• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’

ಕೃಷ್ಣ ಮಣಿ by ಕೃಷ್ಣ ಮಣಿ
March 21, 2023
in Top Story, ಕರ್ನಾಟಕ, ರಾಜಕೀಯ, ಸಿನಿಮಾ
0
ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’
Share on WhatsAppShare on FacebookShare on Telegram

ಬೆಂಗಳೂರು ಮಾ.21: ಒಕ್ಕಲಿಗರನ್ನು ಧರ್ಮದ ಆಧಾರದ ಮೇಲೆ ಓಲೈಕೆ ಮಾಡುವ ಯತ್ನದಲ್ಲಿ ಬಿಜೆಪಿ ಸೋಲುಂಡಿದೆ. ಉರಿಗೌಡ-ನಂಜೇಗೌಡ ಕುರಿತ ವಿವಾದವನ್ನು ಪರ ವಿರೋಧ ಅಲೆಯಾಗಿ ಸೃಷ್ಟಿಸಿಕೊಂಡು ಪರವಾದ ಅಲೆಯನ್ನು ಮತಗಳನ್ನಾಗಿ ಪರಿವರ್ತಿಸುವ ಯೋಜನೆಯನ್ನು ಬಿಜೆಪಿ ರೂಪಿಸಿತ್ತು. ಆದರೆ ಹಳೇ ಮೈಸೂರು ಭಾಗದ ಒಕ್ಕಲಿಗರು, ಕರಾವಳಿ ಭಾಗದ ರೀತಿ ಬಿಜೆಪಿ ಪಾಲಿಗೆ ಶರಣಾಗದೆ ಸೆಟೆದು ನಿಂತ ಪರಿಣಾಮ ಬಿಜೆಪಿ ಯೂ ಟರ್ನ್​ ತೆಗೆದುಕೊಂಡಿದೆ. ಈ ಮೊದಲು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ದಿನ ಮಂಡ್ಯದಲ್ಲಿ ನಾಲ್ಕು ದ್ವಾರಗಳ ಪೈಕಿ ಒಂದು ದ್ವಾರಕ್ಕೆ ಉರಿಗೌಡ, ದೊಡ್ಡ ನಂಜೇಗೌಡ ಎಂದು ಹೆಸರಿಟ್ಟು ವಿರೋಧ ವ್ಯಕ್ತವಾದ ಬಳಿಕ ಹೆಸರಿನ ದ್ವಾರವನ್ನು ತೆಗೆದು, ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರ ಎಂದು ಮರುನಾಮಕರಣ ಮಾಡಿತ್ತು. ಅಂದು ಮುಖಭಂಗ ಅನುಭವಿಸಿದ್ದ ಭಾರತೀಯ ಜನತಾ ಪಾರ್ಟಿ, ಮತ್ತೊಮ್ಮೆ ಉರಿಗೌಡ-ನಂಜೇಗೌಡ ಎನ್ನುವ ಹೆಸರಲ್ಲಿ ಸಿನಿಮಾ ನಿರ್ಮಾಣ ಮಾಡುವ ಬಗ್ಗೆ ಹೇಳಿಕೆ ಕೊಟ್ಟು ಇದೀಗ ಎರಡನೇ ಬಾರಿ ತನ್ನ ಹೇಳಿಕೆಯಿಂದ ಹಿಂದೆ ಸರಿಯುವ ಮೂಲಕ ಮುಖಭಂಗ ಅನುಭವಿಸಿದೆ.

ADVERTISEMENT

ಸಿನಿಮಾ ನಿರ್ಮಾಣದಿಂದ ಹಿಂದೆ ಸರಿದ ಮುನಿರತ್ನ..

ಉರಿಗೌಡ – ನಂಜೇಗೌಡ ಬಗ್ಗೆ ಬಿಜೆಪಿ ನಾಯಕರಾದ ಸಿಟಿ ರವಿ ಹಾಗು ಅಶ್ವತ್ಥ ನಾರಾಯಣ ಬೆಂಕಿ ಕಿಡಿ ಹಚ್ಚುತ್ತಿದ್ದ ಹಾಗೆ ಸಚಿವ ಮುನಿರತ್ನ ಉರಿಗೌಡ – ನಂಜೇಗೌಡ ಎಂಬ ಹೆಸರಿನಲ್ಲಿ ಸಿನಿಮಾ ಮಾಡಲು ಟೈಟಲ್​ ರಿಜಿಸ್ಟರ್​ ಮಾಡಿದ್ದರು. ಮೇ ಎರಡನೇ ವಾರದಲ್ಲಿ ಚಲನಚಿತ್ರಕ್ಕೆ ಮುಹೂರ್ತ ಕಂಠೀರವ ಸ್ಟೇಡಿಯಂನಲ್ಲಿ ಎಂದು ಘೋಷಣೆ ಕೂಡ ಮಾಡಿದ್ದರು. ಇದಕ್ಕೆ ಚಿತ್ರಕಥೆಯನ್ನು ಸಚಿವ ಅಶ್ವತ್ಥ ನಾರಾಯಣ ಮಾಡ್ತಾರೆ ಎನ್ನುವಾಗಲೇ ಕೊಂಚ ಹಿನ್ನಡೆ ಆಗಿತ್ತು. ಸಚಿವ ಅಶ್ವತ್ಥ ನಾರಾಯಣ ನಾನು ಚಿತ್ರಕಥೆ ಮಾಡ್ತಿಲ್ಲ, ನಮ್ಮ ಸ್ನೇಹಿತರು ಚಿತ್ರ ಮಾಡ್ತಿದ್ದಾರೆ ಅವರಿಗೆ ಒಳ್ಳೆಯದಾಗಲಿ. ನಾನು ಯಾವುದೇ ಚಿತ್ರಕಥೆ ಮಾಡ್ತಿಲ್ಲ ಎನ್ನುವ ಮೂಲಕ ಯೂಟರ್ನ್​ ಹೊಡೆದಿದ್ದರು. ಆ ಬಳಿಕ ಸಚಿವ ಮುರುಗೇಶ್​ ನಿರಾಣಿ ಸ್ವಪಕ್ಷದ ನಾಯಕರ ಉರಿಗೌಡ-ನಂಜೇಗೌಡ ರಾಜಕೀಯ ಹೇಳಿಕೆಗಳನ್ನು ಬಹಿರಂಗವಾಗಿ ಟೀಕೆ ಮಾಡಿದ್ದರು. ಅಂತಿಮವಾಗಿ ಆದಿಚುಂಚನಗಿರಿ ಒಕ್ಕಲಿಗ ಮಠದ ಶ್ರೀ ನಿರ್ಮಲಾನಂದನಾಥ ಶ್ರೀಗಳು ಮುನಿರತ್ನ ಕರೆದು ಮಾತನಾಡ್ತಿದ್ದ ಹಾಗೆ ಎಲ್ಲದ್ದಕ್ಕೂ ಬ್ರೇಕ್​ ಬಿತ್ತು.

ಸಿಎಂ ಬೊಮ್ಮಾಯಿ, ಆರ್ ಅಶೋಕ್, ಸಿ.ಟಿ ರವಿ ಗಪ್​ಚುಪ್​..!

