• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದೂ ಕಾರ್ಯಕರ್ತನ ಹತ್ಯೆ.. ಮಂಗಳೂರು ಬಂದ್​ಗೆ ಕರೆ.. ನಿಷೇಧಾಜ್ಞೆ ಜಾರಿ

ಕೃಷ್ಣ ಮಣಿ by ಕೃಷ್ಣ ಮಣಿ
May 2, 2025
in ಕರ್ನಾಟಕ, ಶೋಧ
0
ಹಿಂದೂ ಕಾರ್ಯಕರ್ತನ ಹತ್ಯೆ.. ಮಂಗಳೂರು ಬಂದ್​ಗೆ ಕರೆ.. ನಿಷೇಧಾಜ್ಞೆ ಜಾರಿ
Share on WhatsAppShare on FacebookShare on Telegram

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಕೊಲೆಗಾರರಿಗೆ ಬುರ್ಖಾಧಾರಿ ಮಹಿಳೆ ಬೆಂಬಲ ಮಾಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಟ್ರಾಫಿಕ್ ಬಂದ್ ಮಾಡಿ ಕೊಲೆಗಾರರು ಇದ್ದ ಕಾರನ್ನು ಕಳುಹಿಸಿಕೊಟ್ಟಿದ್ದಾರೆ ಸ್ಥಳೀಯ ವ್ಯಕ್ತಿ. ಇನ್ನೂ ಸುಹಾಸ್ ಶೆಟ್ಟಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ರೂ ಸ್ಥಳೀಯರು ನೆರವಾಗದೆ ಇರುವ ಸಂಗತಿ ಮೊಬೈಲ್ ಕ್ಯಾಮೆರಾದಲ್ಲಿ ಗೊತ್ತಾಗಿದೆ. ಕೊಲೆಯಲ್ಲಿ ಸ್ಥಳೀಯರ ಕೈವಾಡ ಇರುವುದೂ ದೃಶ್ಯದಲ್ಲಿ ಗೊತ್ತಾಗಿದೆ.

ADVERTISEMENT

ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದ‌ಕ್ಷಿಣ ಕನ್ನಡ ಜಿಲ್ಲೆ ಬಂದ್ ಆಗಿದೆ. ಎಲ್ಲಾ ವ್ಯಾಪಾರ ವಹಿವಾಟು, ವಾಹನ ಸಂಚಾರ ಬಂದ್​ಗೆ ಕರೆ ಕೊಡಲಾಗಿದೆ. ಸುಹಾಸ್ ಶೆಟ್ಟಿ ಹಾಗೂ ಐದು ಜನ ಹಿಂದೂ ಕಾರ್ಯಕರ್ತರು ಕಾರಿನಲ್ಲಿ ಹೋಗುತ್ತಿದ್ದಾಗ ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು ಸುಹಾಸ್ ಹತ್ಯೆ ಮಾಡಿದ್ದಾರೆ. ಇದೊಂದು ಪೂರ್ವ ಯೋಜಿತ ಹತ್ಯೆ, ಇದರ ಹಿಂದೆ ನಿಷೇಧಿತ ಪಿಎಫ್ಐ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಬಂದ್​ಗೆ ವಿಹೆಚ್​ಪಿ, ಭಜರಂಗದಳ ಹಾಗೂ ಹಿಂದೂ ಸಂಘಟನೆಗಳು ಸಾಥ್ ನೀಡಿವೆ.

ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್​ಗೆ ಕರೆ ನೀಡಿದೆ. ಬಂದ್ ಕರೆ‌ ನೀಡಿರುವ ಹಿನ್ನೆಲೆಯಲ್ಲಿ, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್​ ಆಯುಕ್ತರು ಆದೇಶ ಮಾಡಿದ್ದಾರೆ. BNS ಕಲಂ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆವರೆಗೆ 4 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ವಾಲ್.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಿರುವ ನೀಡಿದ್ದು, ಮಂಗಳೂರು ನಗರದಲ್ಲಿ ಖಾಸಗಿ ಬಸ್ ಸಂಚಾರ ಬಂದ್ ಆಗಿದೆ. ಖಾಸಗಿ ಬಸ್​ಗಳು ರಸ್ತೆಗೆ ಇಳಿದಿಲ್ಲ. ಕಾರಿಂಜದ ಪುಳಿಮಜಲು ಎಂಬಲ್ಲಿಗೆ ಸುಹಾಸ್ ಶೆಟ್ಟಿ ಮೃತ ದೇಹ ಮೆರವಣಿಗೆ ನಡೆಯಲಿರುವ ಕಾರಣಕ್ಕೆ ಹೋಟೇಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಪೊಲೀಸರು ಕೂಡ ಬಿಗಿಬಂದೋಬಸ್ತ್​ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್​ ಘೋಷಣೆ ಆಗಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಮೃತದೇಹ ಮೆರವಣಿಗೆಗೆ ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ಮಂಗಳೂರಿನ ಹಂಪನಕಟ್ಟೆ ಬಳಿ ಬಸ್​ಗೆ ಕಲ್ಲುತೂರಾಟ ಮಾಡಲಾಗಿದೆ. ಮೂರು ಬಸ್ಸಿಗೆ ಕಲ್ಲು ತೂರಾಟದಿಂದ ಹಾನಿ ಸಂಭವಿಸಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಹಿಂದೂ ಸಂಘಟನೆಗಳ ಕರೆ ನೀಡಿದ್ದರೂ ಸಂಚಾರ ನಿಲ್ಲಿಸದ ಬಸ್​ಗಳಿಗೆ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿವೆ.

Tags: anti-beef activistbjp activist murdered mangalurubjp mangalore rallybjp yuva morcha worker murderdeepak rao murderdeepak rao murder mangalorehindi activist murderhindu activisthindu activist killedhindu activist killinghindu activist murderkatipalla murderMangaloremangalore murdermangalore murdered bjp activist deepak raomangalore newsmurderpopular front murders mangalorepraveen nettaru murder
Previous Post

ಮಕ್ಕಳೇ ಭಯ ಬೇಡ.. SSLC ಅಷ್ಟೇ.. ಇನ್ನೂ ಅವಕಾಶ ಇದೆ.. ಧೈರ್ಯವಾಗಿರಿ..

Next Post

ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
Next Post
ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​

ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada