯು 33 ಗಂಟೆಗಳ ಕಾಲ ಸುದೀರ್ಘ ಚಿಕಿತ್ಸೆಯ ನಂತರ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಸ್ಪತ್ರೆ ದೃಢಪಡಿಸಿದೆ. ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಸಂತ್ರಸ್ತೆಯನ್ನು ಭೇಟಿಯಾಗಲು ಆಸ್ಪತ್ರೆಗೆ ಭೇಟಿ ನೀಡಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ಆಕೆಯ ಭೇಟಿಯ ನಂತರ, ಸಂತ್ರಸ್ತೆಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಮೇಯರ್ ತಿಳಿಸಿದ್ದರು. ಅತ್ಯಾಚಾರ ಸಂತ್ರಸ್ತೆಯು ಶುಕ್ರವಾರದ ಮಧ್ಯರಾತ್ರಿ ಟೆಂಪೋದಲ್ಲಿ ಅತ್ಯಚಾರ ಎಸಗಿದ್ದರು. ನಂತರ ಆಕೆಯ ಸ್ಥಿತಿ ಗಂಬೀರವಾದ ಕಾರನ ವೆಂಟಿಲೇಟರ್ ಬೆಂಬಲದಲ್ಲಿದ್ದರು.
ಈ ಪ್ರಕಣಕ್ಕೆ ಸಂಬಧಪಟ್ಟ ಅರೋಪಿಯನ್ನು ಸಾಕಿ ನಾಕಾ ಪೊಲೀಸರು ಬಂಧಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ಕೊಟ್ಟ ಮುಂಬೈ ಶಿವಸೇನಾ ಎಂಎಲ್ಸಿ ಮನಿಷಾ ಕಯಾಂಡೆ ಮಾತನಾಡಿ, ನನಗೆ ವೈದ್ಯರು ನೀಡಿರುವ ಮಾಹಿತಿಯ ಪ್ರಕಾರ, ಅತ್ಯಾಚಾರಕ್ಕೊಳಗಾದ ಮಹಿಳೆ ಬಹಳ ಗಂಭಿರವಾಗಿದ್ದಾಳೆ “, ಅಕೆಗೆ ಒಂದು ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದಾದರು ಇನ್ನು ಗಂಭೀರವಾಗಿದ್ದಾಳೆ” ಎಂದು ಹೇಳಿದ್ದಾರೆ.
ಮನಿಷಾ ಕಯಾಂಡೆ ಹೇಳಿರುವ ಪ್ರಕಾರ, ಅತ್ಯಾಚಾರಕ್ಕೊಳಗಾದ ಮಹಿಳೆ ವಯಸ್ಸು ಸುಮಾರು 32 ರಿಂದ 34, ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ ಮತ್ತು “ಈ ಕೃತ್ಯವು ಒಬ್ಬ ವ್ಯಕ್ತಿಯಿಂದ ಮಾಡಲ್ಪಟ್ಟಿದೆಯೇ ಅಥವಾ ಇದು ಸಾಮೂಹಿಕ ಅತ್ಯಾಚಾರವೇ ಎಂಬುದು ತನಿಖೆಯ ನಂತರ ತಿಳಿಯುತ್ತದೆ” ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಈ ಘಟನೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದು. ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಆಕೆಯ ಖಾಸಗಿ ಭಾಗಗಳಲ್ಲಿ ರಾಡ್ ನಿಂದ ಹಲ್ಲೆ ಮಾಡಲಾಗಿದೆ. ಆರೋಪಿಯನ್ನು ಸೆಕ್ಷನ್ 307, 376, 323, ಮತ್ತು 504 ರ ಅಡಿಯಲ್ಲಿ ಪ್ರಕಣವನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಹ ಈ ಘಟನೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತೆಯನ್ನು ದಾಖಲಿಸಿದ ರಾಜವಾಡಿ ಆಸ್ಪತ್ರೆಯು 33 ಗಂಟೆಗಳ ಕಾಲ ಸುದೀರ್ಘ ಚಿಕಿತ್ಸೆಯ ನಂತರ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಸ್ಪತ್ರೆ ದೃಢಪಡಿಸಿದೆ