ಗುರುವಾರ ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು ಈ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ.
ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ಮುನಿರತ್ನ ಚುನಾವಣೆ ಹೊಸ್ತಿಲಲ್ಲಿ ದಿನನಿತ್ಯ ಪ್ರತಿಭಟನೆಗಳು ನಡೆಯುತ್ತಿರುತ್ತವೆ. ಆಗಸ್ಟ್ 26ರಂದು ಕಾಂಗ್ರೆಸ್ನವರು ಪ್ರತಿಭಟನೆ ಕರೆದಿರುವುದನ್ನು ನೋಡಿದರೆ ಸಿದ್ದರಾಮ್ಯ ಕಡೆಯವರೇ ಉದ್ದದೇಶಪೂರ್ವಕವಾಗಿ ಮೊಟ್ಟೆ ಎಸೆದಿರಬಹುದಲ್ಲವಾ ಎಂದು ಶಂಕಿಸಿದ್ದಾರೆ.
ಪ್ರತಿಭಟನೆ ನಡೆಸಲೆಂದೇ ವಿವಾದ ಸೃಷ್ಟಿಸಿದ್ದಾರೆ ಇವರಿಗೆ ಸರ್ಕಾರದ ವಿರುದ್ದ ಮಾತನಾಡಲು ಯಾವುದೇ ವಿಚಾರ ಸಿಗುತ್ತಿಲ್ಲ ಹೀಗಾಗಿ ಸಣ್ಣ ಸಣ್ಣ ವಿಚಾರಕ್ಕೆ ಪ್ರತಿಭಟನೆ ನಡೆಸುತ್ತಾರೆ ಈಗ ಮೊಟ್ಟೆಯ ಸರದಿ ಎಂದು ಟೀಕಿಸಿದ್ದಾರೆ.
ಮೊಟ್ಟೆ ಪ್ರಕರಣವನ್ನ ಪೊಲೀಸ್ ವೈಫಲ್ಯ ಎಂದು ಹೇಳಲು ಸಾಧ್ಯವಿಲ್ಲ ಗುಂಪಿನಲ್ಲಿ ಹತ್ತು ಜನರು ನಿಂತಿರುವಾಗ ಯಾರೋ ಒಬ್ಬರು ಮೊಟ್ಟೆ ಅಥವಾ ಕಲ್ಲು ಎಸೆಯುವಂತಹ ಘಟನೆಗಳು ನಡೆಯುತ್ತವೆ ಎಂದಿದ್ದಾರೆ.
ನಾನು ಮನಸ್ಸು ಮಾಡಿದರೆ ಬಿಜೆಪಿಯವರು ಒಡಾಡದಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ ಇದು ಹೆದರಿಸುವ ತಂತ್ರವಾಗಿದೆ. ಮೊದಲು ತಮ್ಮ ಪ್ರವಾಸದ ವೇಳಾಪಟ್ಟಿಯನ್ನು ಕಳುಹಿಸಿಕೊಟ್ಟರೆ ಭದ್ರತೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಶಾಂತಿಯುತ ರಾಜಕಾರಣಕ್ಕೆ ರಾಜ್ಯ ಹೆಸರುವಾಸಿಯಾಗಿದೆ. ಸಿದ್ದರಾಮಯ್ಯರ ಮೇಲೆ ಮೊಟ್ಟೆ ಎಸೆದಿರುವುದು ತಪ್ಪು ತಪ್ಪಿತಸ್ಥರು ಯಾರೇ ಇದ್ದರು ಅವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಜಗಳವಾಗುವುದು ಸಾಮಾನ್ಯ. ಆದರೆ, ವಿರೋಧ ಪಕ್ಷದ ನಾಯಕರಿಗೆ ಈಗೆ ಮಾಡಬಾರದಿತ್ತು ಎಂದು ಬೇಸರಿಸಿದ್ದಾರೆ.