ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಕೇಸ್ನಲ್ಲಿ ಜೈಲುಪಾಲಾಗಿದ್ದ ಶಾಸಕ ಮುನಿರತ್ನಾರನ್ನ (MLA muniratna) ಇದೀಗ ಪೋಲಿಸರು ಬಾಡಿ ವಾರೆಂಟ್ (Body warrent) ಮೇಲೆ ಮತ್ತೆ ವಶಕ್ಕೆ ಪಡೆದಿದ್ದಾರೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಗ್ಗಲೀಪುರ ಪೊಲೀಸರು (Kaggalipura polie) ಶಾಸಕ ಮುನಿರತ್ನರನ್ನ ಕಗ್ಗಲಿಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪರಪ್ಪನ ಅಗ್ರಹಾರ (Parappana agrahara) ಜೈಲಿನಿಂದ, ಜಾಮೀನಿನ ಮೇಲೆ ರೀಲಿಸ್ ಆದ ತಕ್ಷಣ ಮುನಿರತ್ನರನ್ನ ವಶಕ್ಕೆ ಪಡೆದ ಡಿವೈಎಸ್ಪಿ ದಿನಕರ್ ಶೆಟ್ಟಿ (Dysp dinakar shetty) ಮುನಿರತ್ನರನ್ನ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ.
ಇದಾದ ಬಳಿಕ ಅವರಿಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದ್ದು, ಕೆಲವೇ ಗಂಟೆಗಳಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ,ಆ ಬಳಿಕ ಅತ್ಯಾಆರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕರನ್ನ 10 ದಿನ ಕಸ್ಟಡಿಗೆ ಕೇಳಲಿದ್ದಾರೆ. ಹೀಗಾಗಿ ಮುನಿರತ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೀತಿದ್ಯಾ ಎಂಬ ಅನುಮಾನಗಳು ಸುಳಿದಾಡಿದೆ.