![](https://pratidhvani.com/wp-content/uploads/2024/04/download-28.jpeg)
ಮುಸ್ಲೀಂ ಬಾಂಧವರಿಗೆ ಬಿಜೆಪಿಯವರು ಚಿತ್ರಹಿಂಸೆ ನೀಡುತ್ತಿದ್ದಾರೆ. ಮಾನಸಿಕವಾಗಿ ಹಿಂಸೆ ಕೊಟ್ಟು ದೇಶದಿಂದ ಬಿಟ್ಟು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದರು.ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ನಮ್ಮದು ಸರ್ವಜನಾಂಗದ ಶಾಂತಿಯ ತೋಟ. ಆದರೆ ಮುಸ್ಲಿಂ ಬಾಂಧವರಿಗೆ ಬಿಜೆಪಿ ಮಾನಸಿಕ ಹಿಂಸೆ ನೀಡಿ ದೇಶ ಬಿಟ್ಟು ಓಡಿಸಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.ರಾಜ್ಯಕ್ಕೆ ಬಿಜೆಪಿಯವರು ಏನು ಮಾಡಲಿಲ್ಲ. ಡಬಲ್ ಇಂಜಿನ್ ಸರ್ಕಾರ ಫೇಲ್ ಆಗಿಹೋಯ್ತು ಬಿಜೆಪಿ ದೊಡ್ಡ ಇಂಜಿನ್ ಫೇಲ್ ಆಗಿ ಹೋಯಿತು ಎಂದು ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ರಾಜ್ಯಾದ್ಯಂತ ‘ಕೇಸರಿ’ ಪ್ರೊಟೆಸ್ಟ್..
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆಗೆ ಬಿಜೆಪಿ ಖಂಡನೆ ವ್ಯಕ್ತಮಾಡ್ತಿದೆ.ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿರುವ ‘ಕೇಸರಿ’ ಪಡೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡ್ತಿದೆ.ಮೈಸೂರಿನಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆಸಲಾಯ್ತು.ಸಿಎಂ ತವರಿಂದಲೇ ಹೋರಾಟಕ್ಕೆ ಮುಂದಾದ ವಿಜಯೇಂದ್ರ, ಕೈ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.