ಮುರುಘಾಮಠ ಸ್ವಾಮಿ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ತನಿಖೆ ದೃಷ್ಟಿಯಿಂದ ಈಗ ಈ ಕುರಿತು ಮಾತನಾಡಲು ಆಗಲ್ಲ, ತನಿಖೆ ಬಳಿಕ ಸತ್ಯ ಹೊರಬಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘ ಶ್ರೀಗಳ ವಿರುದ್ಧ ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಈ ಮಾತನಾಡಲು ಆಗಲ್ಲ. ತನಿಖೆ ಬಳಿಕ ಸತ್ಯ ಹೊರಬಲಿದೆ ಎಂದು ಹೇಳಿದ್ದಾರೆ.

ಇನ್ನು ಮುರುಘಾಮಠದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಸಂತ್ರಸ್ತ ಇಬ್ಬರು ಬಾಲಕಿಯರನ್ನು ಪೊಲೀಸರ ಭದ್ರತೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಮೈಸೂರಿನಿಂದ ಚಿತ್ರದುರ್ಗಕ್ಕೆ ಕಳಿಸಲಾಗಿದೆ. ಸದ್ಯ ಇಬ್ಬರು ಬಾಲಕಿಯರು ಬಾಲಭವನದಲ್ಲಿದ್ದಾರೆ. ಇಂದು ಜಡ್ಜ್ ಎದುರು ಹೇಳಿಕೆ ನೀಡುವ ಸಾಧ್ಯತೆ ಇದೆ. ನಂತರ ಬಾಲಕಿಯರಿಗೆ ಮೆಡಿಕಲ್ ಟೆಸ್ಟ್ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕೇಸ್ ಕೂಡ ಮೈಸೂರಿನಿಂದ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದ್ದು ಅಲ್ಲಿಯೇ ಪೂರ್ಣ ತನುಖೆ ನಡೆಯಲಿದೆ.