ಕೆಲ ದಿನಗಳ ಹಿಂದಷ್ಟೇ, ದೇಶದ 13 ವಿಮಾನ(Flight) ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಗೆ ಬೆದರಿಕೆಯ ಮೇಲ್ ಬಂದಿತ್ತು. ಬೆಂಗಳೂರು, ದೆಹಲಿ, ಅಹಮದಾಬಾದ್, ಚೆನ್ನೈ ಸೇರಿ ಹಲವು ನಗರಗಳ ಶಾಲೆಗಳನ್ನೂ ಸ್ಫೋಟಿಸುವ ಬೆದರಿಕೆ ಕರೆಗಳು ಬಂದಿದ್ದವು. ಈಗ ತಾಜ್ ಹೋಟೆಲ್(Hotel) ಹಾಗೂ ವಿಮಾನ ನಿಲ್ದಾಣಕ್ಕೂ ಬೆದರಿಕೆ ಒಡ್ಡಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿರುವ ಶಾಲೆಗಳು(School), ವಿಮಾನ ನಿಲ್ದಾಣಗಳನ್ನು(Airport) ಬಾಂಬಿಟ್ಟು ಸ್ಫೋಟಿಸುವ ಕುರಿತು ಕೆಲ ತಿಂಗಳಿಂದ ಬೆದರಿಕೆ ಕರೆಗಳು (Bomb Threat) ಬರುತ್ತಲೇ ಇವೆ. ಇದರ ಬೆನ್ನಲ್ಲೇ, ಮುಂಬೈನಲ್ಲಿರುವ ತಾಜ್ ಹೋಟೆಲ್ (Taj Hotel) ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್ನ್ಯಾಷನಲ್ ವಿಮಾನ ನಿಲ್ದಾಣವನ್ನು (Chhatrapati Shivaji Maharaj International Airport) ಸ್ಫೋಟಿಸುವ ಕುರಿತು ಮುಂಬೈ(Mumbai) ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಹಾಗಾಗಿ, ಮುಂಬೈ ತಾಜ್ ಹೋಟೆಲ್ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು(Security) ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್ ಬೆಂಬಲಿಸಿ : ತಮಿಳಿಗರಿಗೆ ಮೋಹನ್ ಕೊಂಡಜ್ಜಿ ಕರೆ
ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...
Read moreDetails