ಉರಿಗೌಡ – ನಂಜೇಗೌಡ ವಿವಾದ ಬಗ್ಗೆ ಮುನಿರತ್ನ ಅವರನ್ನು ಕರೆಸಿಕೊಂಡು ಮಾತನಾಡಿದ ನಿರ್ಮಲಾನಂದ ಶ್ರೀಗಳು, ಕಾಲ್ಪನಿಕ ಕಥೆಗಳನ್ನು ಚಿತ್ರಕಥೆ ಮಾಡುವುದು ಸೂಕ್ತವಲ್ಲ, ಕಾಲ್ಪನಿಕ ಪಾತ್ರಗಳು ಕಾದಂಬರಿಯಲ್ಲಿ ಬರುತ್ತವೆ. ಹಾಗೇನಾದರೂ ನಿಖರವಾದ ಸಾಕ್ಷ್ಯಗಳು ಇದ್ದರೆ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ತಂದುಕೊಡಿ, ಈಗ ಸಾಕಷ್ಟು ಆಯಾಮಗಳಲ್ಲಿ ತನಿಖೆ ಮಾಡಬಹುದಾಗಿದೆ. ಸತ್ಯವಿದ್ದರೆ ಒಪ್ಪಿಕೊಳ್ಳೋಣ. ಆದರೆ ಕಾಲ್ಪನಿಕ iತಿಹಾಸಕಾರರು ಹೇಳದೆ ಇರುವ ಹೆಸರುಗಳನ್ನು ಬಳಸಿಕೊಂಡು ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಕಟ್ಟುನಿಟ್ಟಾಗಿ ಹೇಳಿದ್ದಾರೆ. ಆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸ್ವಾಮೀಜಿ ಹೇಳಿದಂತೆ ಕೇಳುತ್ತೇವೆ ಎಂದಿದ್ದಾರೆ. ಸಿ.ಟಿ ರವಿ ಹಾಗು ಆರ್​ ಅಶೋಕ್​ ಕೂಡ ಶ್ರೀಗಳು ನಮ್ಮ ಜೊತೆಗೂ ಫೋನ್​ನಲ್ಲಿ ಮಾತನಾಡಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಮುಕ್ತಾಯ ಮಾಡುವುದು ಒಳ್ಳೆಯದು. ಶ್ರೀಗಳು ಈ ರೀತಿಯ ಸಿನಿಮಾ ಬೇಡ ಅಂತ ಹೇಳಿದ್ರು ಎಂದಿದ್ದಾರೆ. ಇನ್ನು ಸಂಸದ ಡಿ.ಕೆ ಸುರೇಶ್​ ಮಾತನಾಡಿ, ವ್ಯಾಪಾರಸ್ಥರು, ಯಾರನ್ನು ಬೇಕಾದರೂ ಇಟ್ಟುಕೊಂಡು ವ್ಯಾಪಾರ ಮಾಡ್ತಾರೆ. ಅಂತವರನ್ನು ಯಾಕೆ ಶ್ರೀಗಳು ಯಾಕೆ ಕರೆಸಿದ್ರು ಅಂತ ಗೊತ್ತಿಲ್ಲ. ಹಣ ಮಾಡೋದೆ ಅವರೆ ಗುರಿ, ಒಕ್ಕಲಿಗರನ್ನು ಮುಂದಿಟ್ಟುಕೊಂಡು ವ್ಯಾಪಾರ ಮಾಡಲು ಮುಂದಾಗಿದ್ದರು‌ ಎಂದು ಟೀಕಿಸಿದ್ದಾರೆ.

ಕೃಷ್ಣಮಣಿ

Tags: BJPbjpkarnatakabsbommaiBSYcmbommaiCongress PartycongresssctraviDKShivakumardrashawthnarayandrsudhakarKPCCmuniratantMuniratnananjegowdaRAshokrashokesiddaramaiahurigowdaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉರಿಗೌಡ, ನಂಜೇಗೌಡ ವಿಚಾರದಲ್ಲಿ ಸಿ.ಟಿ ರವಿ ಹೊಸ ರಾಗ : ದಾಖಲೆ ಸದ್ಯದಲ್ಲೇ ತೋರಿಸುತ್ತೇವೆಂದು ಸವಾಲು

Next Post

ಕೆ.ಆರ್‌ ಕ್ಷೇತ್ರ – ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra – Ticket

Related Posts

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
0

ಅಂದರ್-ಬಾಹರ್ ನಲ್ಲಿ ತೊಡಗಿದ್ದವರನ್ನ ಬೇಟೆಯಾಡಿದ ಖಾಕಿ ಗದಗ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ ಗದಗ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪೊಲೀಸರ ದಾಳಿ ಗದಗ ಎಸ್ಪಿ ರೋಹನ್ ಜಗದೀಶ್...

Read moreDetails
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
Next Post
ಕೆ.ಆರ್‌ ಕ್ಷೇತ್ರ – ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra – Ticket

ಕೆ.ಆರ್‌ ಕ್ಷೇತ್ರ - ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra - Ticket

Please login to join discussion

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada