ಬೆಂಗಳೂರು / ಶಿವಮೊಗ್ಗ : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು ಈಗಾಗಲೇ ಸಾಕಷ್ಟು ಅಭ್ಯರ್ಥಿಗಳ ಹಣೆ ಬರಹ ಬಯಲಾಗಿದೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪ್ರಯಾಸದ ಗೆಲುವು ದಾಖಲಿಸಿದ್ದಾರೆ .
ಬೆಳಗ್ಗೆಯಿಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಹಿನ್ನಡೆ ಅನುಭವಿಸಿದ್ದ ಮುನಿರತ್ನ ಕೊನೆಯ ಸುತ್ತಿನ ಮತ ಎಣಿಕೆ ವೇಳೆ 12 ಸಾವಿರ ಮತಗಳ ಅಂತರದಿಂದ ಪ್ರಯಾಸದ ಗೆಲುವು ಕಂಡಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಇಳಿದಿದ್ದ ಕುಸುಮಾ ಮನಿರತ್ನಗೆ ಟಫ್ ಫೈಟ್ ಕೊಟ್ಟಂತಾಗಿದೆ.
ಇನ್ನು ಶಿಕಾರಿಪುರ ಕ್ಷೇತ್ರದಲ್ಲಿ ಯಡಿಯೂರಪ್ಪ ಕ್ಷೇತ್ರತ್ಯಾಗ ವರ್ಕೌಟ್ ಆಗಿದೆ. 11 ಸಾವಿರ ಮತಗಳ ಅಂತರದಲ್ಲಿ ಬಿವೈ ವಿಜಯೇಂದ್ರ ಗೆಲುವು ದಾಖಲಿಸುವ ಮೂಲಕ ಶಿಕಾರಿಪುರದ ನೂತನ ಶಾಸಕ ಎನಿಸಿದ್ದಾರೆ.